ಮಂಗಳೂರು : ಕುಲಶೇಖರದ ಶ್ರೀ ವೀರನಾರಾಯಣ ದೇವಸ್ಥಾನದ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆಯನ್ನು ಹಾರ್ಟ್ ಆಫ್ ಲಿವಿಂಗ್ ನ ಶ್ರೀ ರವಿಶಂಕರ್ ಗುರೂಜಿಗೆ ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷರಾದ ಬಿ.ಪ್ರೇಮಾನಂದ ಕುಲಾಲ್ ಕೋಡಿಕಲ್, ಪ್ರಧಾನ ಕಾರ್ಯದರ್ಶಿ ಗಿರಿಧರ್ ಜೆ ಮೂಲ್ಯ ಬೆಂಗಳೂರಿನ ಮಠದಲ್ಲಿ ನೀಡಲಾಯಿತು.
ಆ ಬಳಿಕ ಸ್ವಾಮೀಜಿಯವರು ಆಶೀರ್ವದಿಸಿ ಪುಣ್ಯಕಾರಿಯ ಯಶಸ್ವಿಯಾಗಿ ನಡೆಯಲಿ ಪಾಲ್ಗೊಂಡ ಎಲ್ಲಾ ಭಕ್ತರ ಇಷ್ಟಾರ್ಥಗಳು ನೆರವೇರಲಿ ಮಂಗಳೂರಿಗೆ ಬಂದಾಗ ಕ್ಷೇತ್ರಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆಯುತ್ತೇನೆ ಎಂದು ಶುಭ ಹಾರೈಸಿದರು.
ಗುರುಜಿಯಾ ಭೇಟಿಗೆ ಅವಕಾಶ ಮಾಡಿಕೊಟ್ಟ
ಕಾಪು ಕ್ಷೇತ್ರದ ಬಿಜೆಪಿಯ ಅಭ್ಯರ್ಥಿ ಸುರೇಶ್ ಶೆಟ್ಟಿ ಗುರ್ಮೆ, ಮುಂಬೈಯ ಹೋಟೆಲ್ ಉದ್ಯಮಿ ಹರೀಶ್ ಶೆಟ್ಟಿ ಗುರ್ಮೆ ಅವರೊಂದಿಗೆ ಮಂಗಳೂರಿನ ಕೊಡಿಕಲ್ ನ ವಿಶ್ವ ಭಾರತಿ ಫ್ರೆಂಡ್ಸ್ ಸರ್ಕಲ್ ನ ಪ್ರಧಾನ ಕಾರ್ಯದರ್ಶಿ ರಾಜೇಶ್ ಶಾಲ್ಯಾನ್ ಉಪಸ್ಥರಿದ್ದರು.














