ಬಂಟ್ವಾಳ :ಕರ್ನಾಟಕ ರಾಜ್ಯ ಕುಂಬಾರರ/ ಕುಲಾಲರ ಯುವ ವೇದಿಕೆ ಬಂಟ್ವಾಳ ವಿಧಾನ ಸಭಾ ಕ್ಷೇತ್ರ ಇದರ 2022-24ನೇ ಸಾಲಿನ ಪದ ಪ್ರಧಾನ ಕಾರ್ಯಕ್ರಮವು ಏಪ್ರಿಲ್ 10ರಂದು ಭಾನುವಾರ ಬೆಳಿಗ್ಗೆ ಕುಲಾಲ ಸಮುದಾಯ ಭವನ ಪೊಸಳ್ಳಿಯಲ್ಲಿ ನಡೆಯಲಿದೆ.
ಸಮಾರಂಭವು ಬೆಳಿಗ್ಗೆ 9 30ಗೆ ನಡೆಯಲಿದ್ದು, ಮಂಗಳೂರು ವಿಶ್ವವಿದ್ಯಾನಿಲಯದ ನಿವೃತ್ತ ಕುಲಪತಿ ಡಾ. ಕೆ ಜನಾರ್ಧನ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.
ಈ ಸಂದರ್ಭದಲ್ಲಿ 2022ನೇ ಸಾಲಿನ
ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರನ್ನು ಗುರುತಿಸಿ ಸರ್ವಜ್ಞ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುವುದು. ಸಂಜೆ 4 30ಗೆ ಸಮಾರೋಪ ಸಮಾರಂಭ ನಡೆಯಲಿದೆ.
Advertisement