ಬೆಂಗಳೂರು :ಕರ್ನಾಟಕದ ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಪುಟ ಸೇರುವ ಸಚಿವರ ಪಟ್ಟಿ ಫೈನಲ್ ಆಗಿದೆ.ಸಿಎಂ ಬೊಮ್ಮಾಯಿ ದೆಹಲಿಯಲ್ಲಿ ಹೈ ಕಮಾಂಡ್ ಭೇಟಿ ಮಾಡಿ ಸಚಿವರ ಪಟ್ಟಿ ಫೈನಲ್ ಆದ ಬಳಿಕ ನಿನ್ನೆ ರಾತ್ರಿ ಬೆಂಗಳೂರಿಗೆ ವಾಪಸ್ಸಾಗಿದ್ದರು. ಆ ಬಳಿಕ ಸಚಿವ ಸ್ಥಾನ ಫಿಕ್ಸ್ ಆಗಿರುವ ಶಾಸಕರಿಗೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ.
ಸಿಎಂ ಈವರೆಗೆ ಒಟ್ಟು 29 ಶಾಸಕರಿಗೆ ಕರೆ ಮಾಡಿ ಸಚಿವ ಸ್ಥಾನ ನೀಡಿರುವ ವಿಷಯವನ್ನು ಖಚಿತಪಡಿಸಿದ್ದಾರೆ.ಇಂದು 29 ಮಂದಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. 7 ಮಂದಿ ವಕ್ಕಲಿಗ, 8 ಮಂದಿ ಲಿಂಗಾಯತ, 3 ಎಸ್ಸಿ, ತಲಾ 1 ರೆಡ್ಡಿ ಮಹಿಳೆ, ಎಸ್ಟಿ ಸಮುದಾಯಕ್ಕೆ ಸಚಿವ ಸ್ಥಾನ ಕೊಡಲಾಗಿದೆ. ಇನ್ನು ಮಾಜಿ ಸಿಎಂ ಪುತ್ರ ವಿಜಯೇಂದ್ರ ಅವರಿಗೆ ಸಚಿವ ಸ್ಥಾನ ಕೊಟ್ಟಿಲ್ಲ.ಇಂದು ಮಧ್ಯಾಹ್ನ 2.15ಕ್ಕೆ ರಾಜಭವನದಲ್ಲಿ ನೂತನ ಸಚಿವರ ಪದಗ್ರಹಣ ನಡೆಯಲಿದೆ.
ಪ್ರಮಾಣ ವಚನಕ್ಕೆ ಆಹ್ವಾನ ಸ್ವೀಕರಿಸಿರುವ ಶಾಸಕರ ಪಟ್ಟಿ
1.ಕೆ.ಎಸ್.ಈಶ್ವರಪ್ಪ -ಶಿವಮೊಗ್ಗ
2.ಆರ್.ಅಶೋಕ್- ಪದ್ಮನಾಭ ನಗರ
3.ಬಿ.ಸಿ. ಪಾಟೀಲ್ - ಹಿರೇಕೆರೂರು
4.ಡಾ.ಸಿ.ಎನ್.ಅಶ್ವತ್ಥ ನಾರಾಯಣ - ಮಲ್ಲೇಶ್ವರ
5.ಉಮೇಶ್ ಕತ್ತಿ- ಹುಕ್ಕೇರಿ
6.ಎಸ್.ಟಿ.ಸೋಮಶೇಖರ್- ಯಶವಂತಪುರ
7.ಡಾ.ಕೆ.ಸುಧಾಕರ್ - ಚಿಕ್ಕಬಳ್ಳಾಪುರ
8.ಬೈರತಿ
ಬಸವರಾಜ - ಕೆ ಆರ್ ಪುರಂ
9.ಮುರುಗೇಶ್ ನಿರಾಣಿ - ಬಿಳಿಗಿ
10.ಶಿವರಾಂ ಹೆಬ್ಬಾರ್- ಯಲ್ಲಾಪುರ
11.ಶಶಿಕಲಾ ಜೊಲ್ಲೆ- ನಿಪ್ಪಾಣಿ
12.ಕೆಸಿ ನಾರಾಯಣ್ ಗೌಡ - ಕೆಆರ್ ಪೇಟೆ
13.ಸುನೀಲ್ ಕುಮಾರ್ - ಕಾರ್ಕಳ
14.ಅರಗ ಜ್ಞಾನೇಂದ್ರ - ತೀರ್ಥ ಹಳ್ಳಿ
15.ಗೋವಿಂದ ಕಾರಜೋಳ-ಮುಧೋಳ
16.ಮುನಿರತ್ನ- ಆರ್ ಆರ್ ನಗರ
17.ಎಂ.ಟಿ.ಬಿ ನಾಗರಾಜ್ - ಎಂ ಎಲ್ ಸಿ
18.ಗೋಪಾಲಯ್ಯ- ಮಹಾಲಕ್ಷ್ಮಿ ಲೇಔಟ್
19.ಮಾಧುಸ್ವಾಮಿ- ಚಿಕ್ಕನಾಯಕನಹಳ್ಳಿ
20.ಹಾಲಪ್ಪ ಆಚಾರ್ - ಯಲ್ಬುರ್ಗ
21.ಶಂಕರ್ ಪಾಟೀಲ್ ಮುನೇನಕೊಪ್ಪ - ನವಲುಗುಂದ
22.ಕೋಟಾ ಶ್ರೀನಿವಾಸ ಪೂಜಾರಿ - ಎಂ ಎಲ್ ಸಿ
23.ಪ್ರಭು ಚೌವ್ಹಾಣ್ - ಔರಾದ್
24.ವಿ ಸೋಮಣ್ಣ - ಗೋವಿಂದ್ ರಾಜನಗರ
25.ಎಸ್ ಅಂಗಾರ-ಸುಳ್ಯ
26.ಆನಂದ್ ಸಿಂಗ್ - ಹೊಸಪೇಟೆ
27.ಸಿ ಸಿ ಪಾಟೀಲ್ - ನರಗುಂದ
28.ಬಿಸಿ ನಾಗೇಶ್ - ತಿಪಟೂರು
29.ಬಿ.ಶ್ರೀ ರಾಮುಲು- ಮೊಳಕಾಲುಮ್ಮೂರು















