ದೇಶ ವಿದೇಶ

ಕರಾವಳಿ

More News

ಮೋದಿ ಸೀತಾ ಮಾತೆಯ ಅಪಹರಿಸಲು ಪ್ರಯತ್ನಿಸಿದ ಮಾರೀಚನಂತೆ: ತೆಲಂಗಾಣ ಮುಖ್ಯಮಂತ್ರಿ ರೆಡ್ಡಿ ವಿವಾದಿತ ಹೇಳಿಕೆ

ನವದೆಹಲಿ:‘ಮಾರೀಚ ಸೀತಾಮಾತೆಯನ್ನು ಅಪಹರಿಸಲು ಯತ್ನಿಸಿದಂತೆಯೇ, ಪ್ರಧಾನಿ ಮೋದಿ ಸಂವಿಧಾನವನ್ನು ಅಪಹರಿಸಲು ಯತ್ನಿಸುತ್ತಿದ್ದಾರೆ’ ಎಂದು ತೆಲಂಗಾಣ ಮುಖ್ಯಮಂತ್ರಿ ರೇವಂತ್‌ ರೆಡ್ಡಿ ಶನಿವಾರ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಇದಕ್ಕೆ ಬಿಜೆಪಿ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ದೆಹಲಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ರೇವಂತ್‌, ‘ಸೀತಾಮಾತೆಯ ಅಪಹರಣಕ್ಕಾಗಿ ಮಾರೀಚ ಬಂದಿದ್ದ. ಅದೇ ರೀತಿ ಮೋದಿಜಿ ಮತ್ತು ಇಡೀ ಬಿಜೆಪಿ-ಎನ್‌ಡಿಎ ಸಂವಿಧಾನವನ್ನು ಕಸಿದುಕೊಳ್ಳಲು ಪ್ರಯತ್ನಿಸುತ್ತಿವೆ. ಆದರೆ ಅಂತಹ ಯಾವುದೇ ಪ್ರಯತ್ನ ಯಶಸ್ವಿಯಾಗಲು ನಾವು ಬಿಡುವುದಿಲ್ಲ’ ಎಂದಿದ್ದಾರೆ.

Read More

ಕುಮ್ಡೆಲ್: ಎ.21ರಂದು ನಾಗಬ್ರಹ್ಮ ಸನ್ನಿಧಿ ಶ್ರೀ ಕೋರ್ದಬ್ಬು ದೈವಸ್ಥಾನದ ಪ್ರತಿಷ್ಠಾ ವರ್ಧಂತಿ ಉತ್ಸವ.

ಬಂಟ್ವಾಳ :ತಾಲೂಕಿನ ಪುದು ಗ್ರಾಮದ ಶ್ರೀ ನಾಗಬ್ರಹ್ಮ ಸನ್ನಿಧಿ ಶ್ರೀ ಕೋರ್ದಬ್ಬು ದೈವಸ್ಥಾನ, ಕುಮ್ಡೆಲ್ ಪುದು-ತುಂಬೆ, ಇದರ ಪ್ರತಿಷ್ಠಾ ವರ್ಧಂತಿ ಉತ್ಸವವು ಎ.21ನೇ ಮಂಗಳವಾರ ನಡೆಯಲಿದೆ.

Read More

ನೆತ್ತರಕೆರೆ :ಸರಕಾರಿ ಶಾಲಾ ನೂತನ ಕೊಠಡಿ ನಿರ್ಮಾಣಕ್ಕೆ ಶಿಲಾನ್ಯಾಸ.

ಬಂಟ್ವಾಳ : ತಾಲೂಕಿನ ಕಳ್ಳಿಗೆ ಗ್ರಾಮದ ನೆತ್ತರಕೆರೆ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಗೆ, ದಿ.ವಸಂತಿ ವಿಠ್ಠಲ ಶೆಟ್ಟಿ ಮುಂಡಾಜೆಗುತ್ತು ಇವರ ಸ್ಮರಣಾರ್ಥ ಅವರ ಮಕ್ಕಳು ಕೊಡುಗೆಯಾಗಿ ನೀಡುವ ನೂತನ ನಾಲ್ಕು ಕೊಠಡಿ ನಿರ್ಮಾಣಕ್ಕೆ ಕುಟುಂಬಸ್ಥರ ಪರವಾಗಿ ಪ್ರಗತಿಪರ ಕೃಷಿಕ ಜ್ಯೋತಿಂದ್ರ ಶೆಟ್ಟಿ ಮುಂಡಾಜೆಗುತ್ತು ಶೀಲಾನ್ಯಾಸ ನೆರವೇರಿಸಿದರು.

Read More

ಕಳ್ಳಿಗೆ: ಯುವಕರ ಸಂಘದ ಸಂಭ್ರಮದ ವಾರ್ಷಿಕೋತ್ಸವ ಸಮಾರಂಭ. ಸಮಾಜದಲ್ಲಿ ಎಲ್ಲಾ ವರ್ಗದ ಜನರು ಬಲಿಷ್ಠರಾದರೆ ದೇಶ ಸದೃಢ: ರಮಾನಾಥ ರೈ

ಬಂಟ್ವಾಳ :ಕಳ್ಳಿಗೆ ಗ್ರಾಮದ ಯುವಕರ ಸಂಘ ಮತ್ತು ಕಳ್ಳಿಗೆ ಗ್ರಾಮದ ಮಹಿಳಾ ಸಂಘ.  ಇದರ 42ನೇ ವರ್ಷದ  ವಾರ್ಷಿಕೋತ್ಸವ ಸಮಾರಂಭವು ಎ.18ನೇ ಶನಿವಾರ ದೇವಂದಬೆಟ್ಟು ಶ್ರೀ ಲಕ್ಷ್ಮೀ ವಿಷ್ಣುಮೂರ್ತಿ ದೇವಸ್ಥಾನದ ವಠಾರದಲ್ಲಿ ವಿಜೃಂಭಣೆಯಿಂದ ನಡೆಯಿತು.

Read More

ಮೋದಿ ಸರ್ಕಾರದ ಕನಸು ಭಗ್ನ, ಮಹಿಳಾ ಮೀಸಲಿಗೆ ಲೋಕಸಭೆಯಲ್ಲಿ ಸೋಲು!

ನವದೆಹಲಿ : ಲೋಕಸಭೆ, ವಿಧಾನಸಭೆಗಳಲ್ಲಿ ಶೇ.33 ಮಹಿಳಾ ಮೀಸಲಾತಿ ನೀಡಲು ಉದ್ದೇಶಿಸಿದ್ದ 'ಸಂವಿಧಾನ (131ನೇ ತಿದ್ದುಪಡಿ) ಮಸೂದೆ -2026' ಲೋಕಸಭೆಯಲ್ಲಿ ಶುಕ್ರವಾರ ಸೋಲು ಕಂಡಿದೆ. ಈ ಮೂಲಕ 2029ರ ಲೋಕಸಭೆ ಚುನಾವಣೆಯಿಂದ ಶೇ.33 ಮಹಿಳಾ ಮೀಸಲು ಜಾರಿಗೊಳಿಸುವ ಮೋದಿ ಸರ್ಕಾರದ ಕನಸು ಭಗ್ನವಾಗಿದೆ. ಸಾಂವಿಧಾನಿಕ ತಿದ್ದುಪಡಿ ಆದ ಕಾರಣ ಅಂಗೀಕಾರಕ್ಕೆ ಅಗತ್ಯವಾಗಿದ್ದ 3ನೇ 2ರಷ್ಟು ಬಹುಮತ ಬಾರದೇ ಮಸೂದೆಗೆ 54 ಮತ ಅಂತರದಿಂದ ಸೋಲಾಗಿದೆ.

Read More