ದೇಶ ವಿದೇಶ

ಕರಾವಳಿ

More News

ಬಿಡದಿ ಟೌನ್‌ಶಿಪ್| ಕೋರ್ಟ್ ಅನುಮತಿ ಇಲ್ಲದೆ ಒಂದು ಇಟ್ಟಿಗೆಯೂ ಅಲುಗಾಡುವಂತಿಲ್ಲ, ಮರ ಕಡಿಯುವಂತಿಲ್ಲ: ಹೈಕೋರ್ಟ್

ಬೆಂಗಳೂರು: ನ್ಯಾಯಾಲಯದ ಅನುಮತಿಯಿಲ್ಲದೆ ಬಿಡದಿ ಟೌನ್‌ಶಿಪ್‌(Bidadi Township) ಯೋಜನಾ ಪ್ರದೇಶದಲ್ಲಿ ಒಂದು ಇಟ್ಟಿಗೆಯನ್ನೂ ಅಲುಗಾಡಿಸುವಂತಿಲ್ಲ ಹಾಗೂ ಒಂದೇ ಒಂದು ಮರವನ್ನೂ ಕಡಿಯುವಂತಿಲ್ಲ ಎಂದು ಸರ್ಕಾರಕ್ಕೆ ಹೈಕೋರ್ಟ್‌(High Court) ಕಟ್ಟುನಿಟ್ಟಿನ ಸೂಚನೆ ನೀಡಿದೆ.

Read More

ಬ್ರಹ್ಮರಕೂಟ್ಲು: ಹಿಂದೂ ರುದ್ರಭೂಮಿ ಅಭಿವೃದ್ಧಿ, ವಿಜ್ಞಾಪನಾ ಪತ್ರ ಬಿಡುಗಡೆ.

ಬಂಟ್ವಾಳ :ತಾಲೂಕಿನ ಕಳ್ಳಿಗೆಯ ಹಿಂದೂ ರುದ್ರಭೂಮಿಯ ನವೀಕರಣ ಕಾಮಗಾರಿಯ ಮುಂದಿನ ಕಾರ್ಯಯೋಜನೆಗಳ ಕುರಿತು ಮಹತ್ವದ ಸಭೆಯು ಅ.23 ಆದಿತ್ಯವಾರದಂದು ಬ್ರಹ್ಮರಕೂಟ್ಲುವಿನ ಶ್ರೀ ರಾಮ ಭಜನಾ ಮಂದಿರದಲ್ಲಿ ಜರುಗಿತು.

Read More

ನೂರಕ್ಕೂ ಮಿಕ್ಕಿ ಕಲಾವಿದರ ಕೂಡುವಿಕೆಯ "ಪೊಳಲಿ ಯಕ್ಷೋತ್ಸವ-2026" ಆಮಂತ್ರಣ ಪತ್ರಿಕೆ ಬಿಡುಗಡೆ.

ಬಂಟ್ವಾಳ: ಕರಾವಳಿಯ ಗಂಡುಕಲೆ ಯಕ್ಷಗಾನದ ವೈಭವವನ್ನು ಮತ್ತಷ್ಟು ಎತ್ತರಕ್ಕೇರಿಸುವ “ಪೊಳಲಿ ಯಕ್ಷೋತ್ಸವ–2026 ಕ್ಕೆ ಕ್ಷಣಗಣನೆ ಆರಂಭವಾಗಿದೆ. ಜಿಲ್ಲೆಯಲ್ಲೇ ದಾಖಲೆಯ ನೂರಕ್ಕೂ ಮಿಕ್ಕಿ ಯಕ್ಷಗಾನ ಕಲಾವಿದರು ಒಂದೇ ವೇದಿಕೆಯಲ್ಲಿ ಕೂಡಿ ಅದ್ದೂರಿಯಾಗಿ ನಡೆಯಲಿರುವ ಈ ಅಪೂರ್ವ ಯಕ್ಷೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭವು ಆ.23ರಂದು ಶ್ರೀ ಕ್ಷೇತ್ರ ಪೊಳಲಿಯ ಸನ್ನಿಧಾನದಲ್ಲಿ ಭಕ್ತಿಭಾವ ಹಾಗೂ ಸಂಭ್ರಮದ ವಾತಾವರಣದಲ್ಲಿ ಜರಗಿತು.

Read More

ತುಂಬೆ: ಪದವಿ ಪೂರ್ವ ಕಾಲೇಜಿನ ಕ್ರೀಡಾ ಸಂಘ ಉದ್ಘಾಟನೆ. ಕ್ರೀಡೆ ಜೀವನದ ಮೌಲ್ಯಗಳನ್ನು ಕಲಿಸುತ್ತದೆ: ಕವಿತಾ ಕೆ.

ಬಂಟ್ವಾಳ :ವಿದ್ಯಾರ್ಥಿ ಜೀವನ ಎಂದರೆ ಕೇವಲ ನಾಲ್ಕು ಗೋಡೆಗಳ ನಡುವೆ ಕುಳಿತು ಪುಸ್ತಕ ಓದುವುದಲ್ಲ ಅದು ವ್ಯಕ್ತಿತ್ವದ ಸಮಗ್ರ ವಿಕಾಸದ ಸಮಯ. ಶಿಕ್ಷಣ ನಮಗೆ ಜ್ಞಾನವನ್ನು ನೀಡಿದರೆ ಕ್ರೀಡೆ ನಮಗೆ ಜೀವನದ ಮೌಲ್ಯಗಳನ್ನು ಕಲಿಸುತ್ತದೆ.ಕ್ರೀಡಾಂಗಣದಲ್ಲಿ ಸಿಗುವ ಅನುಭವಗಳು ತರಗತಿಯಲ್ಲಿ ಸಿಗುವುದಿಲ್ಲ ನಮ್ಮ ದೇಶದಲ್ಲಿ ಪ್ರತಿಭೆಗಳಿಗೆ ಕೊರತೆ ಇಲ್ಲ ಈ ವಿದ್ಯಾ ಸಂಸ್ಥೆಯ ಕ್ರೀಡಾ ಸಂಘವು ನಿಮ್ಮಲ್ಲಿರುವ ಕ್ರೀಡಾ ಪ್ರತಿಭೆಯನ್ನು ಹೊರತರಲು ಒಂದು ಉತ್ತಮ ವೇದಿಕೆಯಾಗಲಿ ಈ ವಿದ್ಯಾಸಂಸ್ಥೆಯಿಂದ ಉತ್ತಮ ಕ್ರೀಡಾಪಟುಗಳು ಮೂಡಿ ಬರಲಿ ಎಂದು ತುಂಬೆ ಪದವಿ ಪೂರ್ವ ಕಾಲೇಜಿನ ವಾಣಿಜ್ಯಶಾಸ್ತ್ರ ಉಪನ್ಯಾಸಕಿ ಕವಿತಾ ಕೆ ಹೇಳಿದರು.

Read More

ಆಲಡ್ಕ: ಮುಹಿಯುದ್ದೀನ್ ಜುಮಾ ಮಸೀದಿ ಮಿಲಾದ್ ಪ್ರಯುಕ್ತ ಸ್ವಲಾತ್ ಮೆರವಣಿಗೆ.

ಆಲಡ್ಕ: ಮುಹಿಯುದ್ದೀನ್ ಜುಮಾ ಮಸೀದಿ ಮಿಲಾದ್ ಪ್ರಯುಕ್ತ ಸ್ವಲಾತ್ ಮೆರವಣಿಗೆ. ಬಂಟ್ವಾಳ :ಪಾಣೆಮಂಗಳೂರು ಆಲಡ್ಕ ಮುಹಿಯುದ್ದೀನ್ ಜುಮಾ ಮಸೀದಿ ಹಾಗೂ ತಹ್ ಲೀಮುಲ್ ಇಸ್ಲಾಂ ಮದ್ರಸ ವತಿಯಿಂದ ಮಿಲಾದ್ ಪ್ರಯುಕ್ತ ಸ್ವಲಾತ್ ಮೆರವಣಿಗೆ ಸಂಭ್ರಮದಿಂದ ಮಂಗಳವಾರ ನಡೆಯಿತು.

Read More