ತಿರುವನಂತಪುರ: ಕೇರಳಂನ ಮಾಜಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್(Pinarayi Vijayan) ನಿವಾಸ ಸೇರಿ 10 ಕಡೆಗಳಲ್ಲಿ ಇಡಿ ಅಧಿಕಾರಿಗಳು ಏಕಕಾಲದಲ್ಲಿ ಶೋಧ ನಡೆಸಿದ್ದಾರೆ. ಕೊಚ್ಚಿ ಮಿನರಲ್ಸ್ ಮತ್ತು ರೂಟೈಲ್ ಲಿಮಿಟೆಡ್ ಕಂಪನಿಗೆ ಸಂಬಂಧಿಸಿದ ಕೋಟ್ಯಂತರ ರೂಪಾಯಿ ಭ್ರಷ್ಟಾಚಾರ ಮತ್ತು ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ಭಾರಿ ಆ್ಯಕ್ಷನ್ಗೆ ಇಳಿದಿದೆ. ಈ ಪ್ರಕರಣದ ಇಡಿ ತನಿಖೆಯನ್ನು ರದ್ದುಗೊಳಿಸಲು ಕೇರಳ ಹೈಕೋರ್ಟ್ ನಿರಾಕರಿಸಿದ ಬೆನ್ನಲ್ಲೇ ಈ ದಾಳಿಗಳು ನಡೆದಿರುವುದು ರಾಜಕೀಯ ವಲಯದಲ್ಲಿ ತಲ್ಲಣ ಮೂಡಿಸಿದೆ.
Read Moreಬೆಂಗಳೂರು: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ (Siddaramaiah) ನಾಳೆಯೇ (ಮೇ 28) ರಾಜೀನಾಮೆ ನೀಡಲಿದ್ದಾರೆ ಎನ್ನುವ ಸುದ್ದಿ ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದೆ. ಹೈಕಮಾಂಡ್ ನಾಯಕರ ಸೂಚನೆಗೆ ಗೌರವ ನೀಡಿ ಸಿದ್ದರಾಮಯ್ಯ ರಾಜೀನಾಮೆ ನಿರ್ಧಾರಕ್ಕೆ ಬಂದಿದ್ದಾರೆ. ಅವರ ಆಪ್ತ ಶಾಸಕರು ಮತ್ತು ಸಚಿವರುಗಳ ಬಳಿಯೂ ಈ ವಿಷಯವನ್ನು ತಿಳಿಸಿದ್ದಾರೆ ಎನ್ನಲಾಗಿದೆ. ಇದಕ್ಕೆ ಪೂರಕವೆಂಬಂತೆ ರಾಜಕೀಯ ಚಟುವಟಿಕೆಗಳೂ ಕರ್ನಾಟಕದಲ್ಲಿ ಬಿರುಸುಗೊಂಡಿವೆ. ಆದರೆ ಈ ನಡುವೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲ ಮಾತ್ರ ಅಚ್ಚರಿಯ ಹೇಳಿಕೆ ನೀಡಿದ್ದಾರೆ.
Read Moreಬಂಟ್ವಾಳ: ಪುದು ಗ್ರಾಮದ ಸುಜೀರು ದತ್ತನಗರದಲ್ಲಿರುವ ಶ್ರೀ ವೀರ ಹನುಮಾನ್ ಮಂದಿರದ ವತಿಯಿಂದ ಸ್ಥಳೀಯ ವಿದ್ಯಾರ್ಥಿಗಳ ಶಾಲಾ ಕಲಿಕೆಗೆ ಪೂರಕವಾಗುವ ನಿಟ್ಟಿನಲ್ಲಿ ಆರ್ಥಿಕ ಸಹಾಯವನ್ನು ನೀಡಲಾಯಿತು.
Read Moreಬಂಟ್ವಾಳ:ದೇಶದಲ್ಲಿ ಪದೇ ಪದೇ ನೀಟ್ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆಯಾಗುತ್ತಿದ್ದರೂ ಯಾವುದೇ ರೀತಿಯ ತನಿಖೆ ನಡೆಸಿ ಪರಿಹಾರ ಕಂಡುಕೊಳ್ಳುವಲ್ಲಿ ವಿಫಲವಾಗಿರುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ ಡಿ ಎ ಸರ್ಕಾರ ಇಂಧನ ಬೆಲೆ ಏರಿಕೆ ಮೂಲಕ ಜನತೆಗೆ 'ಅಚ್ಚೇ ದಿನ್' ನೀಡಿದ್ದಾರೆ ಎಂದು ಮಾಜಿ ಸಚಿವ, ಕೆಪಿಸಿಸಿ ಉಪಾಧ್ಯಕ್ಷ ಬಿ.ರಮಾನಾಥ ರೈ ಲೇವಡಿ ಮಾಡಿದ್ದಾರೆ. ಇಲ್ಲಿನ ಬಿ.ಸಿ.ರೋಡು ರಾಷ್ಟ್ರೀಯ ಹೆದ್ದಾರಿ ಮೇಲ್ಸೇತುವೆ ಬಳಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಕೇಂದ್ರ ಸರ್ಕಾರದ ವಿರುದ್ಧ ಸೋಮವಾರ ನಡೆದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.
Read Moreಮಂಗಳೂರು: ಇತಿಹಾಸ ಪ್ರಸಿದ್ಧ ಕುಲಶೇಖರ ಶ್ರೀ ವೀರನಾರಾಯಣ ದೇವಸ್ಥಾನ ತೃತೀಯ ವಾರ್ಷಿಕ ಪ್ರತಿಷ್ಠ ಮಹೋತ್ಸವ.ಮೇ24 ರವಿವಾರ ವಿವಿಧ ಧಾರ್ಮಿಕ ಶ್ರೀ ಕ್ಷೇತ್ರದ ತಂತ್ರಿಗಳಾದ ಅನಂತ ಉಪಾಧ್ಯಾಯರ ನೇತೃತ್ವದಲ್ಲಿ ಪ್ರಧಾನ ಅರ್ಚಕರಾದ ಜನಾರ್ಧನ ಭಟ್ಟ ಮತ್ತು ವಿಪ್ರ ವೃಂದದೊಂದಿಗೆ ಬಹಳ ವಿಜೃಂಭಣೆಯಿಂದ ನಡೆಯಿತು
Read More