ಬಂಟ್ವಾಳ: ತಾಲೂಕಿನ ಕರಿಯಂಗಳ ಗ್ರಾಮದ ಬಡಕಬೈಲ್ ಜಂಕ್ಷನ್ ನ ಬಳಿ 3-4 ಕಟ್ಟಡಗಳಿಗೆ ಫೆ 10ರಂದು ರಾತ್ರಿ ಅಗ್ನಿ ಆಕಸ್ಮಿಕದಿಂದ ಪರಿಸರ 3ಮನೆಗಳಿಗೆ ಸಮಸ್ಯೆ ಉಂಟಾಯಿತು.
ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳ ಸ್ಥಳೀಯರ ಸಹಕಾರದೊಂದಿಗೆ ಬೆಂಕಿ ನಂದಿಸಿದರು, ಈ ಸಂದರ್ಭದಲ್ಲಿ ರಾತ್ರಿ 1.00 ಗಂಟೆಗೆ ಸ್ಥಳಕ್ಕೆ ಆಗಮಿಸಿ ಅಗ್ನಿಶಾಮಕ ದಳದ ಕಾರ್ಯಾಚರಣೆ ವೀಕ್ಷಣೆ
ಮಾಡಿ, ಮನೆಮಂದಿಗೆ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ ಉಳಿಪ್ಪಾಡಿ ಸಾಂತ್ವನ ಹೇಳಿದರು. ಕಂದಾಯ ನಿರೀಕ್ಷಕ ವಿಜಯ್ ಆರ್ ಸಹಿತ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.














