ದೇಶ ವಿದೇಶ

ಕರಾವಳಿ

More News

ಬಿ.ಸಿ.ರೋಡು: ಕಾಂಗ್ರೆಸ್ ಪ್ರತಿಭಟನೆ ಕೇಂದ್ರ ಸರ್ಕಾರ ವಿರುದ್ಧ ಘೋಷಣೆ. ಸರ್ಕಾರ ಇಂಧನ ಬೆಲೆ ಏರಿಕೆ ಮೂಲಕ ಜನತೆಗೆ 'ಅಚ್ಚೇ ದಿನ್' :ಮಾಜಿ ಸಚಿವ ರೈ

ಬಂಟ್ವಾಳ:ದೇಶದಲ್ಲಿ ಪದೇ ಪದೇ ನೀಟ್ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆಯಾಗುತ್ತಿದ್ದರೂ ಯಾವುದೇ ರೀತಿಯ ತನಿಖೆ ನಡೆಸಿ ಪರಿಹಾರ ಕಂಡುಕೊಳ್ಳುವಲ್ಲಿ ವಿಫಲವಾಗಿರುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ ಡಿ ಎ ಸರ್ಕಾರ ಇಂಧನ ಬೆಲೆ ಏರಿಕೆ ಮೂಲಕ ಜನತೆಗೆ 'ಅಚ್ಚೇ ದಿನ್' ನೀಡಿದ್ದಾರೆ ಎಂದು ಮಾಜಿ ಸಚಿವ, ಕೆಪಿಸಿಸಿ ಉಪಾಧ್ಯಕ್ಷ ಬಿ.ರಮಾನಾಥ ರೈ ಲೇವಡಿ ಮಾಡಿದ್ದಾರೆ. ಇಲ್ಲಿನ ಬಿ.ಸಿ.ರೋಡು ರಾಷ್ಟ್ರೀಯ ಹೆದ್ದಾರಿ ಮೇಲ್ಸೇತುವೆ ಬಳಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಕೇಂದ್ರ ಸರ್ಕಾರದ ವಿರುದ್ಧ ಸೋಮವಾರ ನಡೆದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.

Read More

ಕುಲಶೇಖರ: ಶ್ರೀ ವೀರನಾರಾಯಣ ದೇವಸ್ಥಾನ ತೃತೀಯ ವಾರ್ಷಿಕ ಪ್ರತಿಷ್ಠ ಮಹೋತ್ಸವ. ಭಕ್ತರ ಸಹಕಾರದಿಂದ ಧಾರ್ಮಿಕ ಕಾರ್ಯ ಮಾಡಲು ಸಾಧ್ಯವಾಗಿದೆ: ಸುಂದರ್ ಕುಲಾಲ್ ಶಕ್ತಿನಗರ.

ಮಂಗಳೂರು: ಇತಿಹಾಸ ಪ್ರಸಿದ್ಧ ಕುಲಶೇಖರ ಶ್ರೀ ವೀರನಾರಾಯಣ ದೇವಸ್ಥಾನ ತೃತೀಯ ವಾರ್ಷಿಕ ಪ್ರತಿಷ್ಠ ಮಹೋತ್ಸವ.ಮೇ24 ರವಿವಾರ ವಿವಿಧ ಧಾರ್ಮಿಕ ಶ್ರೀ ಕ್ಷೇತ್ರದ ತಂತ್ರಿಗಳಾದ ಅನಂತ ಉಪಾಧ್ಯಾಯರ ನೇತೃತ್ವದಲ್ಲಿ ಪ್ರಧಾನ ಅರ್ಚಕರಾದ ಜನಾರ್ಧನ ಭಟ್ಟ ಮತ್ತು ವಿಪ್ರ ವೃಂದದೊಂದಿಗೆ ಬಹಳ ವಿಜೃಂಭಣೆಯಿಂದ ನಡೆಯಿತು

Read More

ಬಂಟ್ವಾಳ:ಮೇ 31ರಂದು  ತಾಲೂಕು ಕುಲಾಲ ಸಂಘದ ಮಹಾಸಭೆ, ವಾರ್ಷಿಕೋತ್ಸವ. ಸಾಧಕರಿಗೆ ಸನ್ಮಾನ, ಪ್ರಶಸ್ತಿ ಪ್ರದಾನ, ಯಕ್ಷಗಾನ ವೈಭವ.

ಬಂಟ್ವಾಳ: ತಾಲೂಕು ಕುಲಾಲ ಸುಧಾರಕ ಸಂಘ ಇದರ ೪೬ನೇ ವಾರ್ಷಿಕ ಮಹಾಸಭೆ ಮೇ ೩೧ರಂದು ಬೆಳಿಗ್ಗೆ ೧೧ಕ್ಕೆ ನಡೆಯಲಿದೆ. ಸಂಘದ ಅಧ್ಯಕ್ಷ ಬಿ. ರಮೇಶ್ ಸಾಲಿಯಾನ್ ಸಂಚಯಗಿರಿ ಅಧ್ಯಕ್ಷತೆ ವಹಿಸಲಿದ್ದಾರೆ.

Read More

ಪೆರ್ಮಂಕಿ: ಪ್ರೀತಿ ಗೇಮ್ಸ್ ಕ್ಲಬ್ (ರಿ) ಆಶ್ರಯದಲ್ಲಿ 25ನೇ ವರ್ಷದ ಉಚಿತ ಪುಸ್ತಕ ವಿತರಣೆ.

ಮಂಗಳೂರು :ಪೆರ್ಮಂಕಿ ಪ್ರೀತಿ ಗೇಮ್ಸ್ ಕ್ಲಬ್ (ರಿ). ಇದರ ಆಶ್ರಯದಲ್ಲಿ ಮಾಜಿ ಶಾಸಕರಾದ ದಿವಂಗತ ಎನ್. ಶಿವರಾವ್ ಇವರ ಸ್ಮರಣಾರ್ಥ 25ನೇ ವರ್ಷದ ಉಚಿತ ಪುಸ್ತಕ ವಿತರಣೆ ಕಾರ್ಯಕ್ರಮವು ಆದಿತ್ಯವಾರದಂದು ಸಂಘದ ಕಚೇರಿಯಲ್ಲಿ ಜರಗಿತು.

Read More

ಬಾರಿಂಜೆ: ಸಾಧಕ ವಿದ್ಯಾರ್ಥಿನಿಗೆ ಅಭಿನಂದನೆ ಹಾಗೂ ಬಡ ವಿದ್ಯಾರ್ಥಿಗಳಿಗೆ ಸ್ಕೂಲ್ ಬ್ಯಾಗ್, ಛತ್ರಿ ವಿತರಣೆ.

ಬಂಟ್ವಾಳ :ತಾಲೂಕಿನ ಅಮುಂಜೆ ಗ್ರಾಮದ ಶ್ರೀ ಅಂಬಿಕಾ ಅನ್ನಪೂರ್ಣೇಶ್ವರೀ ಯುವಕ ಸಂಘ(ರಿ) ಬಾರಿಂಜೆ ದಾಸಿಮಾರ್ ಇದರ ವತಿಯಿಂದ ಎಸ್.ಎಸ್.ಎಲ್.ಸಿ.ಯಲ್ಲಿ 96.80% ಅಂಕ ಗಳಿಸಿದ ಗ್ರಾಮದ ಸಾಧಕ ಪ್ರತಿಭೆ ಕುಮಾರಿ ಸ್ತುತಿ ಕೆ ಕುಲಾಲ್ ಅವರಿಗೆ ಅಭಿನಂದನಾ ಕಾರ್ಯಕ್ರಮ ಮತ್ತು ಅಮುಂಜೆ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಹಾಗೂ ಸ್ಥಳೀಯ ಆಯ್ದ ಬಡ ವಿದ್ಯಾರ್ಥಿಗಳಿಗೆ ಸ್ಕೂಲ್ ಬ್ಯಾಗ್ ಮತ್ತು ಛತ್ರಿ ವಿತರಣಾ ಕಾರ್ಯಕ್ರಮವು ಮೇ. 24ರಂದು ಅಮುಂಜೆ ಶ್ರೀ ವಿನಾಯಕ ಜನಾರ್ದನ ಸದಾಶಿವ ದೇವಸ್ಥಾನದ ವಠಾರದಲ್ಲಿ ನಡೆಯಿತು.

Read More