ಚೆನ್ನೈ: ತಮಿಳುನಾಡು (Tamil Nadu) ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವು ದಾಖಲಿಸಿದ ಟಿವಿಕೆಗೆ (TVK) ಶುಭಾಶಯ ತಿಳಿಸಿದ ಪ್ರಧಾನಿ ನರೇಂದ್ರ ಮೋದಿ ಮತ್ತು ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿಗೆ ಟಿವಿಕೆ ಮುಖ್ಯಸ್ಥ ವಿಜಯ್ (Vijay) ಧನ್ಯವಾದ ಅರ್ಪಿಸಿದ್ದಾರೆ.
Read Moreಬಂಟ್ವಾಳ: ಇಲ್ಲಿನ ಬಿ.ಸಿ.ರೋಡಿನಲ್ಲಿ ಚಿಣ್ಣರಲೋಕ ಮೋಕೆದ ಕಲಾವಿದೆರ್ ಮತ್ತು ಚಿಣ್ಣರ ಲೋಕ ಸೇವಾ ಬಂಧು ವತಿಯಿಂದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಭಾಗಿತ್ವದಲ್ಲಿ ನಡೆಯಲಿರುವ ಐದು ದಿನಗಳ 'ಕರಾವಳಿ ಕಲೋತ್ಸವ' ಬಹು ಸಂಸ್ಕೃತಿ ಉತ್ಸವ ಮೆರವಣಿಗೆಗೆ ಬಿ.ಸಿ.ರೋಡು ಅನ್ನಪೂರ್ಣೇಶ್ವರಿ ದೇವಸ್ಥಾನ ಬಳಿ ತಹಶೀಲ್ದಾರ್ ಕೆ.ಮಂಜುನಾಥ್ ಸೋಮವಾರ ಸಂಜೆ ಚಾಲನೆ ನೀಡಿದರು. ಇದೇ ವೇಳೆ ಮಹಿಳೆಯರ 'ಸೀರೆ ನಡಿಗೆ' ಸ್ಪರ್ಧೆಗೆ ಗೇರು ಅಭಿವೃದ್ಧಿ ನಿಗಮ ಅಧ್ಯಕ್ಷೆ ಮಮತಾ ಎಸ್.ಗಟ್ಟಿ ಚಾಲನೆ ನೀಡಿದರು. ಮೆರವಣಿಗೆಯಲ್ಲಿ ಚೆಂಡೆ, ಕೊಂಬು, ಗೊಂಬೆ ಕುಣಿತ, ವೀರಗಾಸೆ, ಡೊಳ್ಳು ಕುಣಿತ, ದಫ್ ನೃತ್ಯ ಗಮನ ಸೆಳೆಯಿತು.
Read Moreಬಂಟ್ವಾಳ :ಯಾವುದೇ ಸಂಘಟನೆಯನ್ನು ಪ್ರಾರಂಭಿಸುವುದು ಸುಲಭ,ಉಳಿಸುವುದು ಕಷ್ಟ ಆದರೆ ವೈದ್ಯನಾಥ ಕ್ರಿಕೆಟರ್ಸ್ ಸಂಘಟನೆಯು ನಮ್ಮ ಧರ್ಮ, ಸಂಸ್ಕೃತಿ ಸಂಸ್ಕಾರದ ಮೇಲಿನ ನಂಬಿಕೆ, ಪ್ರೀತಿಯಿಂದ ಕ್ರಿಕೆಟ್ ಆಟದೊಂದಿಗೆ ಈ ಭಾಗದಲ್ಲಿ 25 ವರ್ಷಗಳಿಂದ ಸಂಘಟನಾತ್ಮಕವಾಗಿ ಸಾಮಾಜಿಕ ಧಾರ್ಮಿಕವಾಗಿ ತೊಡಗಿಸಿಕೊಂಡು ರಜತ ಸಂಭ್ರಮದ ಆಚರಿಸುವುದು ಹೆಮ್ಮೆಯ ವಿಚಾರ, ಭಾರತೀಯ ಸಂಸ್ಕೃತಿ ಪರಂಪರೆ ಉಳಿಸಲು ಸಂಘಟನಾ ಶಕ್ತಿ ಅಗತ್ಯ ಎಂದು ಬಾ ಜ ಪಾ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಹೇಳಿದರು.
Read Moreಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಮುದಾಯ ಅಭಿವೃದ್ಧಿ ವಿಭಾಗದಿಂದ ಬಂಟ್ವಾಳ ತಾಲೂಕು ವೀರಕಂಭ ಗ್ರಾಮದ ಮಜಿ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ನೂತನ ಸಭಾ ಭವನ ರಚನೆಗೆ ರಚನೆಗೆ ರೂ 75 ಸಾವಿರ ಮಂಜೂರಾಗಿದ್ದು ಇದರ ಮಂಜೂರಾತಿ ಪತ್ರ ಹಸ್ತಾಂತರಕಾರ್ಯಕ್ರಮ ಮೇ 5 ಮಗಳವಾರ ಜರಗಿತು
Read Moreಬಂಟ್ವಾಳ :ಕಂದಾಯ ಇಲಾಖೆಯ ಅಡಿಯಲ್ಲಿ ಬರುವ ಭೂಮಾಪನ ಇಲಾಖೆಯ ಪರವಾನಿಗೆ ಪಡೆದಿರುವ ಭೂಮಾಪಕರು ಮಾರ್ಚ್ ತಿಂಗಳಿನಿಂದ ನಡೆಸುತ್ತಿರುವ ಮುಷ್ಕರದಿಂದಾಗಿ ಜಮೀನು ಮಾರಾಟ ಮತ್ತು ಖರೀದಿ , ಕುಟುಂಬದ ಒಳಗಿನ ವಿಭಾಗ ಪತ್ರ , 11 ಇ ನಕ್ಷೆ , ತಾತ್ಕಲ್ ಪೋಡಿ ಇನ್ನಿತರ ಅಳತೆ ಸಂಬಂಧಿತ ಕೆಲಸ ಕಾರ್ಯಗಳು ಸಂಪೂರ್ಣ ಸ್ಥಗಿತವಾಗಿದ್ದು, ರೈತರಿಗೆ ಮತ್ತು ಜನಸಾಮಾನ್ಯರಿಗೆ ತುಂಬಾ ತೊಂದರೆಯಾಗುತ್ತಿದೆ .
Read More