ಬಂಟ್ವಾಳ :ತಾಲೂಕಿನ ಅಮುಂಜೆ ಗ್ರಾಮದ ಶ್ರೀ ಅಂಬಿಕಾ ಅನ್ನಪೂರ್ಣೇಶ್ವರೀ ಯುವಕ ಸಂಘ(ರಿ) ಬಾರಿಂಜೆ ದಾಸಿಮಾರ್ ಇದರ ವತಿಯಿಂದ ಎಸ್.ಎಸ್.ಎಲ್.ಸಿ.ಯಲ್ಲಿ 96.80% ಅಂಕ ಗಳಿಸಿದ ಗ್ರಾಮದ ಸಾಧಕ ಪ್ರತಿಭೆ ಕುಮಾರಿ ಸ್ತುತಿ ಕೆ ಕುಲಾಲ್ ಅವರಿಗೆ ಅಭಿನಂದನಾ ಕಾರ್ಯಕ್ರಮ ಮತ್ತು ಅಮುಂಜೆ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಹಾಗೂ ಸ್ಥಳೀಯ ಆಯ್ದ ಬಡ ವಿದ್ಯಾರ್ಥಿಗಳಿಗೆ ಸ್ಕೂಲ್ ಬ್ಯಾಗ್ ಮತ್ತು ಛತ್ರಿ ವಿತರಣಾ ಕಾರ್ಯಕ್ರಮವು ಮೇ. 24ರಂದು ಅಮುಂಜೆ ಶ್ರೀ ವಿನಾಯಕ ಜನಾರ್ದನ ಸದಾಶಿವ ದೇವಸ್ಥಾನದ ವಠಾರದಲ್ಲಿ ನಡೆಯಿತು.
Read Moreಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಬಳಿಯ ಅಳ್ವೆಕೋಡಿ ಕಡಲತೀರ ಪ್ರದೇಶದಲ್ಲಿ ಕಪ್ಪೆಚಿಪ್ಪು ಸಂಗ್ರಹಿಸಲು ಹೋಗಿ ಮೃತಪಟ್ಟವರ ಸಂಖ್ಯೆ 11ಕ್ಕೆ ಏರಿಕೆಯಾಗಿದೆ. 11 ಜನರ ಪೈಕಿ ನಿನ್ನೆ 10 ಜನರ ಮೃತದೇಹಗಳು ಪತ್ತೆಯಾಗಿದ್ದವು. ನಾಪತ್ತೆಯಾಗಿದ್ದ ಮಾದೇವ್ ನಾಯ್ಕ್ ಮೃತದೇಹ ಕೂಡ ಇಂದು ಪತ್ತೆಯಾಗಿದೆ. ಎನ್ಡಿಆರ್ಎಫ್, ಈಶ್ವರ ಮಲ್ಪೆ ತಂಡ ನಡೆಸಿದ ಶೋಧ ಕಾರ್ಯಾಚರಣೆಯಲ್ಲಿ ಮೃತದೇಹವನ್ನು ಪತ್ತೆ ಮಾಡಿ ಹೊರತೆಗೆಯಲಾಗಿದೆ. ಆ ಮೂಲಕ ನೀರಿನ ಅಬ್ಬರಕ್ಕೆ 11 ಮಂದಿ ಜಲ ಸಮಾಧಿಯಾಗಿದ್ದರೆ, ಇಬ್ಬರು ಮಹಿಳೆಯರನ್ನು ರಕ್ಷಣೆ ಮಾಡಲಾಗಿದೆ
Read Moreಬಂಟ್ವಾಳ :ತಾಲೂಕಿನ ಕಲ್ಲಡ್ಕ ಕುದ್ರಬೆಟ್ಟುವಿನಲ್ಲಿ ಐದು ತಲೆಮಾರಿನ ಅಪರೂಪದ ಕುಟುಂಬ ಒಂದು ಮಾತೃನಮನ ಎನ್ನುವ ಸಂಭ್ರಮವನ್ನು ಮೇ 24ನೇ ಆದಿತ್ಯವಾರ ಕಲ್ಲಡ್ಕ ಕುದ್ರಬೆಟ್ಟುವಿನಲ್ಲಿ ಆಚರಿಸಿಕೊಂಡಿದೆ.
Read Moreಬಂಟ್ವಾಳ ವಿಧಾನಸಭಾ ಕ್ಷೇತ್ರ ಬಂಟ್ವಾಳ ಮತ್ತು ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಸಮಿತಿ ಯುವ ಕಾಂಗ್ರೆಸ್ ಹಾಗೂ ಎನ್ಎಸ್ ಯು ಐ ಮತ್ತು ಮಹಿಳಾ ಕಾಂಗ್ರೆಸ್ ಸಮಿತಿ ಇದರ ಸಹಕಾರದೊಂದಿಗೆ ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪೆಟ್ರೋಲ್, ಡೀಸೆಲ್, ಗ್ಯಾಸ್ ಬೆಲೆ ಏರಿಕೆಯ ವಿರುದ್ಧ ಮಾಜಿ ಸಚಿವ ಬಿ ರಮಾನಾಥ ರೈ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ಮೇ 25ರಂದು ಸೋಮವಾರ, ಬೆಳಿಗ್ಗೆ 10.30 ಕ್ಕೆ ಬಿ.ಸಿ.ರೋಡು ರಕ್ತೇಶ್ವರಿ ದೇವಸ್ಥಾನದ ಮುಂಭಾಗದಲ್ಲಿ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ
Read Moreಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲಾ ಗ್ಯಾರೇಜ್ ಮಾಲಕರ ಸಂಘ ಇದರ ಬಂಟ್ವಾಳ ವಲಯದ ರಜತ ಸಂಭ್ರಮ ಹಾಗೂ ವಾರ್ಷಿಕ ಮಹಾಸಭೆ ಮತ್ತು ಪದಗ್ರಹಣ ಸಮಾರಂಭ ಬಿ.ಸಿ.ರೋಡಿನ ಸ್ಪರ್ಶಾಕಲಾಮಂದಿರದಲ್ಲಿ ಮೇ.24ರಂದು ಭಾನುವಾರ ನಡೆಯಿತು.
Read More