ದಕ್ಷಿಣ ಕನ್ನಡ/ಉತ್ತರ ಕನ್ನಡ: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಇಂದು (ಗುರುವಾರ) ಅಂಗನವಾಡಿ, ಶಾಲೆ ಹಾಗೂ ಪ್ರೌಢಶಾಲೆಗಳಿಗೆ ರಜೆ ನೀಡಲಾಗಿದೆ. ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆಯಂತೆ, ಇದೇ ಹವಾಮಾನ ಪರಿಸ್ಥಿತಿಯ ಮುಂದುವರೆಯುವ ಸೂಚನೆಯಿದ್ದು, ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಆರೆಂಜ್ ಅಲರ್ಟ್ ಘೋಷಣೆಯಾಗಿದೆ. ಮುಂಜಾಗ್ರತಾ ಕ್ರಮವಾಗಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಈ ಕೆಳಗಿನಂತೆ ತುರ್ತು ಕ್ರಮಗಳನ್ನು ಕೈಗೊಂಡಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
Read Moreಅಕ್ಟೋಬರ್ 2ರಂದು ರಿಲೀಸ್ ಆಗಲಿರುವ ‘ಕಾಂತಾರ: ಚಾಪ್ಟರ್ 1’ (Kantara: Chapter 1) ಸಿನಿಮಾಗೆ ಸಾಲು ಸಾಲು ಹಿನ್ನಡೆ ಆಗುತ್ತಿದೆ. ಈ ಮೊದಲು ಕಲಾವಿದರು ತೆರಳುತ್ತಿದ್ದ ಬಸ್ ಅಪಘಾತಕ್ಕೆ ಒಳಗಾಯಿತು. ಆ ಬಳಿಕ ತಂಡದ ಇಬ್ಬರು ಆರ್ಟಿಸ್ಟ್ಗಳು ಸಾವನಪ್ಪಿದರು. ಈಗ ಚಿತ್ರದ ಜೂನಿಯರ್ ಆರ್ಟಿಸ್ಟ್ ವಿಜು ವಿಕೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಈ ರೀತಿಯ ಕೆಟ್ಟ ಘಟನೆಗಳು ಸಾಲು ಸಾಲಾಗಿ ನಡೆಯುತ್ತಿರುವುದನ್ನು ನೋಡಿದರೆ ದೈವದ ಎಚ್ಚರಿಕೆ ನಿಜವಾಗುತ್ತಿದೆಯೇ ಎನ್ನುವ ಪ್ರಶ್ನೆ ಮೂಡಿದೆ.
Read Moreಬಂಟ್ವಾಳ :ತುಳುಕೂಟ ಬಂಟ್ವಾಳದ ಆಶ್ರಯದಲ್ಲಿ ಇದೇ ಬರುವ ಜೂ. 20,21,22 ರಂದು ಬಿ.ಸಿ.ರೋಡು ಸ್ಪರ್ಶಾ ಕಲಾ ಮಂದಿರದಲ್ಲಿ ನಡೆಯುವ "ತುಳುವೆರೆನ ತುಳುನಾಡ ಸಂತೆ" ಮಾವು ಹಲಸುಗಳೊಂದಿಗೆ ಸಾಹಿತ್ಯ ಸಾಂಸ್ಕೃತಿಕ ರಂಗಿನ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭವು ಬಿ.ಸಿ.ರೋಡು ಶ್ರೀ ರಕ್ತೇಶ್ವರಿ ದೇವಸ್ಥಾನದಲ್ಲಿ ನಡೆಯಿತು. ಪೂಜೆ ನೆರವೇರಿಸಿ ತುಳುಕೂಟದ ಅಧ್ಯಕ್ಷರಾದ ಸುದರ್ಶನ್ ಜೈನ್ ಆಮಂತ್ರಣ ಬಿಡುಗಡೆಗೊಳಿಸಿದರು.
Read Moreಬಂಟ್ವಾಳ :ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಮೂಲಕ ಬಂಟ್ವಾಳ ತಾಲ್ಲೂಕಿನ ವಾಮದಪದವು ಸದಾಶಿವ ಪೂಜಾರಿಯವರ ಮನೆಯಲ್ಲಿ ರೈತರಿಗೆ ರೈತ ಕ್ಷೇತ್ರ ಪಾಠ ಶಾಲೆ ಮೂಲಕ ಯಂತ್ರಶ್ರೀ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮದಲ್ಲಿ ಕೃಷಿ ವಿಭಾಗ ಕೇಂದ್ರ ಕಛೇರಿಯ ಪ್ರಾದೇಶಿಕ ನಿರ್ದೇಶಕರಾದ ಮನೋಜ್ ಮೆನೆಜಸ್ ರವರು ಮಾತನಾಡಿ ಶ್ರೀ ಕ್ಷೇತ್ರದ ಮೂಲಕ ಮಂಗಳೂರುನಿಂದ ಗೋವ ತನಕ ದಾವಣಗೆರೆ ಯಿಂದ ಚಾಮರಾಜನಗರ ತನಕ ಯಂತ್ರಶ್ರೀ ಕಾರ್ಯಕ್ರಮವನ್ನು ನಡೆಸಲಾಗುತ್ತದೆ. ರೈತರು ರಬ್ಬರ್ ಮತ್ತು ಅಡಿಕೆಯನ್ನು ಮಾತ್ರ ಬೆಳೆದರೆ ಊಟ ಮಾಡಲು ಅನ್ನ ಬರುವುದಿಲ್ಲ. ಇದಕ್ಕೆ ಪರ್ಯಾಯವಾಗಿ ಸಂಸ್ಥೆಯಿಂದ 2010 ರಲ್ಲಿ ಶ್ರೀ ಪದ್ದತಿ ಕಾರ್ಯಗಳನ್ನು ಪ್ರಾರಂಭಿಸಲಾಯಿತು ಎಂದು ತಿಳಿಸಿದರು.
Read Moreಗುಜರಾತ್ನ ಅಹಮದಾಬಾದ್ನಲ್ಲಿ ಇಂದು ಮದ್ಯಾಹ್ನ ಏರ್ ಇಂಡಿಯಾದ ಪ್ರಯಾಣಿಕ ವಿಮಾನ ಬೋಯಿಂಗ್ 737 ಅಪಘಾತಕ್ಕೀಡಾಗಿದ್ದು,ಟೇಕ್ ಅಪ್ ಆದ ಕೆಲವೇ ಕ್ಷಣಗಳಲ್ಲಿ ಪತನಗೊಂಡಿದೆ.
Read More