ದೇಶ ವಿದೇಶ

ಕರಾವಳಿ

More News

ಮಸೀದಿಗೆ ತೆರಳುತ್ತಿರುವುದಾಗಿ ತಿಳಿಸಿ ಮನೆಯಿಂದ ಹೊರೆಟ ಉಸ್ತಾದ್‌ರ ಮೃತದೇಹ ಹೊಳೆಯಲ್ಲಿ ಪತ್ತೆ

ತಲಪಾಡಿ: ಮಸೀದಿಗೆ ತೆರಳುವುದಾಗಿ ಮನೆಯಲ್ಲಿ ತಿಳಿಸಿ ಹೊರಟ ಉಸ್ತಾದ್‌ರ ಮೃತದೇಹ ಹೊಳೆಯಲ್ಲಿ ಪತ್ತೆಯಾಗಿದೆ. ಕೋಣಾಜೆ ಪೊಲೀಸ್ ಠಾಣೆ ವ್ಯಾಪ್ತಿಯ ಮಂಜನಾಡಿ, ಮಂಗಳಂದಿಯ ಮೊಹಮ್ಮದ್ ಅಶ್ರಫ್ ಮಾಲಿಕಿ (45)ರ ಮೃತದೇಹ ಗುರುಪುರ ಹೊಳೆಯಲ್ಲಿ ಪತ್ತೆಯಾಗಿದೆ.

Read More

ಎಡುವೆಂಚರ್ ಪಿಯು ಕಾಲೇಜಿನಲ್ಲಿ ಸಿ.ಎ ಫೌಂಡೇಶನ್ ಹಾಗೂ ಕಾಮರ್ಸ್ ಅಸೋಸಿಯೇಷನ್ ಉದ್ಘಾಟನೆ

ಬಂಟ್ವಾಳ :ತಾಲೂಕಿನ ಕಳ್ಳಿಗೆ ಗ್ರಾಮದ ನೆತ್ತರಕೆರೆ ಎಡುವೆಂಚರ್ ಪದವಿ ಪೂರ್ವ ಕಾಲೇಜಿನಲ್ಲಿ  ಸಿ.ಎ ಫೌಂಡೇಶನ್ ಹಾಗೂ ಕಾಮರ್ಸ್ ಅಸೋಸಿಯೇಷನ್ ಉದ್ಘಾಟನಾ ಕಾರ್ಯಕ್ರಮ ಜು.01 ರಂದು ಯಶಸ್ವಿಯಾಗಿ ನೆರವೇರಿತು.

Read More

ಅನಾಥ ಮೃತದೇಹದ ಅಂತ್ಯ ಸಂಸ್ಕಾರ: ಕೊಂಡೆವೂರು ಶ್ರೀಗಳಿಂದ ಸ್ಪೆಷ್ಟಿಕರಣ

ಉಪ್ಪಳ: ಹಿಂದೂ ಕಾರ್ಯಕರ್ತನ ಮೃತದೇಹವನ್ನು ಮುಸ್ಲಿಂ ಮಹಿಳೆಯ ನೇತೃತ್ವದಲ್ಲಿ ಸಂಸ್ಕರಿಸಲಾಯಿತೆಂಬ ವರದಿಗಳ ಹಿನ್ನೆಲೆಯಲ್ಲಿ ಕೊಂಡೆವೂರು ಆಶ್ರಮದ ಶ್ರೀ ಯೋಗಾನಂದ ಸರಸ್ವತಿ ಸ್ವಾಮೀಜಿ ಹಾಗೂ ಮಂಗಲ್ಪಾಡಿ ಸೇವಾ ಭಾರತಿ ಸ್ಪಷ್ಟಿಕರಣ ನೀಡಿದೆ. ನಿನ್ನೆ ಕೊಂಡೆವೂರು ಆಶ್ರಮದಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಸ್ವಾಮೀಜಿ ಸ್ಪಷ್ಟಿಕರಣ ನೀಡಿದ್ದಾರೆ. ಮೃತ ನಾರಾಯಣರ ಮೃತದೇಹವನ್ನು ಸಂಸ್ಕರಿಸಲು ಶೇಖ್ ಜಾಯಿದ್ ವೃದ್ಧಾಶ್ರಮದ ಸಂಚಾಲಕ ಇಟ್ಬಾಲ್ ವಿನಂತಿಸಿಕೊಂಡ ಹಿನ್ನೆಲೆಯಲ್ಲಿ ಆಶ್ರಮದ ಕಡೆಯಿಂದ ಮಂಗಲ್ಪಾಡಿ ಸೇವಾ ಭಾರತಿಯ ಅಧ್ಯಕ್ಷ ರಘು ಚೆರುಗೋಳಿಯವರಿಗೆ ಜವಾಬ್ದಾರಿ ನೀಡಲಾಗಿತ್ತು.

Read More

ವಾಮದಪದವು: 2076ನೇ ಮದ್ಯವರ್ಜನ ಶಿಬಿರದ ಸಮಾರೋಪ ಸಮಾರಂಭ.

ಬಂಟ್ವಾಳ: ಮದ್ಯವರ್ಜನ ಶಿಬಿರ ವ್ಯವಸ್ಥಾಪನ ಸಮಿತಿ ವಾಮದಪದವು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್ (ರಿ) ಬಂಟ್ವಾಳ ತಾಲೂಕು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ) ಬಂಟ್ವಾಳ ತಾಲೂಕು ಸ್ಥಳೀಯ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವ್ಯಸನ ಮುಕ್ತಿ ಮತ್ತು ಸಂಶೋಧನಾ ಕೇಂದ್ರ ಲಾಯಿಲ ಬೆಳ್ತಂಗಡಿ ಇದರ ವಿಸ್ತರಣಾ ಅಂಗವಾಗಿ ಜರುಗುವ 2076ನೇ ಮದ್ಯವರ್ಜನ ಶಿಬಿರದ ಸಮಾರೋಪ ಸಮಾರಂಭ ಜುಲೈ 3 ಶುಕ್ರವಾರ ಶ್ರೀ ಪದ್ಮಾವತಿ ಸಭಾಭವನ ಬಸ್ತಿಕೋಡಿಯಲ್ಲಿ ನಡೆಯಿತು.

Read More

30 ದಿನ ಜೈಲಿಗೆ ಹೋದರೆ ಪ್ರಧಾನಿ, ಸಿಎಂ, ಸಚಿವರು ವಜಾ – ಮಸೂದೆಗೆ ಸಿದ್ಧತೆ

ನವದೆಹಲಿ: ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಮುಖ್ಯಮಂತ್ರಿಗಳು ಮತ್ತು ಸಚಿವರು ಸತತ 30 ದಿನಗಳ ಕಾಲ ಬಂಧನದಲ್ಲಿದ್ದರೆ ಅವರನ್ನು ಸ್ವಯಂಚಾಲಿತವಾಗಿ ಅಧಿಕಾರದಿಂದ ತೆಗೆದುಹಾಕುವ ಪರಿಷ್ಕೃತ ಮಸೂದೆಯನ್ನು ಸಂಸತ್ತಿನ ಮಳೆಗಾಲದ ಅಧಿವೇಶನದಲ್ಲಿ ಮಂಡನೆ ಮಾಡುವ ಸಾಧ್ಯತೆ ಇದೆ.

Read More