ದೇಶ ವಿದೇಶ

ಕರಾವಳಿ

More News

ರಾಜೀನಾಮೆ ಕೊಡಬೇಡಿ ಸರ್'- ಗುತ್ತಿಗೆ ನೌಕರರ ಕಣ್ಣೀರು: ಸಿಎಂ ನಿವಾಸ ಕಾವೇರಿ ಮುಂದೆ ಅಭಿಮಾನಿಗಳಿಂದ ಘೋಷಣೆ

ಬೆಂಗಳೂರು: ಮುಖ್ಯಮಂತ್ರಿ ಗಾದಿಯಿಂದ ಇಳಿಯುವಂತೆ ಹೈಕಮಾಂಡ್ ಸೂಚನೆ ಸಿಗುತ್ತಿದ್ದಂತೆ ಸಿದ್ದರಾಮಯ್ಯ ಮೌನಕ್ಕೆ ಜಾರಿದ್ದಾರೆ. ತಮ್ಮ ಅಧಿಕೃತ ನಿವಾಸ ಕಾವೇರಿಯಲ್ಲಿ ಇಂದು ಬೆಳಗ್ಗೆ ಅವರು ಸಚಿವರೊಂದಿಗೆ ಉಪಹಾರ ಕೂಟ ನಡೆಸಲಿದ್ದು, ಇದಾದ ಬಳಿಕ ಮಧ್ಯಾಹ್ನ ರಾಜ್ಯಪಾಲರನ್ನು ಭೇಟಿ ಮಾಡಿ ರಾಜೀನಾಮೆ ಸಲ್ಲಿಸುವ ಸಾಧ್ಯತೆ ಇದೆ.

Read More

ನನಗೆ ರಾಷ್ಟ್ರ ರಾಜಕಾರಣದಲ್ಲಿ ಆಸಕ್ತಿ ಇಲ್ಲ, ರಾಜ್ಯ ರಾಜಕೀಯದಲ್ಲೇ ಮುಂದುವರಿಯುತ್ತೇನೆ: ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು: ನನಗೆ ರಾಷ್ಟ್ರ ರಾಜಕಾರಣದಲ್ಲಿ ಆಸಕ್ತಿ ಇಲ್ಲ. ರಾಜ್ಯ ರಾಜಕಾರಣದಲ್ಲೇ ಮುಂದುವರಿಯುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಸ್ಪಷ್ಟಪಡಿಸಿದ್ದಾರೆ.

Read More

ಕೇರಳಂನ ಮಾಜಿ ಸಿಎಂ ಪಿಣರಾಯಿ ನಿವಾಸದ ಮೇಲೆ ಇಡಿ ದಾಳಿ, ಪುತ್ರಿಯ ಭ್ರಷ್ಟಾಚಾರ ಪ್ರಕರಣದಲ್ಲಿ ತನಿಖೆ ಬಿಗಿ

ತಿರುವನಂತಪುರ: ಕೇರಳಂನ ಮಾಜಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್(Pinarayi Vijayan) ನಿವಾಸ ಸೇರಿ 10 ಕಡೆಗಳಲ್ಲಿ ಇಡಿ ಅಧಿಕಾರಿಗಳು ಏಕಕಾಲದಲ್ಲಿ ಶೋಧ ನಡೆಸಿದ್ದಾರೆ. ಕೊಚ್ಚಿ ಮಿನರಲ್ಸ್​ ಮತ್ತು ರೂಟೈಲ್ ಲಿಮಿಟೆಡ್ ಕಂಪನಿಗೆ ಸಂಬಂಧಿಸಿದ ಕೋಟ್ಯಂತರ ರೂಪಾಯಿ ಭ್ರಷ್ಟಾಚಾರ ಮತ್ತು ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ಭಾರಿ ಆ್ಯಕ್ಷನ್​ಗೆ ಇಳಿದಿದೆ. ಈ ಪ್ರಕರಣದ ಇಡಿ ತನಿಖೆಯನ್ನು ರದ್ದುಗೊಳಿಸಲು ಕೇರಳ ಹೈಕೋರ್ಟ್ ನಿರಾಕರಿಸಿದ ಬೆನ್ನಲ್ಲೇ ಈ ದಾಳಿಗಳು ನಡೆದಿರುವುದು ರಾಜಕೀಯ ವಲಯದಲ್ಲಿ ತಲ್ಲಣ ಮೂಡಿಸಿದೆ.

Read More

ಸಿಎಂ ಸಿದ್ದರಾಮಯ್ಯ ರಾಜೀನಾಮೆ ಸುದ್ದಿ ಅಲ್ಲಗಳೆದ ಸುರ್ಜೇವಾಲ: ಊಹಾಪೋಹಗಳಿಗೆ ಕಿವಿಗೊಡದಂತೆ ಮನವಿ

ಬೆಂಗಳೂರು: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ (Siddaramaiah) ನಾಳೆಯೇ (ಮೇ 28) ರಾಜೀನಾಮೆ ನೀಡಲಿದ್ದಾರೆ ಎನ್ನುವ ಸುದ್ದಿ ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದೆ. ಹೈಕಮಾಂಡ್​​ ನಾಯಕರ ಸೂಚನೆಗೆ ಗೌರವ ನೀಡಿ ಸಿದ್ದರಾಮಯ್ಯ ರಾಜೀನಾಮೆ ನಿರ್ಧಾರಕ್ಕೆ ಬಂದಿದ್ದಾರೆ. ಅವರ ಆಪ್ತ ಶಾಸಕರು ಮತ್ತು ಸಚಿವರುಗಳ ಬಳಿಯೂ ಈ ವಿಷಯವನ್ನು ತಿಳಿಸಿದ್ದಾರೆ ಎನ್ನಲಾಗಿದೆ. ಇದಕ್ಕೆ ಪೂರಕವೆಂಬಂತೆ ರಾಜಕೀಯ ಚಟುವಟಿಕೆಗಳೂ ಕರ್ನಾಟಕದಲ್ಲಿ ಬಿರುಸುಗೊಂಡಿವೆ. ಆದರೆ ಈ ನಡುವೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲ ಮಾತ್ರ ಅಚ್ಚರಿಯ ಹೇಳಿಕೆ ನೀಡಿದ್ದಾರೆ.

Read More

ಸುಜೀರು:ಶ್ರೀ ವೀರ ಹನುಮಾನ್ ಮಂದಿರದ ವತಿಯಿಂದ‌ ಸ್ಥಳೀಯ ವಿದ್ಯಾರ್ಥಿಗಳಿಗೆ ಆರ್ಥಿಕ ಸಹಾಯ ವಿತರಣೆ.

ಬಂಟ್ವಾಳ: ಪುದು ಗ್ರಾಮದ‌ ಸುಜೀರು ದತ್ತನಗರದಲ್ಲಿರುವ ಶ್ರೀ ವೀರ ಹನುಮಾನ್ ಮಂದಿರದ ವತಿಯಿಂದ‌ ಸ್ಥಳೀಯ ವಿದ್ಯಾರ್ಥಿಗಳ ಶಾಲಾ ಕಲಿಕೆಗೆ ಪೂರಕವಾಗುವ ನಿಟ್ಟಿನಲ್ಲಿ ಆರ್ಥಿಕ ಸಹಾಯವನ್ನು ನೀಡಲಾಯಿತು.

Read More