ಬಂಟ್ವಾಳ :ತಾಲೂಕಿನ ಕೇಂದ್ರ ಸ್ಥಾನ ಬಿ ಸಿ ರೋಡಿನ ಸ್ಪರ್ಶ ಕಲಾ ಮಂದಿರದಲ್ಲಿ ಕರ್ನಾಟಕ ಸರಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಹಾಗೂ ಚಿಣ್ಣರ ಲೋಕ ಮೋಕೆದ ಕಲಾವಿದೆರ್ ಸೇವಾ ಟ್ರಸ್ಟ್ ಬಂಟ್ವಾಳ, ಚಿಣ್ಣರಲೋಕ ಸೇವಾ ಬಂಧು ಸಂಯುಕ್ತ ಆಶ್ರಯದಲ್ಲಿ "ಕರಾವಳಿ ಕಲೋತ್ಸವ 2026" ಹಾಗೂ ತುಳು, ಕೊಂಕಣಿ, ಬ್ಯಾರಿ, ಅರೆಭಾಷೆ ಅಕಾಡೆಮಿ ಸಹಯೋಗದೊಂದಿಗೆ ಬಹುಸಂಸ್ಕೃತಿ ಉತ್ಸವ ಮತ್ತು ಆಹಾರ ಮೇಳ ಮೇ 4ರಿಂದ 9ವರೆಗೆ ನಡೆಯಲಿದೆ ಎಂದು ಕರಾವಳಿ ಕಲೋತ್ಸವ ಅಧ್ಯಕ್ಷ ಸುದರ್ಶನ ಜೈನ್ ಎ 30ರಂದು ಬಿ.ಸಿ.ರೋಡಿನ ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನ ಸಭಾಂಗಣದಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಹೇಳಿದರು.
Read Moreನವದೆಹಲಿ: ವಾಣಿಜ್ಯ ಎಲ್ಪಿಜಿ ಸಿಲಿಂಡರ್(Commercial LPG Cylinder) ಬೆಲೆಯಲ್ಲಿ ಭಾರೀ ಏರಿಕೆಯಾಗಿದ್ದು, ಮೇ 1 ಜಾರಿಗೆ ಬರುವಂತೆ 993 ರೂಪಾಯಿ ಹೆಚ್ಚಳ ಮಾಡಲಾಗಿದೆ.
Read Moreಬಂಟ್ವಾಳ: ಫರಂಗಿಪೇಟೆ ಕಲ್ಲತಡಮೆ ಕೆರೆಬಿತ್ತಿಲು ಶ್ರೀ ರಕ್ತೇಶ್ವರೀ ಜುಮಾದಿ ಬಂಟ, ಮೈಸಂದಾಯ ದೈವಸ್ಥಾನದಲ್ಲಿ ನೂತನವಾಗಿ ನಿರ್ಮಾಣಗೊಂಡ ಶಿಲಾಮಯ ಆಲಯದಲ್ಲಿ ಶ್ರೀ ದೈವಗಳ ಪುನಃ ಪ್ರತಿಷ್ಠೆ, ಸಾನಿಧ್ಯ ಕಲಶಾಭಿಷೇಕ ಹಾಗೂ ನೇಮ ಮೇ 7 ಹಾಗೂ 8ರಂದು ನಡೆಯಲಿದೆ.
Read Moreಶಿವಮೊಗ್ಗ: ಪತಿಯ ಅನೈತಿಕ ಸಂಬಂಧ ಹಾಗೂ ದೈಹಿಕ-ಮಾನಸಿಕ ಹಿಂಸೆಯಿಂದ ಬೇಸತ್ತ ಬಿಜೆಪಿ (BJP) ಮುಖಂಡನ ಪತ್ನಿಯೊಬ್ಬರು ನೇಣಿಗೆ ಶರಣಾಗಿರುವ ಘಟನೆ ಸೊರಬ ಪಟ್ಟಣದ ಕಾನುಕೇರಿ ಬಡಾವಣೆಯಲ್ಲಿ ನಡೆದಿದೆ. ಹಾವೇರಿ ಜಿಲ್ಲೆ ಹಿರೇಕೆರೂರು ತಾಲೂಕಿನ ಹೊಸವೀರಾಪುರ ಗ್ರಾಮದ ಮಂಜುಳಾ (38) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಈ ಬಗ್ಗೆ ಮೃತಳ ತಾಯಿ ಸೊರಬ ಪೋಲೀಸರಿಗೆ ದೂರು ನೀಡಿದ್ದು, ಇದರ ಆಧಾರದಲ್ಲಿ ಬಿಜೆಪಿ ಮುಖಂಡ ಪ್ರಭು ಮೇಸ್ತ್ರಿಯನ್ನು ಬಂಧಿಸಲಾಗಿದೆ. ಅಲ್ಲದೆ, ಪ್ರಭು ಮೇಸ್ತ್ರಿಯ ಹಲವು ವಿಚಾರಗಳು ಬೆಳಕಿಗೆ ಬಂದಿವೆ.
Read Moreಬಂಟ್ವಾಳ :ಭಾರತ್ ಆಗ್ರೋವೆಟ್ ಇಂಡಸ್ಟ್ರಿಸ್ ಫ್ರೈ ಲಿ ಇವರು ಬ್ರಹ್ಮಶ್ರೀ ರಿಕ್ಷಾ ಚಾಲಕ ಮತ್ತು ಮಾಲಕರ ಸಂಘ (ರಿ ) ಇವರಿಗೆ ಕೊಡುಗೆಯಾಗಿ ನಿರ್ಮಿಸಿ ಕೊಟ್ಟ ಬ್ರಹ್ಮಶ್ರೀ ರಿಕ್ಷಾ ನಿಲ್ದಾಣವನ್ನು ಜ್ಯೋತಿಷಿ ಅನಿಲ್ ಪಂಡಿತ್ ವಲವೂರು ಉದ್ಘಾಟಿಸಿದರು.
Read More