ದೇಶ ವಿದೇಶ

ಕರಾವಳಿ

More News

ಸುಹಾಸ್ ಶೆಟ್ಟಿ ಕೊಲೆ ಆರೋಪಿ ಸೇರಿದಂತೆ ಕೈದಿಗಳಿಂದ ಪರಪ್ಪನ ಅಗ್ರಹಾರ ಜೈಲು ವಾರ್ಡರ್ ಮೇಲೆ ಹಲ್ಲೆ: ಐವರ ವಿರುದ್ಧ ಎಫ್ಐಆರ್!

ಬೆಂಗಳೂರು: ಪರಪ್ಪನ ಅಗ್ರಹಾರ ಮಧ್ಯವರ್ತಿ ಕಾರಾಗೃಹದಲ್ಲಿ ಕೈದಿಗಳ ಅಟ್ಟಹಾಸ ಮಿತಿಮೀರಿದ್ದು, ಸಿಬ್ಬಂದಿಯೇ ಭಯದ ವಾತಾವರಣದಲ್ಲಿ ಕರ್ತವ್ಯ ನಿರ್ವಹಿಸುವಂತಾಗಿದೆ. ಜೈಲಿನಲ್ಲಿ ಕೈದಿಗಳ ನಿಯಂತ್ರಣವೇ ಅಧಿಕಾರಿಗಳಿಗೆ ದೊಡ್ಡ ಸವಾಲಾಗಿ ಪರಿಣಮಿಸಿದ್ದು, ಜೈಲು ವಾರ್ಡರ್ ಮಂಜುನಾಥ್ ಹವೇಲಿ ಅವರ ಮೇಲೆ ನಡೆದ ಭೀಕರ ಹಲ್ಲೆ ನಡೆದಿದೆ. ಈ ಹಿನ್ನೆಲೆ ಐವರ ವಿರುದ್ಧ ಎಫ್ಐಆರ್ ದಾಖಲಾಗಿದೆ.

Read More

ಇಂದು ಶಿಕ್ಷಕರ ದಿನಾಚರಣೆಯ ಸಂಭ್ರಮ : ಗುರುವಿನ ಗುಲಾಮನಾಗುವ ತನಕ ದೊರೆಯದಣ್ಣ ಮುಕ್ತಿ....

ಇಂದು ಸೆ. 5  ಶಿಕ್ಷಕರ ದಿನಾಚರಣೆಯ ಸಂಭ್ರಮ,ಶಿಕ್ಷಣವೆಂದರೆ ಕೇವಲ ಪುಸ್ತಕದ ಪಾಠ ಹಾಗೂ ಅಂಕ ಗಳಿಕೆಯಾಗದೆ ವಿದ್ಯಾರ್ಥಿಯು ತನ್ನ ವ್ಯಕ್ತಿತ್ವ ರೂಪಿಸಿ ಸಾಧನೆಯ ಹಾದಿಯ ಕಡೆಗೆ ಸಾಗಬೇಕಾದ ಮಹತ್ತರ ಜವಾಬ್ದಾರಿಯಲ್ಲಿ ಶಿಕ್ಷಕರ ಪಾತ್ರವೇ ಹಿರಿದು, ಶಿಕ್ಷಕರೆಂದರೆ ಕೇವಲ ಪಾಠ ಹೇಳುವವರಲ್ಲ; ಬದುಕಿನ ದಾರಿ ತೋರಿಸುವವರು.“ಗುರು” ಎಂಬುದು ಎರಡಕ್ಷರದ ಪದವಾದರೂ ಅದು ವಿಶಾಲವಾದ ಅರ್ಥವನ್ನು ಹೊಂದಿದೆ . ಅಜ್ಞಾನವೆಂಬ ಕತ್ತಲೆಯಿಂದ ಜ್ಞಾನದ ಬೆಳಕಿನೆಡೆಗೆ ಕರೆದೊಯ್ಯುವವನೇ ಗುರು.

Read More

ಪಚ್ಚಿನಡ್ಕ:ಓಂ ಫ್ರೆಂಡ್ಸ್ ಕ್ಲಬ್ ಅಶ್ರಯದಲ್ಲಿ 27ನೇ ವರ್ಷದ ಮೊಸರು ಕುಡಿಕೆ ಉತ್ಸವ.

ಬಂಟ್ವಾಳ :ಓಂ ಫ್ರೆಂಡ್ಸ್ ಕ್ಲಬ್ ( ರಿ ) ಕಳ್ಳಿಗೆ ಪಚ್ಚಿನಡ್ಕ ಬಂಟ್ವಾಳ ಇದರ ಆಶ್ರಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ 27ನೇ ವರ್ಷದ ಮೊಸರು ಕುಡಿಕೆ ಉತ್ಸವ ಸೆ.04ರಂದು ಸಂಘದ ಶ್ರೀ ಕೃಷ್ಣ ವೇದಿಕೆಯ ವಠಾರದಲ್ಲಿ ಬಹಳ ವಿಜೃಂಭಣೆ ಯಿಂದ ಜರಗಿತು.

Read More

ಬ್ಲಿಂಕಿಟ್​ನಲ್ಲಿ ಆರ್ಡರ್​​ ಮಾಡಿದ್ದ ಮೊಟ್ಟೆಯಲ್ಲಿ ಹುಳು: ದೂರು ನೀಡಿದ ಬೆನ್ನಲ್ಲೇ ದಾಳಿ ಮಾಡಿದ ಆರೋಗ್ಯ ಇಲಾಖೆ

ಬೆಂಗಳೂರು: ಕ್ಷಿಪ್ರ ಡೆಲಿವರಿ ಆ್ಯಪ್‌ಗಳ ಮೂಲಕ ಮನೆಬಾಗಿಲಿಗೆ ತರಿಸಿಕೊಳ್ಳುವ ಆಹಾರ ಪದಾರ್ಥಗಳ ಗುಣಮಟ್ಟದ ಮೇಲೆ ಮತ್ತೊಮ್ಮೆ ಗಂಭೀರ ಅನುಮಾನ ವ್ಯಕ್ತವಾಗಿದೆ. ಕರಾವಳಿ ನಗರಿ ಮಂಗಳೂರಿನಲ್ಲಿ ಆನ್‌ಲೈನ್ ಡೆಲಿವರಿ ‘ಬ್ಲಿಂಕಿಟ್‘ ಮೂಲಕ ಆರ್ಡರ್ ಮಾಡಿದ್ದ ಮೊಟ್ಟೆಯೊಂದರಲ್ಲಿ ಹುಳುಗಳು ಪತ್ತೆಯಾಗಿದ್ದು, ಗ್ರಾಹಕರು ಬೆಚ್ಚಿಬಿದ್ದಿದ್ದಾರೆ. ಸಾರ್ವಜನಿಕರ ಆರೋಗ್ಯದ ಜತೆ ಚೆಲ್ಲಾಟವಾಡುತ್ತಿರುವ ಕುರಿತು ನೇರವಾಗಿ ಸಚಿವ ಯು.ಟಿ. ಖಾದರ್​​ಗೆ ಗ್ರಾಹಕರಿಂದ ದೂರು ಸಲ್ಲಿಸಲಾಗಿದೆ. ಈ ಬೆನ್ನಲ್ಲೇ ಆಹಾರ ಇಲಾಖೆ ಅಧಿಕಾರಿಗಳು ದಾಳಿ ಮಾಡಿದ್ದಾರೆ.

Read More

ಬೆಂಜನಪದವು: ಸಾರ್ವಜನಿಕ ಶ್ರೀಕೃಷ್ಣ ಲೀಲೋತ್ಸವ, ಧಾರ್ಮಿಕ ಸಭೆ. ಒಗ್ಗಟ್ಟೇ ನಮ್ಮ ಶಕ್ತಿ, ಸನಾತನವೇ ನಮ್ಮ ಸಂಸ್ಕೃತಿ: ಡಾ.ರವೀಶ್ ಪಡುಮಲೆ.

ಬಂಟ್ವಾಳ :ಹಿಂದೂ ಧರ್ಮದ ಏಕತೆ, ಸಂಸ್ಕೃತಿ ಮತ್ತು ಸನಾತನ ಪರಂಪರೆಯ ಉಳಿವಿಗಾಗಿ ನಮ್ಮಲ್ಲಿರುವ ಜಾತಿ,ರಾಜಕೀಯ, ವೈಮನಸ್ಸು ಬದಿಗಿಟ್ಟು ನಾವೆಲ್ಲರೂ ಒಂದಾಗಿ ನಿಲ್ಲೋಣ. ಒಗ್ಗಟ್ಟೇ ನಮ್ಮ ಶಕ್ತಿ, ಸನಾತನವೇ ನಮ್ಮ ಸಂಸ್ಕೃತಿ. ಕಲಿಯುಗದಲ್ಲಿ ಸಂಘಟನೆಯ ಮೂಲಕ ಧರ್ಮದ ಹಾದಿಯಲ್ಲಿ ನಡೆಯೋಣ, ಸೂರ್ಯ ಚಂದ್ರರು ಇರುವ ತನಕ ಸನಾತನ ಧರ್ಮಕ್ಕೆ ಅಳಿವಿಲ್ಲ ಎಂದು ಖ್ಯಾತ ವಾಗ್ಮಿ ಧಾರ್ಮಿಕ ಚಿಂತಕ ಡಾ. ರವೀಶ್ ಪಡುಮಲೆ ಹೇಳಿದರು.

Read More