ಬಂಟ್ವಾಳ: ಬ್ರಹ್ಮಕಲಶದ ಸಂಭ್ರಮದಲ್ಲಿರುವ ಬಂಟ್ವಾಳ ತಾಲೂಕಿನ ಕಳ್ಳಿಗೆ ಗ್ರಾಮದ ದೇವಂದಬೆಟ್ಟು ಶ್ರೀ ಲಕ್ಷ್ಮೀ ವಿಷ್ಣುಮೂರ್ತಿ ದೇವಸ್ಥಾನವನ್ನು ವಿವಿಧ ಭಾಗದಿಂದ ಸಂಪರ್ಕಿಸುವ ನಿಟ್ಟಿನಲ್ಲಿ ಜೀರ್ಣೋದ್ಧಾರ ಕಾರ್ಯದ ಪ್ರಯುಕ್ತ ಸುಮಾರು ಒಂದು ಕೋಟಿ ರೂ. ವೆಚ್ಚದಲ್ಲಿ ನಡೆದ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು ಅವರು ಭಾನುವಾರ ಲೋಕಾರ್ಪಣೆಗೊಳಿಸಿದರು.














