ಬಂಟ್ವಾಳ :ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಬಂಟ್ವಾಳ ತಾಲೂಕಿನ ಯೋಜನ ಕಚೇರಿಯಲ್ಲಿ 75 ನೇ ವರ್ಷದ ಸ್ವಾತಂತ್ರ್ಯ ಕಾರ್ಯ ಕ್ರಮವನ್ನು ಬಂಟ್ವಾಳ ತಾಲೂಕಿನ ಜನಜಾಗೃತಿ ವೇದಿಕೆಯ ಅಧ್ಯಕ್ಷ ರೋನಲ್ಡ್ ಡಿಸೋಜ ಹಾಗೂ ಯೋಜನೆಯ ದ.ಕ ಜಿಲ್ಲಾ ನಿರ್ದೇಶಕ ಸತೀಶ್ ಶೆಟ್ಟಿ ಧ್ವಜರೋಹನ ಮಾಡುವ ಮೂಲಕ ಆಚರಣೆ ಮಾಡಲಾಯಿತು.
ಕಾರ್ಯ ಕ್ರಮದಲ್ಲಿ ಯೋಜನೆಯ ತಾಲೂಕು ಯೋಜನಾಧಿಕಾರಿ ಜಯಾನಂದ .ಪಿ ಹಾಗೂ ಬಿ.ಸಿ ರೋಡ್ ವಲಯದ್ಯಕ್ಷ ಶೇಖರ ಸಾಮಾನಿ,ಜಿಲ್ಲಾ
ಯೋಜನಾಧಿಕಾರಿ ಮಾಂತೇಶ್,ಮೇಲ್ವಿಚಾರಕರು, ಕಚೇರಿಯ ಎಲ್ಲ ಸಿಬ್ಬಂದಿಗಳು ಉಪಸ್ಥಿತಿ ಇದ್ದರು ಮೇಲ್ವಿಚಾರಕ ಕೇಶವ ಸ್ವಾಗತಿಸಿ, ಮಮತ ವಂದಿಸಿದರು.















