Coastal Bulletin

ಬಂಟ್ವಾಳ: ಕಡೇಶ್ವಾಲ್ಯ ಗ್ರಾಮದಲ್ಲಿ ಅನುಷ್ಠಾನಗೊಂಡಿರುವ ಸುಮಾರು ೫.೫೦ ಕೋ.ರೂ.ಗಳ ಅನುದಾನದ ಅಭಿವೃದ್ಧಿ ಕಾಮಗಾರಿಗಳಿಗೆ ರವಿವಾರ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಉದ್ಘಾಟನೆ ಹಾಗೂ ಶಿಲಾನ್ಯಾಸ ನೆರವೇರಿಸಿದರು.

ಕಾರ್ಯಕ್ರಮದಲ್ಲಿ ಕಡೇಶ್ವಾಲ್ಯ ದೇವಸ್ಥಾನ ೯೦ ಲಕ್ಷ ರೂ.ಗಳ ತಡೆಗೋಡೆ ಕಾಮಗಾರಿ ವೀಕ್ಷಣೆ, ಆರಿಕಲ್ಲು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ತಡೆಗೋಡೆ ೫೦ ಲಕ್ಷ ರೂ, ಪೆರ್ಲಾಪು-ಕೊರತಿಗುರಿ-ಕುಡುಕುಮೇರು ರಸ್ತೆ-೧.೨೦ ಕೋ.ರೂ, ಶೇರಾ-ನೀರಕಜೆ ರಸ್ತೆ-೧೦ ಲಕ್ಷ ರೂ, ಮುಂಡಾಲ ಕಿರುಸೇತುವೆ-೧೦ ಲಕ್ಷ ರೂ, ಬಟ್ರಬೆಟ್ಟು-ಬೋರುಗುಡ್ಡೆ ರಸ್ತೆ ೩೦ ಲಕ್ಷ ರೂ, ಇರ್ಕ್ಲಾಜೆ-ಬೀರಕೋಡಿ ರಸ್ತೆ-೫ ಲಕ್ಷ ರೂ, ಪಡ್ಡಂಗೆ-ಕಾಡಬೆಟ್ಟು ರಸ್ತೆ-೧೦ ಲಕ್ಷ ರೂ, ಓಡಲು ರಸ್ತೆ-೧೮ ಲಕ್ಷ ರೂ, ಅಮೈ-ಹಿರ್ತಡ್ಕ ರಸ್ತೆ ೧೦ ಲಕ್ಷ ರೂ, ತಾರಿಗುರಿ ರಸ್ತೆ-೧೦ ಲಕ್ಷ ರೂ, ಗ್ರಾ.ಪಂ.ಅಮೃತ ಸೋಲಾರ್ ವ್ಯವಸ್ಥೆ-೮ ಲಕ್ಷ ರೂ, ಕೊರತಿಗುರಿ ಸಾರ್ವಜನಿಕ ಶೌಚಾಲಯ-೫ ಲಕ್ಷ ರೂ. ಹಾಗೂ ಎಲ್ಲಾಜೆ-ತಾರಿಗುರಿ ರಸ್ತೆ ೧೦ ಲಕ್ಷ ರೂ. ಉದ್ಘಾಟಿಸಲಾಯಿತು.

ನಡ್ಯೇಲು-ಮುನ್ನಿಮಾರು ರಸ್ತೆ-೧೦ ಲಕ್ಷ ರೂ, ಬೊಳ್ಳಾರು-ಭಂಡರಿಬೆಟ್ಟು ರಸ್ತೆ-೧೦ ಲಕ್ಷ ರೂ, ಮುಂಡಾಲ-ಪ್ರತಾಪನಗರ ರಸ್ತೆ ೧೦ ಲಕ್ಷ ರೂ, ಓಣಿಬಾಗಿಲು-ಬನಾರಿ ರಸ್ತೆ-೨೦ ಲಕ್ಷ ರೂ,

ಕುರುಬ್ಲಾಜೆ-ಕೊರತಿಗುರಿ ರಸ್ತೆ ೧೦ ಲಕ್ಷ ರೂ, ಬೋರುಗುಡ್ಡೆ-ಗುಮ್ಮೊಡಿ ರಸ್ತೆ-೧೦ ಲಕ್ಷ ರೂ, ಕಲ್ಲಾಜೆಪಲ್ಕೆ-ಮುಂಡಾಲ ರಸ್ತೆ ೫ ಲಕ್ಷ ರೂ, ತಾರಿಗುರಿ-ದಾಳಿಂಬ ರಸ್ತೆ ೨೫ ಲಕ್ಷ ರೂ, ಗ್ರಾ.ಪಂ.ಅಮೃತ ಭವನ-೨೫ ಲಕ್ಷ ರೂ, ಮುಚ್ಚಿಲ-ನೇಜಿನಡ್ಕ ರಸ್ತೆ-೧೦ ಲಕ್ಷ ರೂ, ಮುಚ್ಚಿಲ-ಕಾಡಬೆಟ್ಟು ರಸ್ತೆ ೧೮ ಲಕ್ಷ ರೂ. ಶಿಲಾನ್ಯಾಸ ನೆರವೇರಿಸಲಾಯಿತು.

ಕಡೇಶ್ವಾಲ್ಯ ಗ್ರಾ.ಪಂ.ಅಧ್ಯಕ್ಷ ಸುರೇಶ್ ಬನಾರಿ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ, ಬಂಟ್ವಾಳ ಬಿಜೆಪಿ ಪ್ರಧಾನ ಕಾರ್ಯದರ್ಶಿ ರವೀಶ್ ಶೆಟ್ಟಿ ಕರ್ಕಳ, ಬಾಳ್ತಿಲ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಮೋಹನ್ ಪಿ.ಎಸ್., ಕಡೇಶ್ವಾಲ್ಯ ಸಿಎ ಬ್ಯಾಂಕ್ ಅಧ್ಯಕ್ಷ ವಿದ್ಯಾಧರ್ ರೈ ಪೆರ್ಲಾಪು, ಕಡೇಶ್ವಾಲ್ಯ ಶಕ್ತಿಕೇಂದ್ರದ ಅಧ್ಯಕ್ಷ ನಾರಾಯಣ ಸಪಲ್ಯ, ಗ್ರಾ.ಪಂ.ಉಪಾಧ್ಯಕ್ಷೆ ಜಯಾ ಆರ್.ದೇವಾಡಿಗ, ಕಡೇಶ್ವಾಲ್ಯ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಸಾಂತಪ್ಪ ಪೂಜಾರಿ, ಬೂತ್ ಸಮಿತಿಯ ಅಧ್ಯಕ್ಷರುಗಳು, ಗ್ರಾ.ಪಂ.ಸದಸ್ಯರು, ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.

Leave a Comment