ಪಾಣೆಮಂಗಳೂರಿನಲ್ಲಿ ಕಥಾಬಿಂದು ಸಾಹಿತ್ಯ ಸಂಭ್ರಮ-2026. ಸಾಹಿತ್ಯ,ಸಂಸ್ಕೃತಿ ಉಳಿದರೆ ಧರ್ಮ ಉಳಿಯುತ್ತದೆ: ಧರ್ಮದರ್ಶಿ ಡಾ. ಹರಿಕೃಷ್ಣ ಪುನರೂರು.

Coastal Bulletin
ಪಾಣೆಮಂಗಳೂರಿನಲ್ಲಿ ಕಥಾಬಿಂದು ಸಾಹಿತ್ಯ ಸಂಭ್ರಮ-2026. ಸಾಹಿತ್ಯ,ಸಂಸ್ಕೃತಿ ಉಳಿದರೆ ಧರ್ಮ ಉಳಿಯುತ್ತದೆ: ಧರ್ಮದರ್ಶಿ ಡಾ. ಹರಿಕೃಷ್ಣ ಪುನರೂರು.

ಬಂಟ್ವಾಳ ಜ.5 ಸಾಹಿತ್ಯ,ಸಂಸ್ಕೃತಿ ಉಳಿದರೆ ಧರ್ಮ ಉಳಿಯುತ್ತದೆ. ಸಾಹಿತ್ಯ ಜನಮನವನ್ನು ತಲುಪಬೇಕು. ಪುಸ್ತಕ ಓದುವ ಪ್ರವೃತ್ತಿ ಬೆಳಯಬೇಕು. ಬರೆಯುವವರಿಗೆ ಪ್ರೋತ್ಸಾಹ ನೀಡಬೇಕು ಎಂದು ಧರ್ಮದರ್ಶಿ ಡಾ. ಹರಿಕೃಷ್ಣ ಪುನರೂರು ಹೇಳಿದರು.

ಅವರು ಕಥಾಬಿಂದು ಪ್ರಕಾಶನ ಮಂಗಳೂರು, ಸೀನಿಯರ್ ಛೇಂಬರ್ ಇಂಟರ್ ನ್ಯಾಶನಲ್ ನೇತ್ರಾವತಿ ಸಂಗಮ ಜೋಡುಮಾರ್ಗ ಮತ್ತು ಕ.ಚು.ಸಾ.ಪ. ದ.ಕ. ಬಂಟ್ವಾಳ ತಾಲೂಕು ಸಮಿತಿ ಅಶ್ರಯದಲ್ಲಿ ಭಯಂಕೇಶ್ವರ ದೇವಸ್ಥಾನ ಸಭಾಂಗಣ ಪಾಣೆಮಂಗಳೂರಿನಲ್ಲಿ ಜ.4 ರಂದು ನಡೆದ ಕಥಾಬಿಂದು ಸಾಹಿತ್ಯ ಸಂಭ್ರಮ -2026 ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಮುಖ್ಯ ಅತಿಥಿಯಾಗಿ ಬಂಟ್ವಾಳ ನೇತ್ರಾವತಿ ಸಂಗಮ ಅಧ್ಯಕ್ಷ ತೇವು ತಾರನಾಥ ಕೊಟ್ಟಾರಿ ಮಾತನಾಡಿ ಸಾಹಿತ್ಯದ ಮೂಲಕ ಸಜ್ಜನರ ಸಂಘಟನೆಯಾಗುತ್ತದೆ. ಸಮಾಜಕ್ಕೆ ಉತ್ತಮ ಸಂದೇಶವನ್ನು ನೀಡುವ ಸಾಹಿತ್ಯ ಹೆಚ್ಚುಹೆಚ್ಚು ಪ್ರಕಟವಾಗಬೇಕು ಎಂದರು. ಹಿರಿಯ ಸಾಹಿತಿ ಡಾ. ಕೊಳ್ಚಪ್ಪೆ ಗೋವಿಂದ ಭಟ್, ಕ.ಚು.ಸಾ.ಪ ಬಂಟ್ವಾಳ ತಾಲೂಕು ಅಧ್ಯಕ್ಷ ನ್ಯಾಯವಾದಿ ರವೀಂದ್ರ ಕುಕ್ಕಾಜೆ, ಕವಯಿತ್ರಿ ಡಾ. ಶಾಂತ ಪುತ್ತೂರು ಸಮ್ಮೇಳನಕ್ಕೆ ಶುಭ ಹಾರೈಸಿ ಮಾತನಾಡಿದರು.

ಶಿಕ್ಷಣ ಸೌರಭ ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಶಿಕ್ಷಕ ಜಯಾನಂದ ಪೆರಾಜೆ ಅಂತಾರಾಜ್ಯ ಮಟ್ಟದ ಕವಿಗೋಷ್ಠಿಯ ಅಧ್ಯಕ್ಷತೆ ವಹಿಸಿ ಮಾತನಾಡಿ ಕವಿಮನಸ್ಸುಗಳು ರಾಷ್ಟ್ರೀಯ ಚಿಂತನೆ ಬೆಳೆಸಿಕೊಳ್ಳಬೇಕೆಂದರು. ಹಾ.ಮ. ಸತೀಶ್ ಬೆಂಗಳೂರು, ಶಾರದಾ ಮೊಳೆಯಾರ್ ಕಾಸರಗೋಡು, ಪ್ಲಾವಿಯಾ ಅಲ್ಬುಕರ್ಕ್ ಪುತ್ತೂರು, ಗೀತಾ ಕೊಂಕೋಡಿ, ಸೌಮ್ಯ ಆರ್. ಶೆಟ್ಟಿ, ರೋಹಿಣಿ ಆಚಾರ್ಯ ಪುತ್ತೂರು, ಮಲ್ಲಿಕಾರ್ಜುನ ಕೆರೊಡಿ, ಸವಿತಾ ಕರ್ಕೆರ ಕಾವೂರು, ಸುರೇಶ ಎಮ್. ಹರಿಜನ, ಅಶ್ವಿಜ ಶ್ರೀಧರ, ಮಮತ ಡಿ.ಕೆ. ಸುರೇಶ್ ಕುಮಾರ್ ಚಾರ್ವಾಕ, ಜಯರಾಮ ಪಡ್ರೆ, ಶಿಲ್ಪ

ಎನ್., ವಿಂದ್ಯಾ ಕುದ್ಪಾಜೆ, ಶ್ವೇತಾ ಡಿ ಬಡಗಬೆಳ್ಳೂರು, ರಮೇಶ್ ಮೆಲ್ಕಾರ್, ರಜನಿ ಚಿಕ್ಕಯ್ಯಮಠ ಮೊದಲಾದವ ಕವಿಗಳುಸ್ವರಚಿತ ಕವನ ವಾಚಿಸಿದರು. 

ಕನ್ನಡ ರತ್ನ ರಾಜ್ಯ ಪ್ರಶಸ್ತಿ

ಈ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಾದ ಪತ್ರಕರ್ತೆ ವಾಣಿ ರಘುನಾಥ್ ಮುಂಬೈ, ಡಾ. ಜೋಸೆಫ್ ಲೋಬೋ, ಯಾದವ ಹರೀಶ್, ರಕ್ತದಾನಿ ಮಂಜು ಮೈಸೂರು, ಪೂರ್ಣಿಮಾ ಗುರುಮೂರ್ತಿ, ಅನಿಲ್ ಮೆಂಡೋನ್ಸಾ, ಮಂಜುನಾಥ ಕೆ ಮೈಸೂರು, ಲಯನ್ ಕುಮಾರ್, ಕುಮಾರಿ ಅರ್ನಾ ಎಸ್. ಭಟ್ ಇವರನ್ನು ಕನ್ನಡ ರತ್ನ ರಾಜ್ಯ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ದಶ ಕೃತಿಗಳ ಬಿಡುಗಡೆ

ಎ.ಪಿ. ಉಮಾಶಂಕರಿ ಮರಿಕೆ ಅವರ ಬಾಂಧವ್ಯದ ನೆಲೆ ಹಾಗೂ ತಿರುವುಗಳು, ಪಂಕಜಾ ರಾಮ ಭಟ್ ಮುಡಿಪುರವರ ಮಾನಸ ವೀಣೆ, ಪುಷ್ಪ ಪ್ರಸಾದರ ದಿವ್ಯಾಕ್ಷರಿ, ನೀಮಾ ಲೋಬೋ ಅವರ ಕನಸ್ಸೇ ಥ್ಯಾಂಕ್ಯೂ, ಡಾ. ಕೊಳ್ಚಪ್ಪೆ ಗೋವಿಂದ ಭಟ್ಟರ ಸಂಪಾದಕತ್ವದ ಕಥಾ ತೋರಣ ಕೃತಿಗಳನ್ನು ಡಾ.ಹರಿಕೃಷ್ಣ ಪುನರೂರು ಲೋಕಾರ್ಪಣೆ ಮಾಡಿದರು.

ಕಥಾ ಬಿಂದು ಪ್ರಕಾಶನದ ಪಿ.ವಿ. ಪ್ರದೀಪ್ ಕುಮಾರ್ ಸ್ವಾಗತಿಸಿ ಪ್ರಸ್ತಾವನೆ ಗೈದು ಲೇಖಕರಿಗೆ ಅಭಿನಂದನೆ ಸಲ್ಲಿಸಿದರು. ಶೋಭಾ ದಿನೇಶ್ ಉದ್ಯಾವರ , ಗೀತಾ ಕೊಂಕೋಡಿ ನಿರೂಪಿಸಿದರು. ಡಾ. ವಾಣಿಶ್ರೀ ಕಾಸರಗೋಡು ಸಾರಥ್ಯದಲ್ಲಿ ಸಾಹಿತ್ಯ ಗಾನ ನೃತ್ಯ ವೈಭವ ಮತ್ತು ಸುಭಾಷಿಣಿ ಬೇಕೂರು ಅವರಿಂದ ಸಾಂಸ್ಕೃತಿಕ ಕಾರ್ಯಕ್ರಮ ನೆರವೇರಿತು. ಶಿಕ್ಷಕಿ ರೇಖಾ ರಾವ್ ವಂದಿಸಿದರು

Leave a Comment