ದೇಶ ವಿದೇಶ

ಕರಾವಳಿ

More News

ಕುರಿ ಮಟನ್ ಬದಲಾಗಿ ದನದ ಮಾಂಸ ನೀಡ್ತಿದ್ದ ರೆಸ್ಟೋರೆಂಟ್‌ಗೆ ಬೀಗ; ಇಬ್ಬರ ಬಂಧನ

ಬೆಂಗಳೂರಿನ ಬೂದಿಗೆರೆ ಕ್ರಾಸ್‌ನಲ್ಲಿರುವ ಕಾಯಲೋರಂ ರೆಸ್ಟೋರೆಂಟ್‌ನಲ್ಲಿ ಮಟನ್ ಎಂದು ನಂಬಿಸಿ ಗ್ರಾಹಕರಿಗೆ ದನದ ಮಾಂಸವನ್ನು ನೀಡಲಾಗುತ್ತಿತ್ತು. ಅನುಮಾನಗೊಂಡ ಯುವಕರು ಪೊಲೀಸರಿಗೆ ಮಾಹಿತಿ ನೀಡಿದಾಗ ಈ ವಂಚನೆ ಬಯಲಾಗಿದ್ದು, ಪೊಲೀಸರು ಇಬ್ಬರನ್ನು ಬಂಧಿಸಿ ರೆಸ್ಟೋರೆಂಟ್‌ಗೆ ಬೀಗ ಹಾಕಿದ್ದಾರೆ.

Read More

ಕೈಯೂರು: ಶಾಸಕ ರಾಜೇಶ್ ನಾಯ್ಕ್ ರಿಂದ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ.

ಬಂಟ್ವಾಳ: ಶಾಸಕರಾದ ರಾಜೇಶ್ ನ್ಯಾಕ್ ಉಳಿಪಾಡಿಯವರು  ಇಂದು ಶಾಸಕರ ಅನುದಾನದ ಕೈಯೂರು ಅಂಗನವಾಡಿ ಕಟ್ಟಡ ಮತ್ತು ಸಂಪರ್ಕ ರಸ್ತೆ ಒಟ್ಟು 16 ಲಕ್ಷ ರೂ, ವಿಧಾನಪರಿಷತ್ ಸದಸ್ಯರಾದ ಕಿಶೋರ್ ಕುಮಾರ್ ಅವರ ಅನುದಾನದ ಕೆಯ್ಯೂರು ಸ್ಥಾನಮೂಲೆ ರಸ್ತೆ ಕಾಂಕ್ರೀಟೀಕರಣ 5 ಲಕ್ಷ ರೂ ಕಾಮಗಾರಿಗಳನ್ನು ಉದ್ಘಾಟಿಸಿ ಮಂಚಿ ಗ್ರಾಮದಲ್ಲಿ ಕಳೆದ ಬಿಜೆಪಿ ಸರಕಾರದ ಅವಧಿಯಲ್ಲಿ 8.50 ಕೋಟಿ ರೂ ಅನುದಾನದಲ್ಲಿ ಬಹುತೇಕ ಕಾಮಗಾರಿಗಳು ನಡೆದಿದ್ದು ಬಾಕಿ ಉಳಿದ ಸಣ್ಣಪುಟ್ಟ ಅಭಿವೃದ್ಧಿ ಕಾಮಗಾರಿಗಳು ಈಗ ನಡೆದು ಉದ್ಘಾಟನೆಗೊಳ್ಳುತ್ತಿದೆ ಎಂದು ಹೇಳಿದರು.

Read More

ಕಾಸರಗೋಡಿನ ಪ್ರಗತಿಯ ನೆಗೆತ್ತಕ್ಕೆ 100 ಕೋಟಿ ರೂ.ಗಳ ಅಭಿವೃದ್ಧಿ ಪ್ಯಾಕೇಜ್ ಕರಡು ಸಮರ್ಪಣೆ

ಕಾಸರಗೋಡು: ಈ ಆರ್ಥಿಕ ವರ್ಷದಲ್ಲಿ ಕಾಸರಗೋಡು ಅಭಿವೃದ್ಧಿ ಪ್ಯಾಕೇಜ್‌ಗಾಗಿರುವ 100 ಕೋಟಿ ರೂ.ಗಳ ಕರಡು ವಾರ್ಷಿಕ ಯೋಜನೆಯನ್ನು ಸಲ್ಲಿಸಲಾಗಿದೆ. ಆರೋಗ್ಯ, ಶಿಕ್ಷಣ, ಮೂಲಭೂತ ಸೌಕರ್ಯ ಅಭಿವೃದ್ಧಿ ಪ್ರವಾಸೋ ಧ್ಯಮ, ಕೃಷಿ ಮೊದಲಾದ ವಲಯಗಳಲ್ಲಿ ಭಾರೀ ಪ್ರಗತಿಯನ್ನು ಗುರಿ ಇರಿಸಿ 27 ಪ್ರಧಾನ ಯೋಜನೆಗಳನ್ನು ಸಮಗ್ರವಾದ ಈ ಕರಡುನಲ್ಲಿ ಸೇರಿಸಿಕೊಳ್ಳಲಾಗಿದೆ.

Read More

ಕೇಂದ್ರಸರಕಾರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ, ಪಂಚಾಯತ್ ರಾಜ್  ದುರ್ಬಲಗೊಳಿಸಲು ಬಿಜೆಪಿ ಯತ್ನ: ಮಾಜಿ ಸಚಿವ ರಮಾನಾಥ ರೈ

ಬಂಟ್ವಾಳ: ಅಧಿಕಾರ ವಿಕೇಂದ್ರೀಕರಣದ ಉದ್ದೇಶದಿಂದ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಮಂಡಿಸಿದ್ದ ಪಂಚಾಯತ್ ರಾಜ್ ತಿದ್ದುಪಡಿ ಕಾಯ್ದೆಗೆ ಬಿಜೆಪಿ ಅಡ್ಡಿಪಡಿಸಿತ್ತು. ಬಳಿಕ ಕಾಂಗ್ರೆಸ್ ಆಡಳಿತಾವಧಿಯಲ್ಲೇ ಪಂಚಾಯತ್ ರಾಜ್ ವ್ಯವಸ್ಥೆ ಅನುಷ್ಠಾನಗೊಂಡಿದ್ದು, ಗ್ರಾಮೀಣ ಜನರಿಗೆ ಅಧಿಕಾರ ಹಂಚಿಕೆಯಲ್ಲಿ ಕಾಂಗ್ರೆಸ್ ಮಹತ್ವದ ಪಾತ್ರ ವಹಿಸಿದೆ ಎಂದು ಮಾಜಿ ಸಚಿವ ಬಿ. ರಮಾನಾಥ ರೈ ಹೇಳಿದರು.

Read More

ಫರಂಗಿಪೇಟೆ :ಶ್ರೀ ಆಂಜನೇಯ ದೇವಸ್ಥಾನದಲ್ಲಿ ಉಚಿತ ಯೋಗ ಶಿಕ್ಷಣ ತರಗತಿ ಉದ್ಘಾಟನೆ.

ಬಂಟ್ವಾಳ : ವಿಶ್ವ ಯೋಗ ದಿನಾಚರಣೆಯ ಪ್ರಯುಕ್ತ ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿಯ ಫರಂಗಿಪೇಟೆ ಶ್ರೀ ಆಂಜನೇಯ ಶಾಖೆಯಲ್ಲಿ 21 ದಿನಗಳ ಉಚಿತ ಯೋಗ ಶಿಕ್ಷಣ ತರಗತಿಯ ಉದ್ಘಾಟನೆಯು ಫರಂಗಿಪೇಟೆ  ಶ್ರೀ ಆಂಜನೇಯ ದೇವಸ್ಥಾನದಲ್ಲಿ ನಡೆಯಿತು.

Read More