ದೇಶ ವಿದೇಶ

ಕರಾವಳಿ

More News

ದೇಶದ ಅತ್ಯಂತ ಭ್ರಷ್ಟ ರಾಜ್ಯಗಳ ಪೈಕಿ ಕರ್ನಾಟಕಕ್ಕೆ 5ನೇ ಸ್ಥಾನ: ಉಪಲೋಕಾಯುಕ್ತ ನ್ಯಾ. ಬಿ. ವೀರಪ್ಪ

ಮಂಡ್ಯ: ರಾಜ್ಯದ ಪ್ರತಿಯೊಂದು ಇಲಾಖೆಯಲ್ಲೂ ಭ್ರಷ್ಟಾಚಾರ ಮಿತಿಮೀರಿದ್ದು, ಕರ್ನಾಟಕ ದೇಶದ ಅತ್ಯಂತ ಭ್ರಷ್ಟ ರಾಜ್ಯಗಳಲ್ಲಿ ಐದನೇ ಸ್ಥಾನದಲ್ಲಿದೆ ಎಂದು ಉಪಲೋಕಾಯುಕ್ತ ನ್ಯಾಯಮೂರ್ತಿ ಬಿ. ವೀರಪ್ಪ ಹೇಳಿದ್ದಾರೆ. ಮಂಡ್ಯ ಮತ್ತು ಮಳವಳ್ಳಿ ತಾಲೂಕುಗಳಲ್ಲಿ ಬಾಕಿ ಉಳಿದಿದ್ದ ಲೋಕಾಯುಕ್ತ ಪ್ರಕರಣಗಳ ವಿಚಾರಣೆ ಪೂರ್ಣಗೊಳಿಸಿದ ಬಳಿಕ ಮಾತನಾಡಿದ ಅವರು, ಭ್ರಷ್ಟಾಚಾರ ನಿಯಂತ್ರಣಕ್ಕೆ ಬರದಿದ್ದರೆ ಭವಿಷ್ಯದಲ್ಲಿ ದೊಡ್ಡ ಅಪಾಯ ಎದುರಾಗಲಿದೆ. ಬದಲಾವಣೆ ಅಧಿಕಾರಿಗಳಿಂದಲೂ, ನಾಗರಿಕರಿಂದಲೂ ಆಗಬೇಕು ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

Read More

'ರಾಜೀವ್ ಗಾಂಧಿ ಜ್ಯೋತಿ ಯಾತ್ರೆ'ಅದ್ದೂರಿ ಚಾಲನೆ, ಯಶಸ್ವಿ ಸಮಾರೋಪ

ಬೆಂಗಳೂರು : ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾರ್ಮಿಕ ವಿಭಾಗದ (INTUC) ನೇತೃತ್ವದಲ್ಲಿ ಕಳೆದ 35 ವರ್ಷಗಳಿಂದ ನಿರಂತರವಾಗಿ ನಡೆಸಿಕೊಂಡು ಬರಲಾಗುತ್ತಿರುವ ಐತಿಹಾಸಿಕ 'ರಾಜೀವ್ ಗಾಂಧಿ ಜ್ಯೋತಿ ಯಾತ್ರೆ'ಯು ಮೇ 21ರಂದು ತಮಿಳುನಾಡಿನ ಶ್ರೀಪೆರಂಬದೂರಿ ನಲ್ಲಿ ಅತ್ಯಂತ ಯಶಸ್ವಿಯಾಗಿ ಸಮಾರೋಪಗೊಂಡಿತು.

Read More

ಕಡೇಶ್ವಾಲ್ಯ- ಅಜಿಲಮೊಗರು ಸೌಹಾರ್ದ ಸೇತುವೆ ಶೀಘ್ರ ಲೋಕಾರ್ಪಣೆ : ಮಾಜಿ ಸಚಿವ ರೈ.

ಬಂಟ್ವಾಳ: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಕಳೆದ 7 ವರ್ಷಗಳ ಹಿಂದೆ ಬಿ.ಸಿ.ರೋಡಿನಲ್ಲೇ ಶಿಲಾನ್ಯಾಸ ನೆರವೇರಿಸಿದ್ದ ರೂ 20 ಕೋಟಿ ವೆಚ್ಚದ ಕಡೇಶ್ವಾಲ್ಯ-ಅಜಿಲಮೊಗರು ಸಂಪರ್ಕಿಸುವ 'ಸೌಹಾರ್ದ ಸೇತುವೆ' ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು, ಪ್ರಸಕ್ತ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಆಡಳಿತಾವಧಿಯಲ್ಲೇ ಲೋಕಾರ್ಪಣೆಗೊಳ್ಳಲಿದೆ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದ್ದಾರೆ.

Read More

ಬಂಟ್ವಾಳ: ಮೇ 24ರಂದು ತಾಲೂಕು ಕುಲಾಲ ಸಂಘದ ಅಶ್ರಯದಲ್ಲಿ "ಕುಲಾಲ ಕ್ರೀಡೋತ್ಸವ 2026". ಪುಟಾಣಿಗಳಿಂದ ಹಿರಿಯರ ತನಕ ಆಟೋಟಗಳ ರಸದೌತಣ ; ಎಂಬತ್ತಕ್ಕೂ ಅಧಿಕ ಸ್ಪರ್ಧೆಗಳ ಆಯೋಜನೆ.

ಬಂಟ್ವಾಳ: ತಾಲೂಕು ಕುಲಾಲ ಸುಧಾರಕ ಸಂಘದ ಆಶ್ರಯದಲ್ಲಿ ‘ಕುಲಾಲ ಕ್ರೀಡೋತ್ಸವ ೨೦೨೬’ ಮೇ ೨೪ರಂದು ಪೊಸಳ್ಳಿ ಕುಲಾಲ ಭವನದ ವಠಾರದಲ್ಲಿ ಸಂಭ್ರಮ, ಸಡಗರಗಳೊಂದಿಗೆ ನಡೆಯಲಿದೆ. ಕ್ರೀಡಾಕೂಟಕ್ಕೆ ಉದ್ಯಮಿ ಶೋಭಾ ಜಯಪ್ರಕಾಶ್ ಚಾಲನೆ ನೀಡಲಿದ್ದು, ಸಭಾ ಕಾರ್ಯಕ್ರಮವನ್ನು ಎಚ್‌ಪಿಸಿಎಲ್ ಉದ್ಯೋಗಿ ನಾರಾಯಣ ಮೂಲ್ಯ ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಬಿ. ರಮೇಶ್ ಸಾಲಿಯಾನ್ ವಹಿಸಲಿದ್ದಾರೆ.

Read More

ಸೋಷಿಯಲ್‌ ಮೀಡಿಯಾದಲ್ಲಿ ಕಾಕ್ರೋಚ್‌ ಜನತಾ ಪಾರ್ಟಿ ಅಬ್ಬರ- ಕಾಕ್ರೋಚ್‌ ಜನತಾ ಪಾರ್ಟಿ ಎಕ್ಸ್‌ ಖಾತೆಗೆ ಭಾರತದಲ್ಲಿ ನಿರ್ಬಂಧ

ನವದೆಹಲಿ: ಸೋಷಿಯಲ್‌ ಮೀಡಿಯಾದಲ್ಲಿ ಕಾಕ್ರೋಚ್‌ ಜನತಾ ಪಾರ್ಟಿ (Cockroach Janta Party) ಅಬ್ಬರ ಜೋರಾಗಿದೆ. ಫಾಲೋವರ್ಸ್‌ ಸಂಖ್ಯೆಯಲ್ಲಿ ನಾಲ್ಕೇ ದಿನಕ್ಕೆ ಬಿಜೆಪಿಯನ್ನು ಸಿಜೆಪಿ ಹಿಂದಿಕ್ಕಿ ಅಚ್ಚರಿ ಮೂಡಿಸಿದೆ.

Read More