ಗುವಾಹಟಿ: ಅಸ್ಸಾಂನಲ್ಲಿ ಮಂಗಳವಾರ ಮತ್ತೆ ಏಳು ಜನರು ಪ್ರವಾಹಕ್ಕೆ ಬಲಿಯಾಗುವುದರೊಂದಿಗೆ ಒಟ್ಟು ಮೃತರ ಸಂಖ್ಯೆ 75ಕ್ಕೆ ಏರಿಕೆಯಾಗಿದೆ. ಆದಾಗ್ಯೂ, ಏಳು ಜಿಲ್ಲೆಗಳಲ್ಲಿ ಪ್ರವಾಹ ಬಾಧಿತ ಜನರ ಸಂಖ್ಯೆ 3.32 ಲಕ್ಷಕ್ಕೆ ಇಳಿಕೆಯಾಗಿದೆ ಎಂದು ಅಧಿಕೃತ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
Read Moreಬಂಟ್ವಾಳ : ತಾಲೂಕಿನ ತೆಂಕಬೆಳ್ಳೂರು ಗ್ರಾಮದ ಕಾಗುಡ್ಡೆಯಲ್ಲಿ ಬಿರುಗಾಳಿ ಹಾಗೂ ಭಾರೀ ಮಳೆಯಿಂದ ಜಯ ಸಪಲ್ಯ ಅವರ ಮನೆಯ ಛಾವಣಿ ಕುಸಿದು ಹಾನಿಗೊಳಗಾದ ಸ್ಥಳಕ್ಕೆ ಹಾಗೂ ಸಜಿಪಮೂಡ ಗ್ರಾಮದ ಕೊಳಕೆ ಎಂಬಲ್ಲಿ ವಿದ್ಯುತ್ ಅವಘಡ ಸಂಭವಿಸಿದ ಚಂದ್ರಹಾಸ ಪೂಜಾರಿ ಅವರ ಮನೆಗೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
Read Moreಬಂಟ್ವಾಳ, ಜು. 30: ಬಿ.ಸಿ ರೋಡ್ ಹಾಗೂ ಪಂಪ್ ವೆಲ್ ನಲ್ಲಿ ಕಾರ್ಯಾಚರಿಸುತ್ತಿರುವ ಎಂಐಟಿಇ ಟೆಕ್ನಿಕಲ್ ಆ್ಯಂಡ್ ಪ್ರೊಫೆಶನಲ್ ಕಾಲೇಜ್ ನ ಓರಿಯೆಂಟೇಶನ್ ಕಾರ್ಯಕ್ರಮ ಗುರುವಾರ ಬಿ.ಸಿ ರೋಡ್ ನ ಲಯನ್ಸ್ ಕ್ಲಬ್ ನಲ್ಲಿ ಗುರುವಾರ ನಡೆಯಿತು.
Read Moreಬಂಟ್ವಾಳ :ರಾಜ್ಯದೆಲ್ಲೆಡೇ ಸೇರಿದಂತೆ ಕರಾವಳಿ ಜಿಲ್ಲೆಗಳಲ್ಲಿನ ಕೆಲವೊಂದು ಪ್ರದೇಶಗಳಲ್ಲಿ ಯುವಜನರಲ್ಲಿ ಮತ್ತು ವಿದ್ಯಾರ್ಥಿಗಳಲ್ಲಿ ಡ್ರಗ್, ಗಾಂಜಾ ಸಹಿತ ಮಾದಕ ಸೇವನೆಯು ಅತಿಯಾಗುತ್ತಿದ್ದು ಡ್ರಗ್ಸ್ ಮಾಫಿಯಾಕ್ಕೆ ಕಡಿವಾಣ ಹಾಕಬೇಕಾಗಿದೆ.ಆಂಬುಲೆನ್ಸ್ ವಾಹನದಲ್ಲಿಯೂ ಸಹ ಮಾದಕ ಸೇವನೆಯ ಐಟಂ ಗಳು ಸಾಗಾಟ ವಾಗುತ್ತಿದೆ ಎಂದಾದರೆ ತಡೆಕಟ್ಟುವಿಕೆ ಪೊಲೀಸ್ ಇಲಾಖೆಗೆ ಸವಾಲಾಗಿ ಪರಿಣಮಿಸಿದೆ. ಈ ಸವಾಲಿನ ಸಮಯದಲ್ಲಿ ವಿದ್ಯಾರ್ಥಿಗಳನ್ನು ಡ್ರಗ್ ಟೆಸ್ಟ್ ಗೆ ಒಳಪಡಿಸುವ ಪೊಲೀಸರ ಕಾರ್ಯಶೈಲಿ ಶ್ಲಾಘನೀಯವಾಗಿದೆ ಎಂದು ಬಂಟ್ವಾಳ ತಾಲೂಕು ಪಂಚಾಯತ್ ಮಾಜಿ ಸದಸ್ಯ ಪ್ರಭಾಕರ ಪ್ರಭು ಪತ್ರಿಕಾ ಹೇಳಿಕೆಯ ಮೂಲಕ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
Read Moreಬೆಂಗಳೂರು: ಬೆಂಗಳೂರಿನ (Bengaluru) ನಮ್ಮ ಮೆಟ್ರೋದಲ್ಲಿ ದಿನದಿಂದ ದಿನಕ್ಕೆ ಪ್ರಯಾಣಿಕರ ಸಂಖ್ಯೆ ಹೆಚ್ಚಾಗುತ್ತಿದ್ದರೂ, ಬಿಎಂಆರ್ಸಿಎಲ್ಗೆ (BMRCL) ನಷ್ಟದ ಪ್ರಮಾಣವೂ ಏರಿಕೆಯಾಗುತ್ತಿದೆ. ಕಳೆದ ಮೂರು ಹಣಕಾಸು ವರ್ಷಗಳಲ್ಲಿ ಒಟ್ಟು 1,614 ಕೋಟಿ ರೂ. ನಷ್ಟ ದಾಖಲಾಗಿದ್ದು, ಇದೇ ಕಾರಣವನ್ನು ಮುಂದಿಟ್ಟುಕೊಂಡು ಪ್ರತಿ ಮೂರು ವರ್ಷಕ್ಕೊಮ್ಮೆ ಶೇ 12 ರ ಟಿಕೆಟ್ ದರ ಹೆಚ್ಚಳಕ್ಕೆ ಬಿಎಂಆರ್ಸಿಎಲ್ ಪ್ರಸ್ತಾವನೆ ಸಲ್ಲಿಸಿರುವ ಮಾಹಿತಿ ಲಭ್ಯವಾಗಿದೆ.
Read More