ಮಂಡ್ಯ: ಪ್ರಧಾನಿ ನರೇಂದ್ರ ಮೋದಿಯವರಿಂದು (ಏ.15) ಆದಿಚುಂಚನಗಿರಿಗೆ ಭೇಟಿ ನೀಡಲಿದ್ದು, 80 ಕೋಟಿ ರೂ.ಗೂ ಅಧಿಕ ವೆಚ್ಚದ ಶ್ರೀ ಗುರು ಭೈರವೈಕ್ಯ ಮಂದಿರ ಉದ್ಘಾಟನೆ ಮಾಡಲಿದ್ದಾರೆ.
Read Moreಬಂಟ್ವಾಳ :ಕಳ್ಳಿಗೆ ಗ್ರಾಮದ ಯುವಕರ ಸಂಘ ಮತ್ತು ಕಳ್ಳಿಗೆ ಗ್ರಾಮದ ಮಹಿಳಾ ಸಂಘ. ದೇವಂದಬೆಟ್ಟು ಇದರ 42ನೇ ವರ್ಷದ ವಾರ್ಷಿಕೋತ್ಸವ ಸಮಾರಂಭ ಎ.18ನೇ ಶನಿವಾರ ಸಂಜೆ 7ಕ್ಕೆ ಕನಪಾಡಿ ಕನಪಾಡಿತ್ತಾಯ ದೈವದ ಪಾತ್ರಿ ಧೂಮ ಮೂಲ್ಯ ಇವರು ದೀಪಪ್ರಜ್ವಲನೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.
Read Moreಬಂಟ್ವಾಳ :ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವು ಹೋರಾಟ ಸಮಿತಿ, ಬಂಟ್ವಾಳ' ಇದರ ಸಭೆಯು, ಸಮಿತಿಯ ಗೌರವಾಧ್ಯಕ್ಷರಾದ ಬಿ ರಮಾನಾಥ ರೈ ಅವರ ಅಧ್ಯಕ್ಷತೆಯಲ್ಲಿ ಎ. 15ರಂದು ಬಂಟ್ವಾಳದಲ್ಲಿ ನಡೆಯಿತು. ಬಂಟ್ವಾಳ ತಾಲೂಕಿನ ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳು, ಸಾಮಾಜಿಕ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಸಭೆಯಲ್ಲಿ ಭಾಗಿಗಳಾಗಿದ್ದರು.
Read Moreನವದೆಹಲಿ: ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ ಸಿಬಿಎಸ್ಇ 10ನೇ ತರಗತಿಯ 2026ರ ಫಲಿತಾಂಶಗಳನ್ನು ಏಪ್ರಿಲ್ 15ರ ಸಂಜೆ 4 ಗಂಟೆಗೆ ಪ್ರಕಟಿಸಿದೆ. ಈ ಬಾರಿ ಶೇ 93.70ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಕಳೆದ ವರ್ಷದ ಶೇ 93.66 ಕ್ಕೆ ಹೋಲಿಸಿದರೆ ಶೇ 0.04ರಷ್ಟು ಹೆಚ್ಚಳವಾಗಿದೆ.
Read Moreಪಾಟ್ನಾ: ಬಿಹಾರದ ಮುಖ್ಯಮಂತ್ರಿ ಸ್ಥಾನಕ್ಕೆ ಜೆಡಿಯು ನಾಯಕ ನಿತೀಶ್ ಕುಮಾರ್ (Nitish Kumar) ಇಂದು ರಾಜೀನಾಮೆ ನೀಡಿದ್ದರು. ಅದರ ಬೆನ್ನಲ್ಲೇ ಪಾಟ್ನಾದಲ್ಲಿ ಎನ್ಡಿಎ ಶಾಸಕಾಂಗ ಪಕ್ಷದ ಸಭೆ ನಡೆದಿದ್ದು, ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ (Samrat Chaudhary) ಅವರನ್ನು ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಬಿಹಾರದ ನೂತನ ಮುಖ್ಯಮಂತ್ರಿಯಾಗಿ ಸಾಮ್ರಾಟ್ ಚೌಧರಿ ಆಯ್ಕೆಯಾಗಿದ್ದಾರೆ. ಪ್ರಸ್ತುತ ಅವರು ಬಿಹಾರದ ಉಪಮುಖ್ಯಮಂತ್ರಿಯಾಗಿದ್ದಾರೆ. ಈ ಮೂಲಕ ಬಿಹಾರದಲ್ಲಿ ಮೊದಲ ಬಿಜೆಪಿ ಸರ್ಕಾರ ರಚನೆಯಾಗಲಿದೆ. ಹೀಗಾಗಿ, ಇದು ಬಿಜೆಪಿ ಪಾಲಿಗೆ ಮಹತ್ವದ ಕ್ಷಣವಾಗಿದೆ.
Read More