Coastal Bulletin

ಬಂಟ್ವಾಳ : 75 ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ನಡೆಯುತ್ತಿರುವ ” ಆಜಾದಿ ಕಾ ಅಮೃತ ಮಹೋತ್ಸವ” ದ ಅಂಗವಾಗಿ ಮಂಗಳೂರು ಮಹಾ ನಗರಕ್ಕೆ ಕುಡಿಯುವ ನೀರು ಪೂರೈಕೆ ಮಾಡುವ ಮಂಗಳೂರು ಮಹಾನಗರ ಪಾಲಿಕಾ ಅಧೀನದ ತುಂಬೆ ಅಣೆಕಟ್ಟನ್ನು ತ್ರಿವರ್ಣ ಬೆಳಕಿನ ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿದ್ದು, ಗಮನ ಸೆಳೆಯುತ್ತಿದೆ.

ಸಾರ್ವಜನಿಕರು ಅಗಸ್ಟ್ 13 ರಿಂದ ಅಗಸ್ಟ್ 15 ರವರೆಗೆ ಬಂಟವಾಳ ಬಂಟರ ಭವನದ ಕೆಳ‌ ಅಂತಸ್ತಿನಿಂದ ಸಂಜೆ 6.00

ರಿಂದ 9.00 ರವರೆಗೆ ವೀಕ್ಷಣೆ ಮಾಡಬಹುದು ಎಂದು ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ಪ್ರೇಮಾನಂದ ಶೆಟ್ಟಿ ತಿಳಿಸಿದ್ದಾರೆ 

Leave a Comment