ಬಂಟ್ವಾಳ :ತಾಲೂಕಿನ ಕಳ್ಳಿಗೆ ಗ್ರಾಮದ ನೆತ್ತರಕೆರೆಯಲ್ಲಿ ಸದಾಶಿವ ಶಿಕ್ಷಣ ಪ್ರತಿಷ್ಠಾನದ ಶಿಕ್ಷಣ ಸಂಸ್ಥೆಯಾದ ಎಡುವೆಂಚರ್ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಾಂಶುಪಾಲರ ಕಚೇರಿ ಉದ್ಘಾಟನಾ ಕಾರ್ಯಕ್ರಮವು ಮಾ.8ರಂದು ನಡೆಯಿತು.
ಬೆಳಿಗ್ಗೆ ಗಣಹೋಮ ನೆರವೇರಿಸಿದ ಬಳಿಕ ಸಂಸ್ಥೆಯ ಅಧ್ಯಕ್ಷ ಅಮೃತ್ ರೈ ಹಾಗೂ ಕಾರ್ಯದರ್ಶಿ ರಕ್ಷಿತಾ ಅಮೃತ್ ರೈ ಉಪಸ್ಥಿತಿಯಲ್ಲಿ ಪ್ರಾಂಶುಪಾಲ ಮಹೇಶ್ ಕೆ. ಎನ್ ರವರು ಔಪಚಾರಿಕವಾಗಿ ಪ್ರಾಂಶುಪಾಲ ಹುದ್ದೆಯನ್ನು ವಹಿಸಿಕೊಂಡರು.
ಬಳಿಕ ಸಂಸ್ಥೆಯ ಅಧ್ಯಕ್ಷ ಅಮೃತ್ ರೈ ಪ್ರಾಂಶುಪಾಲ ಮಹೇಶ್ ಕೆ. ಎನ್ ರವರ ಬಗ್ಗೆ ಮಾತನಾಡುತ್ತಾ, ಅತ್ಯಂತ ವಿರಳ ವ್ಯಕ್ತಿತ್ವದ ಸರಳ ವ್ಯಕ್ತಿ. ಹಲವು ವರ್ಷಗಳ ಬೋಧನಾ ವೃತ್ತಿಯ ಅನುಭವ ಹೊಂದಿರುವರು, ನಮ್ಮ ಈ
ಸುಂದರ ವಿದ್ಯಾ ಸಂಸ್ಥೆಯ ನಿರ್ಮಾಣದಲ್ಲಿ ಅಹರ್ನಿಶಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.ಪ್ರಾಂಶುಪಾಲ ಹುದ್ದೆಗೆ ಅಗತ್ಯದ ಎಲ್ಲಾ ಅರ್ಹತೆಗಳನ್ನು ಹೊಂದಿದವರಾಗಿದ್ದಾರೆ. ನಿಮ್ಮ ನಾಯಕತ್ವದಲ್ಲಿ ವಿದ್ಯಾಸಂಸ್ಥೆ ರಾಜ್ಯ -ರಾಷ್ಟ್ರ ಮಟ್ಟದಲ್ಲಿ ಪ್ರಸಿದ್ಧಿಯನ್ನು ಪಡೆಯುವಂತಾಗಲಿ ಎಂದು ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಸದಾಶಿವ ಶಿಕ್ಷಣ ಪ್ರತಿಷ್ಠಾನದ ಖಜಾಂಚಿ ಅಶ್ವಥ್ ರೈ, ಟ್ರಸ್ಟಿಗಳಾದ ಬಿ. ಮೋಹನ್ ಕುಮಾರ್, ಸಮತಾ ಕಿಶೋರ್, ದೀಪಿಕಾ ಸಂದೇಶ್ ಸಂಸ್ಥೆಯ ಹಿತೈಷಿಗಳಾದ ನೀಲವೇಣಿ ಎಸ್. ರೈ ಹಾಗೂ ಬೋಧಕ ಬೋಧಕೇತರ ಸಿಬ್ಬಂದಿ ವರ್ಗದವರು ಮತ್ತಿತರರು ಉಪಸ್ಥಿತರಿದ್ದರು













