ಕರಾವಳಿ

More News

ಕೇರಳ ಸಿಎಂ ಆಗಿ ವಿ.ಡಿ ಸತೀಶನ್‌, 20 ಸಂಪುಟ ಸಚಿವರಿಂದ ಇಂದು ಪ್ರಮಾಣ ಸ್ವೀಕಾರ

ತಿರುವನಂತಪುರಂ: ಕೇರದ ನೂತನ ಮುಖ್ಯಮಂತ್ರಿಯಾಗಿ ನಿಯೋಜನೆಗೊಂಡಿರುವ ವಿ.ಡಿ ಸತೀಶನ್‌ (VD Satheesan) ಹಾಗೂ ಇತರ 20 ಮಂದಿ ಸಂಪುಟ ಸಚಿವರು ಇಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

Read More

ಯುಎಇ : ಯುನೈಟೆಡ್ ಲೊರೆಟ್ಟೊ ಫ್ರೆಂಡ್ಸ್ ನೂತನ ಅಧ್ಯಕ್ಷರಾಗಿ ಡೊನಾಲ್ಡ್ ನೊರೊನ್ಹಾ ಅಲ್ಲಿಪಾದೆ ಆಯ್ಕೆ

ಬಂಟ್ವಾಳ : ಯುಎಇ ಯುನೈಟೆಡ್ ಲೊರೆಟ್ಟೊ ಫ್ರೆಂಡ್ಸ್ ಇದರ ನೂತನ ಅಧ್ಯಕ್ಷರಾಗಿ ಡೊನಾಲ್ಡ್ ನೊರೊನ್ಹಾ ಅಲ್ಲಿಪಾದೆ ಆಯ್ಕೆಯಾಗಿದ್ದಾರೆ.

Read More

ಹೊಸ ಸಚಿವಸಂಪುಟ ಕಾಸರಗೋಡು ಜಿಲ್ಲೆಯ ಪಾಲಿಗೆ ನಿರಾಶೆ- ಎಂ.ಎಲ್. ಅಶ್ವಿನಿ

ಕಾಸರಗೋಡು: ಆರು ದಶಕಗಳ ಬಳಿಕ ಕಾಂಗ್ರೆಸ್ ನೇತೃತ್ವದ ಮೈತ್ರಿಕೂಟದ ಎಲ್ಲಾ ಸಚಿವರು ಪ್ರಮಾಣ ವಚನ ಸ್ವೀಕರಿಸುತ್ತಿರುವಾಗ ಜಿಲ್ಲೆಯ ಪಾಲಿಗೆ ನಿರಾಶೆಯಷ್ಟೇ ಉಳಿದಿದೆ. ರಾಜ್ಯದಲ್ಲೇ ಅತ್ಯಂತ ಹಿಂದುಳಿದಿರುವ ಜಿಲ್ಲೆಗೆ ಮತ್ತೊಮ್ಮೆ ಪ್ರಾತಿನಿಧ್ಯವನ್ನು ನಿರಾಕರಿಸುವ ಮೂಲಕ, ಮುಂದಿನ ಐದು ವರ್ಷಗಳ ಕಾಲ ಜಿಲ್ಲೆಯ ಬಗ್ಗೆ ವಿ.ಡಿ ಸತೀಶನ್ ಅವರ ಸರಕಾರದ ಧೋರಣೆ ಏನಿರಲಿದೆ ಎಂಬುದು ಬಹುಮಟ್ಟಿಗೆ ಸ್ಪಷ್ಟವಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷೆ ಎಂ.ಎಲ್. ಅಶ್ವಿನಿ ತಿಳಿಸಿದ್ದಾರೆ. ಸಚಿವರನ್ನು ಆಯ್ಕೆ ಮಾಡುವುದು ಯುಡಿಎಫ್‌ನ ಆಂತರಿಕ ವಿಷಯವಾಗಿದ್ದರೂ, ಜಿಲ್ಲೆಯ ಅಭಿವೃದ್ಧಿ ಸಮಸ್ಯೆಗಳನ್ನು ಸಚಿವ ಸಂಪುಟದಲ್ಲಿ ಬಲವಾಗಿ ಮಂಡಿಸಲು ಸಚಿವರಿದ್ದರೆ ಚೆನ್ನಾಗಿತ್ತು ಎಂಬುದು ಜಿಲ್ಲೆಯ ಪ್ರತಿಯೊಬ್ಬ ನಾಗರಿಕನ ಆಶಯವಾಗಿತ್ತು. ಎಷ್ಟೋ ದಶಕಗಳ ಬಳಿಕ ಜಿಲ್ಲೆಯಿಂದ ಕಾಂಗ್ರೆಸ್ ಶಾಸಕರು ರಾಜ್ಯ ವಿಧಾನಸಭೆಯನ್ನು ಪ್ರವೇಶಿಸಿದ್ದಾರೆ. ಕನಿಷ್ಠ ಈ ವಿಷಯವನ್ನಾದರೂ ಕಾಂಗ್ರೆಸ್ ನಾಯಕತ್ವ ಪರಿಗಣಿಸಬೇಕಿತ್ತು.

Read More

ಬಂಟ್ವಾಳ :ಸೀನಿಯರ್ ಛೇಂಬರ್  ನೇತ್ರಾವತಿ ಸಂಗಮದ ಅಧ್ಯಕ್ಷರಾಗಿ ತಾರಾನಾಥ ಕೊಟ್ಟಾರಿ ಆಯ್ಕೆ.ಮೇ.18 ರಂದು ಪದಗ್ರಹಣ ಸಮಾರಂಭ.

ಬಂಟ್ವಾಳ: ಉದ್ಯಮಿ ಸಾಮಾಜಿಕ ಕಾರ್ಯಕರ್ತ ತಾರಾನಾಥ ಕೊಟ್ಟಾರಿ ಅವರು ಸೀನಿಯರ್ ಛೇಂಬರ್ ಇಂಟರ್ ನ್ಯಾಶನಲ್ ಬಂಟ್ವಾಳ ನೇತ್ರಾವತಿ ಸಂಗಮದ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಮೇ.18 ರಂದು ಬಿ.ಸಿ.ರೋಡು ಕೈಕಂಬ ದ್ವಾರದಲ್ಲಿರುವ ಅಕ್ಷಯ ಸೌಧ ಅಕ್ಷಯ ಸಭಾಂಗಣದಲ್ಲಿ ಪದವಿ ಪ್ರಧಾನ ಸಮಾರಂಭವು ನಡೆಯಲಿದೆ. ಬಿ.ಸಿ.ರೋಡಿನ ಉದ್ಯಮಿ ಐತ್ತಪ್ಪ ಆಳ್ವ ಸುಜೀರುಗುತ್ತು ಮುಖ್ಯ ಅತಿಥಿಯಾಗಿ, ರಾಷ್ಟಿçÃಯ ಉಪಾಧ್ಯಕ್ಷೆ ಅಕ್ಷತಾ ಆರ್. ಗೌರವ ಅತಿಥಿಯಾಗಿ ಭಾಗವಹಿಸಲಿದ್ದಾರೆ ಎಂದು ನೇತ್ರಾವತಿ ಸಂಗಮದ ನಿಕಟಪೂರ್ವ ಅಧ್ಯಕ್ಷ ಆದಿರಾಜ ಜೈನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಬೋಳಿಯಾರ್:  ಸಮಾಜ ಸೇವಾ ಸಹಕಾರಿ ಸಂಘದ 18ನೇ ಶಾಖೆ ಶುಭಾರಂಭ ಎಲ್ಲಾ ಸಮುದಾಯ ಆತ್ಮಸ್ಥರ್ಯದಿಂದ ಆರ್ಥಿಕವಾಗಿ ಅಭಿವೃದ್ಧಿಯಾಗಲಿ :ಮಾಣಿಲ ಶ್ರೀ

ಬಂಟ್ವಾಳ:ಆಡಳಿತ ಮಂಡಳಿಯ ಪರಿಶ್ರಮದಿಂದ ಇಂದು 18ನೇ ಶಾಖೆ ಶುಭಾರಂಭವಾಗಿರುವುದು ಅಭಿನಂದನೀಯ, ಹಿಂದುಳಿದ ವರ್ಗದ ಬಡವರು ಬಲ್ಲಿದರು ಅಭಿವೃದ್ಧಿ ಹೊಂದಬೇಕು ಎನ್ನುವ ನಿಟ್ಟಿನಲ್ಲಿ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ವಕಾಶವನ್ನು ನೀಡುವ ಮೂಲಕ ಜನಪರ ಸೇವೆ ನೀಡಬೇಕು ಎನ್ನುವ ಉದ್ದೇಶದಿಂದ ಡಾ. ಅಮ್ಮೆಂಬಳ ಬಾಳಪ್ಪ ಹಾಗೂ ಹೂವಯ್ಯ ಮೂಲ್ಯನವರು ಅಂದು ಸ್ಥಾಪಿಸಿದ ಸಮಾಜ ಸೇವಾ ಸಹಕಾರಿ ಸಂಘ ಇಂದು ಅದೇ ಉದ್ದೇಶದಲ್ಲಿ ಮುಂದುವರಿಯುತ್ತಿದೆ, , ಜನ ಸಾಮಾನ್ಯರಿಗೆ ಹಾಗೂ ಎಲ್ಲಾ ಸಮುದಾಯದವರಿಗೂ ಆತ್ಮಸ್ಥರ್ಯದಿಂದ ಆರ್ಥಿಕ ಉನ್ನತಿ ಹೊಂದಲು ಸಹಕಾರಿ ಸಂಘ ಪೂರಕವಾಗಲಿ, ಭಗವಂತನ ಸಾಮ್ರಾಜ್ಯದಲ್ಲಿ ಎಲ್ಲರೂ ಒಟ್ಟಾಗಿ ಸಾಗುವ ವಿಶ್ವ ಶಾಂತಿಗಾಗಿ ಎಲ್ಲರೂ ಪ್ರಾರ್ಥಿಸುವ ಎಂದು ಮಾಣಿಲ ಶ್ರೀಧಾಮದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಹೇಳಿದರು.

Read More