ಬಂಟ್ವಾಳ :ತಾಲೂಕಿನ ಪುದು ಗ್ರಾಮದ ಸುಜೀರು ಶ್ರೀ ಮಂಗಳಾದೇವಿ ದೇವಸ್ಥಾನದ ಹಿರಿಯ ಅರ್ಚಕರಾದ ಅನಂತ್ ಭಟ್(90) ಅಲ್ಪ ಕಾಲದ ಅಸೌಖ್ಯದಿಂದ ಜೂ 16ರಂದು ರಾತ್ರಿ ನಿಧನ ಹೊಂದಿದರು.
Read Moreಕೋಟ್ಟಯಂ: ಇಡೀ ದೇಶದ ಗಮನ ಸೆಳೆದಿರುವ ಶಬರಿಮಲೆ ದೇಗುಲದಲ್ಲಿ ನಡೆದ ಚಿನ್ನ ಕಳವು ಪ್ರಕರಣದ ಆರೋಪಿಗಳಲ್ಲೋರ್ವ ತಿರುವಿ ದಾಂಕೂರು ಮುಜರಾಯಿ ಮ೦ಡಳಿಯ ಮಾಜಿ ಅಡ್ಮಿನಿಸ್ಟ್ರೇಟಿವ್ ಆಫೀಸರ್ ಮುರಾರಿಬಾಬು (54) ಕೊಚ್ಚಿಯ ಖಾಸಗಿ ಆಸ್ಪತ್ರೆಯಲ್ಲಿ ನಿಧನಹೊಂದಿದರು. ಅರ್ಬುದ ರೋಗದಿಂದ ಬಳಲುತ್ತಿದ್ದ ಇವರು ಕಳೆದ ಮೂರು ತಿಂಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿದ್ದರು.
Read Moreಬಂಟ್ವಾಳ :ಪ್ರಧಾನಮಂತ್ರಿ ನರೇಂದ್ರ ಮೋದಿ ಯವರ ಸುದೀರ್ಘ 12 ವರ್ಷಗಳ ಜನಪರ ಆಡಳಿತ, ಅಭಿವೃದ್ಧಿ ಮತ್ತು ಸೇವಾ ಸಂಕಲ್ಪದ ಅಂಗವಾಗಿ ಬಂಟ್ವಾಳ ಮಂಡಲದಲ್ಲಿ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಮತ್ತು ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಅವರಿಂದ ವಿಶೇಷ ಸಂಪರ್ಕ ಅಭಿಯಾನ ನಡೆಯಿತು.
Read Moreಬಂಟ್ವಾಳ : ಭಾರತೀಯ ಅಂಚೆ ಇಲಾಖೆಯಲ್ಲಿ ಜಿ ಡಿ ಎಸ್ ಪ್ಯಾಕರ್ ಆಗಿ ಸಿದ್ದಕಟ್ಟೆ ಉಪ-ಅಂಚೆ ಕಚೇರಿಯಲ್ಲಿ ಕಳದ 44 ವರ್ಷಗಳ ಕಾಲ ನಿಷ್ಟೆ, ಪ್ರಾಮಾಣಿಕತೆ ಹಾಗೂ ಕರ್ತವ್ಯನಿಷ್ಟೆಯಿಂದ ಸೇವೆ ಸಲ್ಲಿಸಿ ನಿವೃತ್ತರಾಗುತ್ತಿರುವ ಶ್ರೀಧರ ಪೂಜಾರಿ ಅವರ ಸೇವಾ ನಿವೃತ್ತಿ ಸಮಾರಂಭ ಜೂನ್ 19ರಂದು ಮದ್ಯಾಹ್ನ 3ಗಂಟೆಗೆ ಸಿಂತಿ ಕಾಂಪ್ಲೆಕ್ಸ್ ಸಿದ್ದಕಟ್ಟೆ ಅಂಚೆ ಕಚೇರಿ ಸವೀಪ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Read Moreಬೆಂಗಳೂರು: ಆರ್ಎಸ್ಎಸ್ (RSS) ನೋಂದಣಿಗೆ ಆಗ್ರಹಿಸಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಬರೆದ ಬಹಿರಂ ಪತ್ರಕ್ಕೆ ಸ್ವತಃ RSS ಮುಖ್ಯಸ್ಥ ಭಾಗವತ್ (Mohan bhagwat) ಪ್ರತಿಕ್ರಿಯಿಸಿದ್ದು, ಇದೊಂದು ರಾಜಕೀಯ ಗಿಮಿಕ್, ನಮ್ಮ ಚಟುವಟಿಕೆಗಳು ರಹಸ್ಯವಾಗಿಲ್ಲ. ಹಿಂದೂ ಧರ್ಮ ಎಲ್ಲಾದರೂ ರಿಜಿಸ್ಟರ್ ಆಗಿದೆಯೇ? ಸರ್ಕಾರಿ ಅನುದಾನ ಪಡೆಯುವವರಿಗೆ ಮಾತ್ರ ನೋಂದಣಿ ಅಗತ್ಯವಿದ್ದು, 1950ರಲ್ಲೇ ನಮ್ಮ ಸಂವಿಧಾನವನ್ನು ಸರ್ಕಾರಕ್ಕೆ ಸಲ್ಲಿಸಿದ್ದೇವೆ ಎಂದು ಸ್ಪಷ್ಟಪಡಿಸಿದ್ದಾರೆ.
Read More