More News

ಕೊನೆಗೂ ಕೇರಳದ ಸಿಎಂ ಹೆಸರು ಘೋಷಿಸಿದ AICC: ವಿ.ಡಿ.ಸತೀಶನ್​ ದೇವರನಾಡಿನ ನೂತನ ಮುಖ್ಯಮಂತ್ರಿ

ತಿರುವನಂತಪುರಂ: ಸಾಕಷ್ಟು ಅಳೆದು ತೂಗಿ, ನಾನಾ ಲೆಕ್ಕಾಚಾರಗಳ ಬಳಿಕ ಕೊನೆಗೂ ಕೇರಳದ ನೂತನ ಸಿಎಂ ಆಗಿ ವಿ.ಡಿ.ಸತೀಶನ್ ಅವರ ಹೆಸರನ್ನು ಎಐಸಿಸಿ ಘೋಷಿಸಿದೆ. ಕೇರಳ ಕಾಂಗ್ರೆಸ್ ನಾಯಕರಾದ ಕೆ.ಸಿ ವೇಣುಗೋಪಾಲ್, ವಿ.ಡಿ ಸತೀಶನ್ ಮತ್ತು ರಮೇಶ್ ಚೆನ್ನಿತ್ತಲ ಹೆಸರುಗಳು ಪ್ರಮುಖವಾಗಿ ಸಿಎಂ ರೇಸ್​​ನಲ್ಲಿದ್ದವು. ಆದರೆ ಈ ಪೈಕಿ ವಿ.ಡಿ.ಸತೀಶನ್ ಅವರನ್ನು ನೂತನ ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಲಾಗಿದೆ.

Read More

ಪ್ರಧಾನಿ ಮೋದಿ ಯುಎಇ ಭೇಟಿಯಲ್ಲಿ ಹಲವು ಒಪ್ಪಂದಗಳಿಗೆ ಸಹಿ

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಉಂಟಾಗಿರುವ ಯುದ್ಧದ ಪರಿಸ್ಥಿತಿಯಿಂದಾಗಿ ಜಾಗತಿಕವಾಗಿ ಕಚ್ಚಾ ತೈಲ ಬೆಲೆ ಏರಿಕೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಯುಎಇಗೆ (UAE) ನೀಡಿರುವ ಭೇಟಿಯಿಂದ ಹಲವು ನಿರೀಕ್ಷೆಗಳಿವೆ. ಭಾರತದ ಇಂಧನ ಭದ್ರತೆಯನ್ನು ಖಚಿತಪಡಿಸಿಕೊಳ್ಳುವುದು ಪ್ರಧಾನಿ ಭೇಟಿಯ ಪ್ರಮುಖ ಕಾರ್ಯಸೂಚಿಯಾಗಿದೆ. ಇಂಧನ ಭದ್ರತೆ, ರಕ್ಷಣಾ ಕ್ಷೇತ್ರ ಹಾಗೂ ವ್ಯಾಪಾರದಲ್ಲಿ ಎರಡೂ ದೇಶಗಳ ಮಧ್ಯೆ ಪ್ರಮುಖ ಒಪ್ಪಂದ ಏರ್ಪಟ್ಟಿದೆ.

Read More

ಬಂಟ್ವಾಳ: ಸಮಾಜ ಸೇವಾ ಸಹಕಾರಿ ಸಂಘ ಮೇ.17ರಂದು ಬೋಳಿಯಾರು 18ನೇ ಶಾಖೆ ಶುಭಾರಂಭ.

ಬಂಟ್ವಾಳ: ಕಳೆದ 1981ರಲ್ಲಿ ಸ್ವಾತಂತ್ರ್ಯ ಯೋಧ ಡಾ.ಅಮ್ಮೆಂಬಳ ಬಾಳಪ್ಪ ಮತ್ತು ಸಹಕಾರಿ ಧುರೀಣ ಬಿ. ಹೂವಯ್ಯ ಮೂಲ್ಯ ಇವರ ನೇತೃತ್ವದಲ್ಲಿ ಆರಂಭಗೊಂಡ ಬಂಟ್ವಾಳ ಸಮಾಜ ಸೇವಾ ಸಹಕಾರಿ ಸಂಘದ ವತಿಯಿಂದ ಉಳ್ಳಾಲ ತಾಲ್ಲೂಕಿನ ಬೋಳಿಯಾರು ಎಂಬಲ್ಲಿ ಮೇ.17ರಂದು ಬೆಳಿಗ್ಗೆ ಗಂಟೆ 10.30ಕ್ಕೆ 18ನೇ ಶಾಖೆ ಆರಂಭಗೊಳ್ಳಲಿದೆ ಎಂದು ಸಂಘದ ಅಧ್ಯಕ್ಷ ಸುರೇಶ ಕುಲಾಲ್ ಹೇಳಿದ್ದಾರೆ. ಬಂಟ್ವಾಳದಲ್ಲಿ ಬುಧವಾರ ಸಂಜೆ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, 'ನೂತನ ಶಾಖೆಯನ್ನು ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಉದ್ಘಾಟಿಸಲಿದ್ದು, ಮಾಣಿಲ ಶ್ರೀಧಾಮ ಮೋಹನದಾಸ ಪರಮಹಂಸ ಸ್ವಾಮೀಜಿ ಆಶೀರ್ವಚನ ನೀಡುವರು' ಎಂದರು.

Read More

ಪಲ್ಲಿಪಾಡಿ: ದೈವಗಳ ಚರಿತ್ರೆ ಪುಸ್ತಕ ಲೋಕಾರ್ಪಣೆ.

ಬಂಟ್ವಾಳ : ಕರಿಯಂಗಳ ಗ್ರಾಮದ ಪಲ್ಲಿಪಾಡಿ ಶ್ರೀ ಕೊಡಮಣಿತ್ತಾಯ, ಅಣ್ಣಪ್ಪ ಪಂಜುರ್ಲಿ ಹಾಗೂ ಕಲ್ಲುರ್ಟಿ ದೈವಗಳ ಚರಿತ್ರೆ, ಆಚರಣೆ ಮತ್ತು ಕ್ಷೇತ್ರ ಮಹಿಮೆಯನ್ನು ಒಳಗೊಂಡ ಪುಸ್ತಕವನ್ನು ಇತ್ತೀಚೆಗೆ ಪಲ್ಲಿಪಾಡಿ ಕೊಡಮಣಿತ್ತಾಯ-ಅಣ್ಣಪ್ಪ ಪಂಜುರ್ಲಿ ದೈವಸ್ಥಾನದಲ್ಲಿ ಲೋಕಾರ್ಪಣೆಗೊಳಿಸಲಾಯಿತು.

Read More

ಸಂಸ್ಕಾರಯುತ ಶಿಕ್ಷಣದಿಂದ ವ್ಯಕ್ತಿ ಶ್ರೇಷ್ಠನಾಗಲು ಸಾಧ್ಯ :ಭವಾನಿ ಶಂಕರ್ ಭಟ್

ಬಂಟ್ವಾಳ :ಇತ್ತೀಚಿನ ಸ್ಪರ್ಧಾತ್ಮಕ ಸಮಯದಲ್ಲಿ ವಿದ್ಯಾರ್ಥಿಗಳು ಶಿಕ್ಷಣದೊಂದಿಗೆ ಉತ್ತಮ ಸಂಸ್ಕಾರ ಅಳವಡಿಸಿಕೊಂಡು, ವಿನಯತೆ, ಶಿಸ್ತಿನಿಂದ ನಡೆದರೆ ಸಮಾಜದಲ್ಲಿ ಶ್ರೇಷ್ಠ ವ್ಯಕ್ತಿಯಾಗಿ ಬೆಳೆಯಲು ಸಾಧ್ಯ ಎಂದು ಖ್ಯಾತ ಜೋತಿಷ್ಯರಾದ ವೇದಮೂರ್ತಿ ಭವಾನಿ ಶಂಕರ್ ಭಟ್ ಇರುವೈಲು ಅಭಿಪ್ರಾಯ ವ್ಯಕ್ತಪಡಿಸಿದರು.ಅವರು ಬಂಟ್ವಾಳ ತಾಲೂಕು ಕರ್ಪೆ ಗ್ರಾಮದ ಕಿನ್ನಾಜೆ ಗಣಪತಿ ದೇವಸ್ಥಾನ ವಠಾರದಲ್ಲಿ ಶ್ರೀ ಮಹಾ ಗಣಪತಿ ಸೇವಾ ವೃಂದ ದ ವತಿಯಿಂದ ಜರಗಿದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದರು.

Read More