ಕರಾವಳಿ

More News

ಡಿಎಂಕೆ, ಅಣ್ಣಾಡಿಎಂಕೆ ಸರ್ಕಾರ ರಚಿಸಲು ಮುಂದಾದ್ರೆ ಟಿವಿಕೆಯ ಎಲ್ಲಾ 108 ಶಾಸಕರು ರಾಜೀನಾಮೆ!

ಚೆನ್ನೈ: ದ್ರಾವಿಡಿಯನ್‌ ಪಕ್ಷಗಳಾದ ಡಿಎಂಕೆ ಅಥವಾ ಎಐಎಡಿಎಂಕೆ ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಮುಂದಾದ್ರೆ, ತಮಿಳಗ ವೆಟ್ರಿ ಕಳಗಂ (TVK) ಪಕ್ಷದ ಎಲ್ಲಾ 108 ಶಾಸಕರು ರಾಜೀನಾಮೆ ನೀಡುವುದಾಗಿ ಎಚ್ಚರಿಕೆ ನೀಡಿದೆ ಎಂದು ಉನ್ನತ ಮೂಲಗಳು ತಿಳಿಸಿರುವುದಾಗಿ ವರದಿಯಾಗಿದೆ.

Read More

ದೀದಿ ಸೋಲಿಸಿದ ಬಿಜೆಪಿ ಅಭ್ಯರ್ಥಿ ಸುವೆಂದು ಅಧಿಕಾರಿ ಪಿಎಗೆ ಗುಂಡಿಕ್ಕಿ ಹತ್ಯೆ

ಕೋಲ್ಕತ್ತಾ: ಇತ್ತೀಚೆಗಷ್ಟೇ ಮುಕ್ತಾಯಗೋಂಡ ಬಂಗಾಳ ಚುನಾವಣೆಯಲ್ಲಿ ಮಮತಾ ಬ್ಯಾನರ್ಜಿ ಅವರನ್ನು ಸೋಲಿಸಿದ ಬಿಜೆಪಿ ಅಭ್ಯರ್ಥಿ ಸುವೇಂದು ಅಧಿಕಾರಿ (Suvendu Adhikari) ಅವರ ಆಪ್ತ ಸಹಾಯಕನ್ನ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಈ ಘಟನೆ ಬಂಗಾಳದಲ್ಲಿ ರಾಜಕೀಯ ಕೋಲಾಹಲ ಎಬ್ಬಿಸಿದ್ದು, ಉದ್ವಿಗ್ನತೆಗೂ ಕಾರಣವಾಗಿದೆ. ಸದ್ಯ 2 ಕ್ಷೇತ್ರಗಳಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಸುವೇಂದು ಸಿಎಂ ಹುದ್ದೆಯ ರೇಸ್‌ನಲ್ಲಿದ್ದಾರೆ.

Read More

ಗೋರೆಮಾರ್: ಮನೆಗೆ ನುಗ್ಗಿ ಲಕ್ಷಾಂತರ ಮೌಲ್ಯದ ನಗ ನಗದು ಕಳ್ಳತನ.

ಬಂಟ್ವಾಳ:ಮನೆಯ ಮುಂಭಾಗಿಲಿನ ಚಿಲಕ ಮುರಿದು ಮನೆಯೊಳಗೆ ನುಗ್ಗಿದ ಕಳ್ಳರು ಕಪಾಟಿನಲ್ಲಿರಿಸಲಾಗಿದ್ದ ಲಕ್ಷಾಂತರ ರೂ ಮೌಲ್ಯದ ನಗ ಹಾಗೂ ಸಾವಿರಾರು ರೂ ನಗದು ಕಳವು ಮಾಡಿದ ಘಟನೆ ಬಂಟ್ವಾಳ ನಗರ ಪೋಲೀಸ್ ಠಾಣಾ ವ್ಯಾಪ್ತಿಯ ಗೋರೆಮಾರ್ ಎಂಬಲ್ಲಿ ನಡೆದಿದೆ. ಗೋರೆಮಾರ್ ನಿವಾಸಿ ಪ್ರಕಾಶ್ ಎಂಬವರ ಮನೆಯಿಂದ ಒಟ್ಟು ರೂ. 4,13,000 ಮೌಲ್ಯದ ಬೆಲೆಬಾಳುವ ಸೊತ್ತುಗಳು ಕಳವಾಗಿದೆ.

Read More

ತಮಿಳುನಾಡು ಗೆದ್ದ ಟಿವಿಕೆಗೆ ವಿಶ್‌ ಮಾಡಿದ ಮೋದಿ, ರಾಹುಲ್‌ ಗಾಂಧಿಗೆ ಧನ್ಯವಾದ ತಿಳಿಸಿದ ವಿಜಯ್‌

ಚೆನ್ನೈ: ತಮಿಳುನಾಡು (Tamil Nadu) ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವು ದಾಖಲಿಸಿದ ಟಿವಿಕೆಗೆ (TVK) ಶುಭಾಶಯ ತಿಳಿಸಿದ ಪ್ರಧಾನಿ ನರೇಂದ್ರ ಮೋದಿ ಮತ್ತು ಲೋಕಸಭಾ ವಿಪಕ್ಷ ನಾಯಕ ರಾಹುಲ್‌ ಗಾಂಧಿಗೆ ಟಿವಿಕೆ ಮುಖ್ಯಸ್ಥ ವಿಜಯ್‌ (Vijay) ಧನ್ಯವಾದ ಅರ್ಪಿಸಿದ್ದಾರೆ.

Read More

ಬಂಟ್ವಾಳ: 'ಮಹಿಳಾ ಮೀಸಲಾತಿಗೆ ಬಿಜೆಪಿ ಇಬ್ಬಗೆ ನೀತಿ' ಕಾಂಗ್ರೆಸ್ ಪ್ರಚಾರ ಸಮಿತಿ ಲೇವಡಿ

ಬಂಟ್ವಾಳ: ದೇಶದಲ್ಲಿ ಮಹಿಳಾ ಮೀಸಲಾತಿ ಮಸೂದೆಗೆ ಕಾಂಗ್ರೆಸ್ ಅಡ್ಡಿ ಪಡಿಸುತ್ತಿದೆ ಎಂದು ಆರೋಪಿಸಿ ಮಹಿಳೆಯರಲ್ಲಿ ಕ್ಷಮೆಯಾಚಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರು ಉತ್ತರ ಪ್ರದೇಶದಲ್ಲಿ ನಡೆದಿರುವ ಅಪ್ರಾಪ್ತ ಯುವತಿಯ ಅತ್ಯಾಚಾರ ಸಹಿತ ಗುಜರಾತಿನಲ್ಲಿ ನಡೆದ ಗರ್ಭಿಣಿ ಮಹಿಳೆಯ ಮೇಲಿನ ಸಾಮೂಹಿಕ ಅತ್ಯಾಚಾರ ಹಾಗೂ ಮಣಿಪುರದಲ್ಲಿ ನಡೆದಿರುವ ಮಹಿಳೆಯರು ಮತ್ತು ಮಕ್ಕಳ ಹತ್ಯೆ ಬಗ್ಗೆ ಮೌನ ತಾಳುವ ಮೂಲಕ ಬಿಜೆಪಿ ಇಬ್ಬಗೆ ನೀತಿ ಜನತೆಗೆ ಚೆನ್ನಾಗಿ ತಿಳಿದಿದೆ ಎಂದು ಕಾಂಗ್ರೆಸ್ ಪ್ರಚಾರ ಸಮಿತಿ ಗ್ರಾಮಾಂತರ ಜಿಲ್ಲಾಧ್ಯಕ್ಷ ಮಹಮ್ಮದ್ ಆಲಿ ಪುತ್ತೂರು ಹೇಳಿದ್ದಾರೆ. ಇಲ್ಲಿನ ಬಿ.ಸಿ.ರೋಡಿನಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ' ಭೇಟಿ ಬಚಾವೋ, ಭೇಟಿ ಪಡಾವೋ' ಘೋಷಣೆ ಕೂಗುವ ಬಿಜೆಪಿ ಆಡಳಿತ ಹೊಂದಿರುವ ಯಾವ ರಾಜ್ಯಗಳಲ್ಲಿ ಮಹಿಳೆಯರು ಸುರಕ್ಷಿತವಾಗಿದ್ದಾರೆ...?' ಎಂದು ಅವರು ಪ್ರಶ್ನಿಸಿದರು.

Read More