ದೇಶ ವಿದೇಶ

ಕರಾವಳಿ

More News

ಹವಾಮಾನ ಆಧಾರಿತ ಬೆಳೆ ವಿಮೆ ಅಗೋಸ್ಟ್ 14 ವರೆಗೆ ದಿನಾಂಕ ವಿಸ್ತರಣೆ.

ಬಂಟ್ವಾಳ :ರಾಜ್ಯದ ರೈತರ ಬೇಡಿಕೆಗಳಿಗೆ ಸ್ಪಂದಿಸಿ ಕೇಂದ್ರ ಕೃಷಿ ಮತ್ತು ಕಲ್ಯಾಣ ಇಲಾಖೆಯ  ಆದೇಶದಂತೆ 2026 - 27 ನೇ ಸಾಲಿನ ಮರುವಿನ್ಯಾಸ ಗೊಳಿಸಲಾದ  ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆ ಅಡಿಕೆ ಮತ್ತು ಕಾಳುಮೆಣಸು, ಬೆಳೆಗಳಿಗೆ ಬೆಳೆ ವಿಮೆಯ ಪ್ರಿಮಿಯಂ ಪಾವತಿಸುವ   ದಿನಾಂಕವನ್ನು  2026 ಅಗೋಸ್ಟ್ 14  ರ ತನಕ  ವಿಸ್ತರಣೆ ಮಾಡಿ ತೋಟಗಾರಿಕೆ ಇಲಾಖೆ ಆದೇಶ ಹೊರಡಿಸಿದ್ದು ಬೆಳೆ ವಿಮೆ ಪ್ರಿಮಿಯಂ ಪಾವತಿ ಮಾಡದ  ರೈತರಿಗೆ ಅವಕಾಶ ಕಲ್ಪಿಕೊಡಲಾಗಿದೆ ಎಂದೂ ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಪ್ರಭಾಕರ ಪ್ರಭು ಪತ್ರಿಕಾ ಪ್ರಕಟಣೆ ಯಲ್ಲಿ ತಿಳಿಸಿದ್ದಾರೆ.

Read More

ಗೇರುಕಟ್ಟೆ: ಶ್ರೀ ಉಮಾಶಿವ ಕ್ಷೇತ್ರದ ಪುಷ್ಕರಿಣಿ ಅಭಿವೃದ್ಧಿಗೆ  ಕರ್ಣಾಟಕ ಬ್ಯಾಂಕ್ ರೂ 20ಲಕ್ಷ ನೆರವು ಹಸ್ತಾಂತರ

ಬಂಟ್ವಾಳ :ಕಲ್ಲಡ್ಕದ ಗೇರುಕಟ್ಟೆಯಲ್ಲಿರುವ ಶ್ರೀ ರಾಮಚಂದ್ರಾಪುರ ಮಠದ ಅಂಗಸಂಸ್ಥೆ ಶ್ರೀ ಉಮಾಶಿವ ಕ್ಷೇತ್ರದ ಪುಷ್ಕರಿಣಿಯ ಅಭಿವೃದ್ಧಿ ಕಾರ್ಯಕ್ಕೆ ಕರ್ಣಾಟಕ ಬ್ಯಾಂಕ್ ವತಿಯಿಂದ 20 ಲಕ್ಷ ರೂಪಾಯಿ ನೆರವು ಹಸ್ತಾಂತರ ಕಾರ್ಯಕ್ರಮ ಶುಕ್ರವಾರ ಕ್ಷೇತ್ತದಲ್ಲಿ ನಡೆಯಿತು. ಬ್ಯಾಂಕ್ ಒದಗಿಸಿದ ಇಪ್ಪತ್ತು ಲಕ್ಷ ರೂಪಾಯಿ ಚೆಕ್ ಅನ್ನು ಬ್ಯಾಂಕ್ ಮಂಗಳೂರು ವಲಯದ ಮುಖ್ಯಸ್ಥ, ಮುಖ್ಯ ಪ್ರಬಂಧಕರಾದ ಲಕ್ಷ್ಮೀನಾರಾಯಣ ಅವರು ಕ್ಷೇತ್ರದ ಸೇವಾ ಸಮಿತಿ ಅಧ್ಯಕ್ಷ ರಾಕೋಡಿ ಈಶ್ವರ ಭಟ್ ಅವರಿಗೆ ಹಸ್ತಾಂತರಿಸಿದರು.

Read More

ಮೊಡಂಕಾಪು: ದೀಪಿಕಾ ಪ್ರೌಢಶಾಲೆಯಲ್ಲಿ ಆಟಿ ಸಂಭ್ರಮ ಕಾರ್ಯಕ್ರಮ

ಬಂಟ್ವಾಳ : ಕರಾವಳಿ ಕರ್ನಾಟಕದ ಸಂಸ್ಕೃತಿ, ಸಂಪ್ರದಾಯ ಮತ್ತು ಪ್ರಕೃತಿಯೊಂದಿಗೆ ನಿಕಟ ಸಂಬಂಧ ಹೊಂದಿರುವ ಆಟಿ ತಿಂಗಳ ವಿಶೇಷತೆ ಬಗ್ಗೆ ಮೊಡಂಕಾಪು ದೀಪಿಕಾ ಪ್ರೌಢಶಾಲೆಯಲ್ಲಿ ಆಟಿ ಸಂಭ್ರಮ ಕಾರ್ಯಕ್ರಮ ನಡೆಯಿತು.

Read More

ಜಿಲ್ಲೆಯಾದ್ಯಂತ ಒಟ್ಟು ಐದು ಕಡೆ ಅಖಂಡ ಭಾರತ ಸಂಕಲ್ಪ ದಿನ ಕಾರ್ಯಕ್ರಮ : ಹಿಂ ಜಾ ವೇ.

ಬಂಟ್ವಾಳ:ಜಿಲ್ಲೆಯಾದ್ಯಂತ ಒಟ್ಟು ಐದು ಕಡೆ ಅಖಂಡ ಭಾರತ ಸಂಕಲ್ಪ ದಿನ ಕಾರ್ಯಕ್ರಮ ಆಯೋಜಿಸಲಾಗಿದ್ದು ದೇಶದ ಸಾರ್ವಭೌಮತ್ವವನ್ನು ಎತ್ತಿ ಹಿಡಿಯಬೇಕು, ಮೂಲಭೂತವಾದ ಹಾಗೂ ಭಯೋತ್ಪಾದನೆಗೆ ಅಂತ್ಯ ಹಾಡಬೇಕು ಮತ್ತು ತ್ರಿಖಂಡವಾಗಿರುವ ಭಾರತ ಮತ್ತೆ ಅಖಂಡ ಭಾರತವಾಗಬೇಕು ಎಂಬ ಆಶಯವೇ ಕಾರ್ಯಕ್ರಮದ ಪ್ರಮುಖ ಉದ್ದೇಶವಾಗಿದೆ ಎಂದು ಹಿಂದೂ ಜಾಗರಣ ವೇದಿಕೆ ಮಂಗಳೂರು ಗ್ರಾಮಾಂತರ ಜಿಲ್ಲಾ ಮುಖಂಡ ನರಸಿಂಹ ಮಾಣಿ ಹೇಳಿದರು.

Read More

ಬಂಟ್ವಾಳ :ತಾಲೂಕು ಪಂಚಗ್ಯಾರಂಟಿ ಅನುಷ್ಠಾನ ಸಮಿತಿಯಿಂದ ಆಟಿದ ಗಮ್ಮತ್ತ್.

ಬಂಟ್ವಾಳ :ತಾಲೂಕು ಪಂಚಾಯಿತಿ ಬಂಟ್ವಾಳ ಹಾಗೂ ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿ ಬಂಟ್ವಾಳ ತಾಲೂಕು ವತಿಯಿಂದ ಆಟಿದ ಗಮ್ಮತ್ತ್ ಕಾರ್ಯಕ್ರಮವನ್ನು ಬಿ.ಸಿ.ರೋಡಿನ ಅಂಬೇಡ್ಕರ್ ಭವನದಲ್ಲಿ ನಡೆಸಲಾಯಿತು. ಅಧ್ಯಕ್ಷತೆಯನ್ನು ಗ್ಯಾರಂಟಿ ಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷೆ ಜಯಂತಿ ವಿ. ಪೂಜಾರಿ ವಹಿಸಿ ಮಾತನಾಡಿ ಬಂಟ್ವಾಳ ತಾಲೂಕಿನಲ್ಲಿ ಗ್ಯಾರಂಟಿ ಯೋಜನೆಗಳು ಸಮರ್ಪಕವಾಗಿ ಅನುಷ್ಠಾನವಾಗಿದ್ದು, ಉತ್ತಮ ಸಾಧನೆ ತೋರಿದೆ ಎಂದರು.

Read More