Coastal Bulletin

ಬಂಟ್ವಾಳ :ಬೊಂಡಾಲ ಜಗನ್ನಾಥ ಶೆಟ್ಟಿ ಸ್ಮಾರಕ ಸರಕಾರಿ ಪ್ರೌಢಶಾಲೆಯ ಸುರಕ್ಷಾ ಆರೋಗ್ಯ ಕೂಟ, ಚಿಗುರು ಪರಿಸರ ಸಂಘ ಮತ್ತು ಜೇಸಿಐ ಜೋಡುಮಾರ್ಗ ನೇತ್ರಾವತಿ ಆಶ್ರಯದಲ್ಲಿ ತಂಬಾಕಿನ ದುಷ್ಪರಿಣಾಮದ ಬಗ್ಗೆ ಮಾಹಿತಿ ಕಾರ್ಯಾಗಾರ ಮತ್ತು ಕೈ ತೊಳೆಯುವ ದಿನಾಚರಣೆ ಕಾರ್ಯಕ್ರಮ ನಡೆಯಿತು.

ಶಂಭೂರು ಪ್ರಾಥಮಿಕ ಆರೋಗ್ಯ ಉಪಕೇಂದ್ರದ ಸಮುದಾಯ ಆರೋಗ್ಯ ಅಧಿಕಾರಿ ಶ್ರೀಮತಿ ಪವಿತ್ರಾ ಅವರು ತಂಬಾಕಿನಿಂದಾಗುವ ದುಷ್ಪರಿಣಾಮಗಳ ಬಗ್ಗೆ ಸವಿಸ್ತಾರವಾಗಿ ತಿಳಿಸಿದರು.

ಅಲ್ಲದೇ ಕೈತೊಳೆಯುವ ಬಗ್ಗೆ ಪ್ರಾತ್ಯಕ್ಷಿಕೆಯನ್ನು ನಡೆಸಿಕೊಟ್ಟರು.

ಕಾರ್ಯಕ್ರಮದಲ್ಲಿ ಶಾಲಾ ಮುಖ್ಯಶಿಕ್ಷಕ ಕಮಲಾಕ್ಷ ಕಲ್ಲಡ್ಕ, ಪರಿಸರ ಸಂಘದ ನೋಡಲ್ ಶಿಕ್ಷಕಿ ಭಾರತಿ ಉಪಸ್ಥಿತರಿದ್ದರು.

Leave a Comment