ಬಂಟ್ವಾಳ :ಈ ಹಿಂದೆ ಕಾಂಗ್ರೆಸ್ ಸರ್ಕಾರ ನೀಡಿದ ವಿವಿಧ ಜನಪ್ರಿಯ ಯೋಜನೆಗಳಿಗೆ ಹೆಸರು ಬದಲಾಯಿಸಿದ್ದು ಬಿಟ್ಟರೆ ಬಿಜೆಪಿ ನೇತೃತ್ವದ ಕೇಂದ್ರ ಮತ್ತು ರಾಜ್ಯ ಸರ್ಕಾರವು ಕಾರ್ಮಿಕರು ಸಹಿತ ಜನ ಸಾಮಾನ್ಯರಿಗೆ ಏನು ಹೊಸ ಕೊಡುಗೆ ನೀಡಿದೆ ಎಂದು ಮಾಜಿ ಸಚಿವ ಬಿ ರಮಾನಾಥ ರೈ ಪ್ರಶ್ನಿಸಿದ್ದಾರೆ.
ಆವರು ಪಾಣೆಮಂಗಳೂರು ಬ್ಲಾಕ್ ಹಾಗೂ ಬಂಟ್ವಾಳ ಬ್ಲಾಕ್ ಕಾರ್ಮಿಕ ಕಾಂಗ್ರೆಸ್ ಘಟಕಗಳ ಆಶ್ರಯದಲ್ಲಿ ಸರಕಾರದ ಜನವಿರೋಧಿ ಹಾಗೂ ಕಾರ್ಮಿಕ. ವಿರೋಧಿ ನೀತಿಯ ವಿರುದ್ಧ ಬಿ. ಸಿ ರೋಡಿನ ತಾಲೂಕು ಕಛೇರಿ ಮುಂಭಾಗದಲ್ಲಿ ಬುಧವಾರ ನಡದ ಬೃಹತ್ ಪ್ರತಿಭಟನೆಯಲ್ಲಿ ಮಾಜಿ ಸಚಿವರಾದ ಬಿ. ರಮಾನಾಥ ರೈ ಯವರು ಪ್ರತಿಭಟನಾಕಾರರನ್ನುದ್ದೇಶಿಸಿ ಮಾತನಾಡಿದರು.
ಈ ಸಂದರ್ಭದಲ್ಲಿ ಬಂಟ್ವಾಳ ಬ್ಲಾಕ್ ಕಾರ್ಮಿಕ ಕಾಂಗ್ರೆಸ್ ಘಟಕದ ಅಧ್ಯಕ್ಷರಾದ ಮನೋಹರ್ ನೇರಂಬೋಳು, ಪಾಣೆಮಂಗಳೂರು ಬ್ಲಾಕ್ ಕಾರ್ಮಿಕ ಕಾಂಗ್ರೆಸ್ ಅಧ್ಯಕ್ಷರಾದ ಉಮೇಶ್ ನೆಲ್ಲಿಗುಡ್ಡೆ,ದ. ಕ ಜಿಲ್ಲಾ ಕಾರ್ಮಿಕ ಘಟಕದ ಅಧ್ಯಕ್ಷರಾದ ಲೋರೆನ್ಸ್ ಡಿ'ಸೋಜ,ಜಿಲ್ಲಾ ಉಪಾಧ್ಯಕ್ಷರಾದ ಪುರುಷೋತ್ತಮ ಪೂಜಾರಿ,ದ. ಕ ಜಿಲ್ಲಾ ಅಸಂಘಟಿತ ಕಾರ್ಮಿಕ ಸಂಘದ ಅಧ್ಯಕ್ಷರಾದ ಅಬ್ಬಾಸ್ ಅಲಿ,ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ
ಸುದೀಪ್ ಕುಮಾರ್ ಶೆಟ್ಟಿ, ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಬೇಬಿ ಕುಂದರ್,ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ,ಎಂ ಎಸ್ ಮೊಹಮ್ಮದ್, ಪುರಸಭಾ ಉಪಾಧ್ಯಕ್ಷೆ ಜೇಸಿಂತ ಡಿ'ಸೋಜ,ಪುರಸಭಾ ಸದಸ್ಯರಾದ ಸಿದ್ಧಿಕ್ ಗುಡ್ಡೆಯಂಗಡಿ,ಲೋಲಾಕ್ಷ ಶೆಟ್ಟಿ, ವಾಸು ಪೂಜಾರಿ,ಮಾಜಿ ಬೂಡಾ ಅಧ್ಯಕ್ಷ ಸದಾಶಿವ ಬಂಗೇರ,ಮಾಜಿ ಎಪಿಎಂಸಿ ಅಧ್ಯಕ್ಷರಾದ ಪದ್ಮನಾಭ ರೈ,ಪಿಯೂಸ್ ಎಲ್ ರೊಡ್ರಿಗಸ್,ದ. ಕ ಕಿಸಾನ್ ಘಟಕದ ಅಧ್ಯಕ್ಷರಾದ ಮೋಹನ್ ಕಲ್ಮಂಜ, ಮಾಜಿ ಭೂ ಭ್ಯಾಂಕ ಅಧ್ಯಕ್ಷ ಸುದರ್ಶನ್ ಜೈನ್, ಬಂಟ್ವಾಳ ಕಸಬಾ ವಲಯ ಪ್ರಧಾನಕಾರ್ಯದರ್ಶಿ ದಯಾನಂದ್ ನೇರಂಬೋಳು,ಪಾಣೆಮಂಗಳೂರು ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರಾದ ಇಬ್ರಾಹಿಂ ನವಾಝ್, ಬಂಟ್ವಾಳ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರಾದ ಸುರೇಶ್ ಜೋರ,ಅಲ್ಬರ್ಟ್ ಮೆನೇಜಸ್,ಜಗದೀಶ್ ಕೊಯಿಲ,ಪಿ.ಎ ರಹೀಮ್ ಮೊದಲಾದವರು ಉಪಸ್ಥಿತರಿದ್ದರು.

















