ಕರಾವಳಿ

More News

ಪ್ರಧಾನಿ ಮೋದಿ ರಾಜಿ ಮಾಡಿಕೊಂಡು ರಾಷ್ಟ್ರವನ್ನೇ ಮಾರಿದ್ದಾರೆ; ಅಮೆರಿಕ ವ್ಯಾಪಾರ ಒಪ್ಪಂದದ ಬಗ್ಗೆ ರಾಹುಲ್ ಗಾಂಧಿ ಆರೋಪ

ನವದೆಹಲಿ: ಇಂದು ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ (Rahul Gandhi) ಸಂಸತ್ತಿನಲ್ಲಿ ಭಾಷಣ ಮಾಡುತ್ತಿದ್ದಾಗ ಭಾರಿ ಗದ್ದಲ ಭುಗಿಲೆದ್ದಿತು. ಚೀನಾದ ವಿಷಯದ ಕುರಿತು ರಾಹುಲ್ ಗಾಂಧಿಯವರ ಭಾಷಣವನ್ನು ವಿರೋಧಿಸಿದ್ದರಿಂದ ಎರಡೂ ಕಡೆಯವರು ಗದ್ದಲ ಮಾಡುತ್ತಲೇ ಇದ್ದರು. ತನಗೆ ಮಾತನಾಡಲು ಬಿಡದಿದ್ದಕ್ಕೆ ಆಕ್ರೋಶಗೊಂಡ ರಾಹುಲ್ ಗಾಂಧಿ, “ನನಗೆ ಮಾತನಾಡಲು ಅವಕಾಶ ನೀಡುತ್ತಿಲ್ಲ. ನಾನು ವಿರೋಧ ಪಕ್ಷದ ನಾಯಕ. ಸದನದಲ್ಲಿ ಮಾತನಾಡುವುದು ನನ್ನ ಹಕ್ಕಾಗಿದ್ದರೂ ನನಗೆ ಮಾತನಾಡಲು ಅವಕಾಶ ನೀಡುತ್ತಿಲ್ಲ” ಎಂದು ಹೇಳಿದ್ದಾರೆ. ಅಮೆರಿಕದೊಂದಿಗಿನ ಒಪ್ಪಂದದ ಕುರಿತು ಪ್ರಧಾನಿ ಮೋದಿ ಒತ್ತಡದಲ್ಲಿ ರಾಜಿ ಮಾಡಿಕೊಳ್ಳಬೇಕಾಯಿತು ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

Read More

ಜ್ಯೋತಿಷಿ ಕಮಲಾಕರ್‌ ಭಟ್‌ & ಸುಚಿತ್ರಾ ಆಂಟಿ ಗ್ಯಾಂಗ್‌ಗೆ ನ್ಯಾಯಾಂಗ ಬಂಧನ ವಿಧಿಸಿದ ಕೋರ್ಟ್‌!

ಸಿದ್ದಾಪುರ : ಜಿಲ್ಲೆಯನ್ನು ಬೆಚ್ಚಿಬೀಳಿಸಿದ್ದ ಸಿದ್ದಾಪುರ ಚಾಕು ಇರಿತ ಹಾಗೂ ಹತ್ಯೆ ಪ್ರಕರಣದ ಪ್ರಮುಖ ಆರೋಪಿಗಳಾದ ಜ್ಯೋತಿಷಿ ಕಮಲಾಕರ್ ಭಟ್ ಮತ್ತು ಇತರ ಆರು ಮಂದಿಗೆ ಸಿದ್ದಾಪುರ ಜೆಎಂಎಫ್‌ಸಿ (JMFC) ನ್ಯಾಯಾಲಯವು ಫೆಬ್ರವರಿ 11ರವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ. ಬಂಧಿತರಾದ ಕಮಲಾಕರ್ ಭಟ್, ಸುಚಿತ್ರಾ, ಲೋಕನಾಥ್, ಆಕಾಶ್, ಫೈಸಲ್, ಇರ್ಫಾನ್ ಅಮಾನುಲ್ಲಾ ಮತ್ತು ಮೆಹಫೂಸ್‌ರನ್ನು ಸದ್ಯ ಪೊಲೀಸರು ಸೆರೆಮನೆಗೆ ಅಟ್ಟಿದ್ದಾರೆ.

Read More

ಭಾರತದ ಮೇಲಿನ ಸುಂಕ 18% ಗೆ ಇಳಿಕೆ – 500 ಶತಕೋಟಿ ಡಾಲರ್‌ ಒಪ್ಪಂದ ಘೋಷಿಸಿದ ಟ್ರಂಪ್‌

ವಾಷಿಂಗ್ಟನ್‌/ನವದೆಹಲಿ: ಭಾರತ ಮತ್ತು ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ದೂರವಾಣಿಯಲ್ಲಿ ಮಾತುಕತೆ ನಡೆಸಿದ ಬಳಿಕ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌, ಬೃಹತ್‌ ವ್ಯಾಪಾರ ಒಪ್ಪಂದ ಘೋಷಣೆ ಮಾಡಿದ್ದಾರೆ. ಜೊತೆಗೆ ಭಾರತದ ಮೇಲಿನ ಪ್ರತಿ ತೆರಿಗೆ ಭಾರವನ್ನ 25% ನಿಂದ 18% ಗೆ ಇಳಿಸಿರುವುದಾಗಿ ತಿಳಿಸಿದ್ದಾರೆ.

Read More

ಫರಂಗಿಪೇಟೆ :ಸೇವಾಂಜಲಿ ಸಂಗೀತ ತರಗತಿಯ ವಾರ್ಷಿಕೋತ್ಸವ ಸಮಾರಂಭ

ಬಂಟ್ವಾಳ: ಸೇವಾಂಜಲಿ ಪ್ರತಿಷ್ಠಾನ ಫರಂಗಿಪೇಟೆ ಇದರ ಆಶ್ರಯದಲ್ಲಿ ಸೇವಾಂಜಲಿ ಸಂಗೀತ ತರಗತಿ ಯ ವಾರ್ಷಿಕೋತ್ಸವ ಭಾನುವಾರ ನಡೆಯಿತು.

Read More

ರಂಜಾನ್ ಹಿನ್ನೆಲೆ ಉರ್ದು ಶಾಲಾ ಸಮಯ ಬದಲಾವಣೆಗೆ ವಿರೋಧ: ಇದ್ಯಾವ ಸಮಾನತೆ ಎಂದ ಯತ್ನಾಳ್​

ಬೆಂಗಳೂರು: ಮುಸ್ಲಿಮರ ಪವಿತ್ರ ಹಬ್ಬ ರಂಜಾನ್ ಹಿನ್ನೆಲೆಯಲ್ಲಿ ಕರ್ನಾಟಕದ ಉರ್ದು ಮಾಧ್ಯಮ ಕಿರಿಯ ಪ್ರಾಥಮಿಕ ಮತ್ತು ಮಾಧ್ಯಮಿಕ ಶಾಲೆಗಳ ಶಾಲಾ ಸಮಯವನ್ನು ಪರಿಷ್ಕರಿಸಿರೋದಕ್ಕೆ ಹಿಂದೂಪರ ಸಂಘಟನೆಗಳಿಂದ ವಿರೋಧ ವ್ಯಕ್ತವಾಗಿದೆ. ಹಿಂದೂಗಳ ಯಾವುದೇ ಹಬ್ಬಗಳಿಗೂ ಶಾಲಾ ಸಮಯ ಬದಲಾವಣೆ ಮಾಡಲ್ಲ. ಇದು ಕಾನೂನು ಸಮಾನತೆಯ ಉಲ್ಲಂಘನೆಯಾಗಿದ್ದು, ಈ ಕೂಡಲೇ ಸುತ್ತೋಲೆ ವಾಪಸ್​ ಪಡೆಯಬೇಕು. ನವರಾತ್ರಿ, ಗಣೇಶ ಚತುರ್ಥಿಯಂತಹ ಹಬ್ಬಗಳ ಸಂದರ್ಭ ಶಾಲಾ ಸಮಯದಲ್ಲಿ ಯಾವುದೇ ಬದಲಾವಣೆ ಇರಲ್ಲ. ಹೀಗಾಗಿ ತಾರತಮ್ಯ ಬೇಡ ಎಂಬ ಒತ್ತಾಯ ಕೇಳಿ ಬಂದಿದೆ.

Read More