ಬಂಟ್ವಾಳ :ಕುಲಾಲ ಸುಧಾರಕ ಸಂಘ (ರಿ.)ನಾಣ್ಯ ಫರಂಗಿಪೇಟೆ,,ಇದರ 31ನೇ ವಾರ್ಷಿಕ ಮಹಾಸಭೆ ಹಾಗೂ ವಾರ್ಷಿಕೋತ್ಸವ ಸಮಾರಂಭವು ಮೇ 12 ಆದಿತ್ಯವಾರ ಕುಲಾಲ ಸಮುದಾಯ ಭವನ ನಾಣ್ಯದಲ್ಲಿ ನಡೆಯಿತು.
ಬೆಳಿಗ್ಗೆ ಗಂಟೆ 8.00ಕ್ಕೆಗಣಹೋಮ 9.00ರಿಂದ ವಾರ್ಷಿಕ ಮಹಾಸಭೆಯ ಬಳಿಕ ನಡೆದ ವಾರ್ಷಿಕ ಕ್ರೀಡಾಕೂಟವನ್ನು ಹೊನ್ನಪ್ಪ ಬಂಗೇರ ಗಂಪದಕೋಡಿ ಉದ್ಘಾಟಿಸಿ ಚಾಲನೆ ನೀಡಿದರು.
ಸಂಜೆ ನಡೆದ ವಾರ್ಷಿಕೋತ್ಸವ ಸಮಾರಂಭದ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಿ. ನಾರಾಯಣ, ಅಧ್ಯಕ್ಷರು ಕುಲಾಲ ಸುಧಾರಕ ಸಂಘ (ರಿ.) ಫರಂಗಿಪೇಟೆ ವಹಿಸಿದ್ದರು.ಮುಖ್ಯ ಅತಿಥಿಗಳಾಗಿ, ಮಯೂರ್ ಉಲ್ಟಾಲ್, ಅಧ್ಯಕ್ಷರು, ದ.ಕ. ಜಿಲ್ಲಾ ಮೂಲ್ಯರ ಯಾನೆ ಕುಲಾಲರ ಮಾತೃ ಸಂಘ (ರಿ.) ಮಂಗಳೂರು. ರಾಧಾಕೃಷ್ಣ ಬಂಟ್ವಾಳ, ಅಧ್ಯಕ್ಷರು, ಬಂಟ್ವಾಳ ತಾಲೂಕು ಕುಲಾಲ ಸುಧಾರಕ ಸಂಘ (ರಿ.) ಪೊಸಳ್ಳಿ, ಬಿ.ಸಿ.ರೋಡ್, ಡಾ. ಸ್ವಾತಿ ಪಿ.ಟಿ.,
ಅಸಿಸ್ಟೆಂಟ್ ಪ್ರೊಫೆಸರ್, ಅರ್ತೋಪೆಡಿಕ್ ಮತ್ತು ಸ್ಪೋರ್ಟ್ಸ್ ಫಿಸಿಯೋಥೆರಫಿ, ಯೆನೆಪೋಯ ಯುನಿವರ್ಸಿಟಿ ಮಂಗಳೂರು ಭಾಗವಹಿಸಿದ್ದರು.
ವೇದಿಕೆಯಲ್ಲಿ ನಿಕಟ ಪೂರ್ವ ಅಧ್ಯಕ್ಷ ಕೆ ಅರ್ ದೇವದಾಸ್ ಕೊಡ್ಮಾಣ್, ಮಹಿಳಾ ಸಂಘದ ಅಧ್ಯಕ್ಷೆ ನಯನಾಕ್ಷಿ ಅಡ್ಯಾರ್ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ವಿದ್ಯಾಪ್ರೋತ್ಸಾಹಧನ ವಿತರಣೆ ಮಾಡಲಾಯಿತು. ಸಂಜೆ ಗಂಟೆ 6.00 ರಿಂದ ಕುಲಾಲ ಮಹಿಳಾ ಘಟಕದ ಸದಸ್ಯರು ಹಾಗೂ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.
ಪ್ರ. ಕಾರ್ಯದರ್ಶಿ ವಿಶ್ವನಾಥ ಕುಲಾಲ್ ವಾರ್ಷಿಕ ವರದಿ ವಾಚಿಸಿದರು, ಜೊತೆ ಕಾರ್ಯದರ್ಶಿ ನವೀನ್ ಚಾಪೆ ಸ್ವಾಗತಿಸಿ,ಜಗದೀಶ ನೀರೋಳ್ಬೆ ಧನ್ಯವಾದವಿತ್ತು,ಶಿಕ್ಷಕಿ ಗೌತಮಿ ಕಾರ್ಯಕ್ರಮ ನಿರೂಪಿಸಿದರು.