ಬಂಟ್ವಾಳ :ತಾಲೂಕಿನ ಕೊಡ್ಮಾಣ್ ಶ್ರೀ ಕೋರ್ದಬ್ಬು ದೈವಸ್ಥಾನದಲ್ಲಿ ಆರಾಧಿಸಿಕೊಂಡು ಬರುತ್ತಿರುವ ಶ್ರೀ ಕೋರ್ದಬ್ಬು, ತನ್ನಿಮಾನಿಗ ಮತ್ತು ಸಪರಿವಾರ ದೈವಗಳ ವರ್ಷಾವಧಿ ನೇಮೋತ್ಸವ ಮಾ.07 ಹಾಗೂ 08ರಂದು ನಡೆಯಲಿದೆ.
ಮಾ.07ನೇ ಶನಿವಾರ ಬೆಳಿಗ್ಗೆ 9-00ಕ್ಕೆ ಶ್ರೀ ಕೋರ್ದಬ್ಬು ತನ್ನಿಮಾನಿಗ ಮತ್ತು ಸಪರಿವಾರ ದೈವಗಳ ಭಂಡಾರ ಏರುವುದು.ಬಳಿಕ ಬ್ರಹ್ಮಶ್ರೀ ವೇದಮೂರ್ತಿ ಸುಜೀರು ಶ್ರೀ ಗಣೇಶ್ ಭಟ್ ರವರ ಪೌರೋಹಿತ್ಯದಲ್ಲಿ ವೈದಿಕ ಕಾರ್ಯಕ್ರಮಗಳು, ಗಣಹೋಮ, ಕಲಶಾಭಿಷೇಕ, ಪ್ರಸಾದ ವಿತರಣೆ, ಮದ್ಯಾಹ್ನ ಅನ್ನಪ್ರಸಾದ ಜರುಗಲಿದೆ. ರಾತ್ರಿ10-00ರಿಂದ ಶ್ರೀ ಕೋರ್ದಬ್ಬು ತನ್ನಿಮಾನಿಗ ದೈವಗಳ ನೇಮೋತ್ಸವ ನಡೆಯಲಿದೆ.
ಮಾ.08ನೇ ಆದಿತ್ಯವಾರ ಅಪರಾಹ್ನ 3-00ರಿಂದ ಚಾಮುಂಡಿ ಗುಳಿಗ ದೈವಗಳ ಗಗ್ಗರ
ಸೇವೆ, ರಾತ್ರಿ 7-30ರಿಂದ ಪಂಜುರ್ಲಿ ಗುಳಿಗ ದೈವಗಳ ಗಗ್ಗರ ಸೇವೆ, ರಾತ್ರಿ 1-00ರಿಂದ ರಾಹು ಗುಳಿಗ ದೈವದ ಗಗ್ಗರ ಸೇವೆ ನಡೆಯಲಿದೆ.ಮಾ 09ನೇ ಸೋಮವಾರ ಬೆಳಿಗ್ಗೆ ಶ್ರೀ ದೈವಗಳ ಭಂಡಾರ ಇಳಿಸುವುದು ಹಾಗೂ ದೈವಸ್ಥಾನದಿಂದ ಭಂಡಾರ ಸ್ಥಾನಕ್ಕೆ ಶ್ರೀ ಕೋರ್ದಬ್ಬು ತನ್ನಿಮಾನಿಗ ಹಾಗೂ ಸಪರಿವಾರ ದೈವಗಳ ಭಂಡಾರ ಹೊರಡಲಿದೆ ಎಂದು ಕ್ಷೇತ್ರದ ಪ್ರಕಟಣೆ ತಿಳಿಸಿದೆ.












