ಬೆಂಗಳೂರಿನ ಜೆ.ಪಿ. ನಗರದಲ್ಲಿ ನಿರ್ಮಾಪಕ ಆನೇಕಲ್ ಬಾಲರಾಜ್ ಅವರು ನಿಧನರಾಗಿದ್ದಾರೆ. ಭಾನುವಾರ ಬೆಳಗ್ಗೆ ವಾಕಿಂಗ್ಗೆ ತೆರಳಿದ್ದಾಗ ಸಂಭವಿಸಿದ ಅಪಘಾತದಲ್ಲಿ ಅವರು ಕೊನೆಯುಸಿರು ಎಳೆದಿದ್ದಾರೆ.
ಭಾನುವಾರ ಬೆಳಗ್ಗೆ ಜೆ.ಪಿ. ನಗರದ ಅವರ ನಿವಾಸದ ಬಳಿ ವಾಕಿಂಗ್ಗೆ ತೆರಳಿದ್ದಾಗ ಅಪಘಾತಕ್ಕೊಳಗಾದರು. ನಂತರ ಅವರನ್ನು ಆಸ್ಪತ್ರೆಗೆ ದಾಖಲಿಸಿದರೂ ಕೂಡ ಚಿಕಿತ್ಸೆ ಫಲಕಾರಿ ಆಗದೇ ಅವರು ನಿಧನರಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಆನೇಕಲ್ ಬಾಲರಾಜ್ ಅವರಿಗೆ 58 ವರ್ಷ ವಯಸ್ಸಾಗಿತ್ತು.
ಕರಿಯ ಸಿನಿಮಾ
ನಿರ್ಮಾಣ ಮಾಡಿ ಬಾಲರಾಜ್ ಅವರು ಯಶಸ್ಸು ಕಂಡಿದ್ದರು. ಕನ್ನಡ ಚಿತ್ರರಂಗದಲ್ಲಿ ಆನೇಕಲ್ ಬಾಲರಾಜ್ ಅವರು ನಿರ್ಮಾಪಕನಾಗಿ ಗುರುತಿಸಿಕೊಂಡಿದ್ದರು. ಪ್ರೇಮ್ ನಿರ್ದೇಶನದ 'ಕರಿಯಾ', ಶ್ರೀನಿವಾಸ್ ಪ್ರಭು ನಿರ್ದೇಶನ ಮಾಡಿದ್ದ 'ಕರಿಯಾ 2', 'ಗಣಪ' ಸೇರಿದಂತೆ ಅನೇಕ ಸಿನಿಮಾಗಳನ್ನು ಆನೇಕಲ್ ಬಾಲರಾಜ್ ಅವರು ನಿರ್ಮಾಣ ಮಾಡಿದ್ದರು.















