ದೇಶ ವಿದೇಶ

ಕರಾವಳಿ

More News

ತುಂಬೆ :ಶ್ರೀ ಚೀರುಂಭ ಭಗವತೀ ತೀಯಾ ಸೇವಾ ಸಮಿತಿ ವಾರ್ಷಿಕ ಸಭೆ ಹಾಗೂ ಸಮಿತಿ ರಚನೆ.

ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ಸುವರ್ಣ ತರವಾಡು ಮನೆಯಲ್ಲಿ ಶ್ರೀ ಚೀರುಂಭ ಭಗವತೀ ತೀಯಾ ಸಮಾಜ ಸೇವಾ ಸಮಿತಿ ತುಂಬೆ- ಪುದು (ಮೇರಮಜಲು, ಕೊಡ್ಮಾನ್, ಅಡ್ಯಾರ್) ಇದರ ವಾರ್ಷಿಕ ಸಭೆಯು ಅ.12ರಂದು ಜರುಗಿತು.

Read More

ರಾಮಲ್ ಕಟ್ಟೆ :ಬೈಕ್ ಸ್ಕಿಡ್, ದ್ವಿಚಕ್ರ ವಾಹನ ಸವಾರ ರಸ್ತೆಗೆ ಬಿದ್ದು ಮೃತ್ಯು.

ಬಂಟ್ವಾಳ: ನಿಯಂತ್ರಣ ತಪ್ಪಿ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡ ದ್ವಿಚಕ್ರ ವಾಹನ ಸವಾರನೋರ್ವ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ತುಂಬೆ ರಾಮಲ್ ಕಟ್ಟೆ ಎಂಬಲ್ಲಿ ನಡೆದಿದೆ.

Read More

ತುಂಬೆ: ಗ್ರಾ ಪಂ ನಲ್ಲಿ ರೇಬಿಸ್‌ ರೋಗ ನಿರೋಧಕ ಲಸಿಕಾ ಶಿಬಿರಕ್ಕೆ ಚಾಲನೆ

ಬಂಟ್ವಾಳ :ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್‌ ಮಂಗಳೂರು ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಬಂಟ್ಟಾಳ ತಾಲೂಕು ತುಂಬೆ ಗ್ರಾಮ ಪಂಚಾಯತ್‌ ಇದರ ಜಂಟಿ ಆಶ್ರಯದಲ್ಲಿ ಸಾಕು ನಾಯಿ ಹಾಗೂ ಬೆಕ್ಕುಗಳಿಗೆ ರೇಬಿಸ್‌ ರೋಗ ನಿರೋಧಕ ಲಸಿಕಾ ಶಿಬಿರವು ಅ.15ನೇ ಬುಧವಾರ ಬೆಳಿಗ್ಗೆ ತುಂಬೆ ಗ್ರಾ ಪಂ ಕಛೇರಿ ಬಳಿ ಉದ್ಘಟನೆಗೊಂಡಿತು. ಬಳಿಕ ವೈದ್ಯಧಿಕಾರಿಗಳ 3 ತಂಡಗಳನ್ನು ಮಾಡಿ15 ಕಡೆಗಳಲ್ಲಿ ಶಿಬಿರವನ್ನು ನಡೆಸಲಾಯಿತು.

Read More

ಬಿ ಸಿ ರೋಡ್: ತುಟ್ಟಿಭತ್ತೆ ಹಾಗೂ ಕನಿಷ್ಠ ಕೂಲಿ ಆಗ್ರಹಿಸಿ ಬೃಹತ್ ಹಕ್ಕೊತ್ತಾಯ ಚಳವಳಿ. ಬೀಡಿ ಕಾರ್ಮಿಕರ ಬೇಡಿಕೆಗಳಿಗೆ ಸ್ಪಂದಿಸದಿದ್ದಲ್ಲಿ ಅಹೋರಾತ್ರಿ ಧರಣಿ :ಸೀತಾರಾಮ ಬೇರಿಂಜ

ಬಂಟ್ವಾಳ : 2024ರಿಂದ ಅಧಿಸೂಚಿಸಿದ ಕನಿಷ್ಠ ಕೂಲಿ ಹಾಗೂ ತುಟ್ಟಿಭತ್ತೆಯನ್ನು ಬೀಡಿ ಕಾರ್ಮಿಕರಿಗೆ ಪಾವತಿಸುವ ಜೊತೆಗೆ ಬಾಕಿ ಇರುವ ಆರು ವರ್ಷಗಳ ಕನಿಷ್ಠ ಕೂಲಿ ಪಾವತಿಗೆ ಆಗ್ರಹಿಸಿ ಎಐಟಿಯುಸಿ ಮತ್ತು ಸಿಐಟಿಯು ಬಂಟ್ವಾಳ ತಾಲೂಕಿನ ಬೀಡಿ ಕಾರ್ಮಿಕ ಸಂಘಟನೆಗಳ ನೇತೃತ್ವದಲ್ಲಿ ಹಕ್ಕೊತ್ತಾಯ ಚಳವಳಿ ಬಿ ಸಿ ರೋಡಿನಲ್ಲಿ ನಡೆಯಿತು

Read More

ಧರ್ಮಸ್ಥಳ: ನೂರಾರು ಶವಗಳ ಹೂತಿಟ್ಟ ಕೇಸ್ – ಕೋರ್ಟ್‌ನಲ್ಲಿ ಹೊಸ ಕಥೆ ಬಿಚ್ಚಿಟ್ಟ `ಚಿನ್ನಯ್ಯ

ಮಂಗಳೂರು: ಧರ್ಮಸ್ಥಳದಲ್ಲಿ (Dharmasthala) ನೂರಾರು ಶವ ಹೂತಿಟ್ಟ ಪ್ರಕರಣದ ತನಿಖೆ ಮುಂದುವರೆದಿದೆ. ಆರೋಪಿ ಚಿನ್ನಯ್ಯ ನ್ಯಾಯಾಲಯದಲ್ಲಿ ಹೊಸ ಕಥೆ ಬಿಚ್ಚಿಟ್ಟಿದ್ದು, ಎಸ್‌ಐಟಿ (SIT) ಅಧಿಕಾರಿಗಳನ್ನೇ ತಬ್ಬಿಬ್ಬಾಗಿಸಿದೆ. ಶವ ಹೂತ ರಹಸ್ಯವನ್ನು ಚಿನ್ನಯ್ಯ ನ್ಯಾಯಾಲಯದಲ್ಲಿ ತಪ್ಪೊಪ್ಪಿಗೆ ಹೇಳಿಕೆ ನೀಡುವ ವೇಳೆ ಬಾಯಿಬಿಟ್ಟಿದ್ದಾನೆ ಎನ್ನಲಾಗಿದೆ. ಬೆಳ್ತಂಗಡಿ ನ್ಯಾಯಾಲಯದಲ್ಲಿ ಚಿನ್ನಯ್ಯ ಹೇಳಿಕೆ ನೀಡುವ ವೇಳೆ ಒಂದೇ ಜಾಗದಲ್ಲಿ ಹತ್ತು ಹೆಣಗಳನ್ನು ಹೂತಿದ್ದಾಗಿ ಹೊಸ ಕಥೆಯನ್ನು ಹೇಳಿದ್ದಾನೆ. ಎಸ್‌ಐಟಿ ವಿಚಾರಣೆ ವೇಳೆ ಈ ಮಾಹಿತಿಯನ್ನು ನೀಡದೆ ಇರುವುದು ಅಧಿಕಾರಿಗಳಿಗೆ ಆಶ್ಚರ್ಯ ತಂದಿದೆ. ಚಿನ್ನಯ್ಯನ ಈ ಹೊಸ ಹೇಳಿಕೆ ಕೇಳಿ ಎಸ್‌ಐಟಿ ಅಧಿಕಾರಿಗಳೇ ಶಾಕ್ ಆಗಿದ್ದಾರೆ.

Read More