ಕರಾವಳಿ

More News

ದೀದಿ ಸೋಲಿಸಿದ ಬಿಜೆಪಿ ಅಭ್ಯರ್ಥಿ ಸುವೆಂದು ಅಧಿಕಾರಿ ಪಿಎಗೆ ಗುಂಡಿಕ್ಕಿ ಹತ್ಯೆ

ಕೋಲ್ಕತ್ತಾ: ಇತ್ತೀಚೆಗಷ್ಟೇ ಮುಕ್ತಾಯಗೋಂಡ ಬಂಗಾಳ ಚುನಾವಣೆಯಲ್ಲಿ ಮಮತಾ ಬ್ಯಾನರ್ಜಿ ಅವರನ್ನು ಸೋಲಿಸಿದ ಬಿಜೆಪಿ ಅಭ್ಯರ್ಥಿ ಸುವೇಂದು ಅಧಿಕಾರಿ (Suvendu Adhikari) ಅವರ ಆಪ್ತ ಸಹಾಯಕನ್ನ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಈ ಘಟನೆ ಬಂಗಾಳದಲ್ಲಿ ರಾಜಕೀಯ ಕೋಲಾಹಲ ಎಬ್ಬಿಸಿದ್ದು, ಉದ್ವಿಗ್ನತೆಗೂ ಕಾರಣವಾಗಿದೆ. ಸದ್ಯ 2 ಕ್ಷೇತ್ರಗಳಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಸುವೇಂದು ಸಿಎಂ ಹುದ್ದೆಯ ರೇಸ್‌ನಲ್ಲಿದ್ದಾರೆ.

Read More

ತಮಿಳುನಾಡು ಗೆದ್ದ ಟಿವಿಕೆಗೆ ವಿಶ್‌ ಮಾಡಿದ ಮೋದಿ, ರಾಹುಲ್‌ ಗಾಂಧಿಗೆ ಧನ್ಯವಾದ ತಿಳಿಸಿದ ವಿಜಯ್‌

ಚೆನ್ನೈ: ತಮಿಳುನಾಡು (Tamil Nadu) ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವು ದಾಖಲಿಸಿದ ಟಿವಿಕೆಗೆ (TVK) ಶುಭಾಶಯ ತಿಳಿಸಿದ ಪ್ರಧಾನಿ ನರೇಂದ್ರ ಮೋದಿ ಮತ್ತು ಲೋಕಸಭಾ ವಿಪಕ್ಷ ನಾಯಕ ರಾಹುಲ್‌ ಗಾಂಧಿಗೆ ಟಿವಿಕೆ ಮುಖ್ಯಸ್ಥ ವಿಜಯ್‌ (Vijay) ಧನ್ಯವಾದ ಅರ್ಪಿಸಿದ್ದಾರೆ.

Read More

ಬಂಟ್ವಾಳ: 'ಮಹಿಳಾ ಮೀಸಲಾತಿಗೆ ಬಿಜೆಪಿ ಇಬ್ಬಗೆ ನೀತಿ' ಕಾಂಗ್ರೆಸ್ ಪ್ರಚಾರ ಸಮಿತಿ ಲೇವಡಿ

ಬಂಟ್ವಾಳ: ದೇಶದಲ್ಲಿ ಮಹಿಳಾ ಮೀಸಲಾತಿ ಮಸೂದೆಗೆ ಕಾಂಗ್ರೆಸ್ ಅಡ್ಡಿ ಪಡಿಸುತ್ತಿದೆ ಎಂದು ಆರೋಪಿಸಿ ಮಹಿಳೆಯರಲ್ಲಿ ಕ್ಷಮೆಯಾಚಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರು ಉತ್ತರ ಪ್ರದೇಶದಲ್ಲಿ ನಡೆದಿರುವ ಅಪ್ರಾಪ್ತ ಯುವತಿಯ ಅತ್ಯಾಚಾರ ಸಹಿತ ಗುಜರಾತಿನಲ್ಲಿ ನಡೆದ ಗರ್ಭಿಣಿ ಮಹಿಳೆಯ ಮೇಲಿನ ಸಾಮೂಹಿಕ ಅತ್ಯಾಚಾರ ಹಾಗೂ ಮಣಿಪುರದಲ್ಲಿ ನಡೆದಿರುವ ಮಹಿಳೆಯರು ಮತ್ತು ಮಕ್ಕಳ ಹತ್ಯೆ ಬಗ್ಗೆ ಮೌನ ತಾಳುವ ಮೂಲಕ ಬಿಜೆಪಿ ಇಬ್ಬಗೆ ನೀತಿ ಜನತೆಗೆ ಚೆನ್ನಾಗಿ ತಿಳಿದಿದೆ ಎಂದು ಕಾಂಗ್ರೆಸ್ ಪ್ರಚಾರ ಸಮಿತಿ ಗ್ರಾಮಾಂತರ ಜಿಲ್ಲಾಧ್ಯಕ್ಷ ಮಹಮ್ಮದ್ ಆಲಿ ಪುತ್ತೂರು ಹೇಳಿದ್ದಾರೆ. ಇಲ್ಲಿನ ಬಿ.ಸಿ.ರೋಡಿನಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ' ಭೇಟಿ ಬಚಾವೋ, ಭೇಟಿ ಪಡಾವೋ' ಘೋಷಣೆ ಕೂಗುವ ಬಿಜೆಪಿ ಆಡಳಿತ ಹೊಂದಿರುವ ಯಾವ ರಾಜ್ಯಗಳಲ್ಲಿ ಮಹಿಳೆಯರು ಸುರಕ್ಷಿತವಾಗಿದ್ದಾರೆ...?' ಎಂದು ಅವರು ಪ್ರಶ್ನಿಸಿದರು.

Read More

ಬಿ.ಸಿ.ರೋಡು: ಕರಾವಳಿ ಕಲೋತ್ಸವ ಬಹು ಸಂಸ್ಕೃತಿ ಉತ್ಸವ ಮೆರವಣಿಗೆಗೆ ಚಾಲನೆ

ಬಂಟ್ವಾಳ: ಇಲ್ಲಿನ ಬಿ.ಸಿ.ರೋಡಿನಲ್ಲಿ ಚಿಣ್ಣರಲೋಕ ಮೋಕೆದ ಕಲಾವಿದೆರ್ ಮತ್ತು ಚಿಣ್ಣರ ಲೋಕ ಸೇವಾ ಬಂಧು ವತಿಯಿಂದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಭಾಗಿತ್ವದಲ್ಲಿ ನಡೆಯಲಿರುವ ಐದು ದಿನಗಳ 'ಕರಾವಳಿ ಕಲೋತ್ಸವ' ಬಹು ಸಂಸ್ಕೃತಿ ಉತ್ಸವ ಮೆರವಣಿಗೆಗೆ ಬಿ.ಸಿ.ರೋಡು ಅನ್ನಪೂರ್ಣೇಶ್ವರಿ ದೇವಸ್ಥಾನ ಬಳಿ ತಹಶೀಲ್ದಾರ್ ಕೆ.ಮಂಜುನಾಥ್ ಸೋಮವಾರ ಸಂಜೆ ಚಾಲನೆ ನೀಡಿದರು. ಇದೇ ವೇಳೆ ಮಹಿಳೆಯರ 'ಸೀರೆ ನಡಿಗೆ' ಸ್ಪರ್ಧೆಗೆ ಗೇರು ಅಭಿವೃದ್ಧಿ ನಿಗಮ ಅಧ್ಯಕ್ಷೆ ಮಮತಾ ಎಸ್.ಗಟ್ಟಿ ಚಾಲನೆ ನೀಡಿದರು. ಮೆರವಣಿಗೆಯಲ್ಲಿ ಚೆಂಡೆ, ಕೊಂಬು, ಗೊಂಬೆ ಕುಣಿತ, ವೀರಗಾಸೆ, ಡೊಳ್ಳು ಕುಣಿತ, ದಫ್ ನೃತ್ಯ ಗಮನ ಸೆಳೆಯಿತು.

Read More

ಸುಜೀರು :ವೈದ್ಯನಾಥ ಕ್ರಿಕೆಟರ್ಸ್  ರಜತ ಮಹೋತ್ಸವ ಸಂಭ್ರಮ ಸಮಾರಂಭ. ಭಾರತೀಯ ಸಂಸ್ಕೃತಿ ಪರಂಪರೆ ಉಳಿಸಲು ಸಂಘಟನೆ ಅಗತ್ಯ :ಸತೀಶ ಕುಂಪಲ.

ಬಂಟ್ವಾಳ :ಯಾವುದೇ ಸಂಘಟನೆಯನ್ನು ಪ್ರಾರಂಭಿಸುವುದು ಸುಲಭ,ಉಳಿಸುವುದು ಕಷ್ಟ ಆದರೆ ವೈದ್ಯನಾಥ ಕ್ರಿಕೆಟರ್ಸ್ ಸಂಘಟನೆಯು ನಮ್ಮ ಧರ್ಮ, ಸಂಸ್ಕೃತಿ ಸಂಸ್ಕಾರದ ಮೇಲಿನ ನಂಬಿಕೆ, ಪ್ರೀತಿಯಿಂದ ಕ್ರಿಕೆಟ್ ಆಟದೊಂದಿಗೆ ಈ ಭಾಗದಲ್ಲಿ 25 ವರ್ಷಗಳಿಂದ ಸಂಘಟನಾತ್ಮಕವಾಗಿ ಸಾಮಾಜಿಕ ಧಾರ್ಮಿಕವಾಗಿ ತೊಡಗಿಸಿಕೊಂಡು ರಜತ ಸಂಭ್ರಮದ ಆಚರಿಸುವುದು ಹೆಮ್ಮೆಯ ವಿಚಾರ, ಭಾರತೀಯ ಸಂಸ್ಕೃತಿ ಪರಂಪರೆ ಉಳಿಸಲು ಸಂಘಟನಾ ಶಕ್ತಿ ಅಗತ್ಯ ಎಂದು ಬಾ ಜ ಪಾ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಹೇಳಿದರು.

Read More