ಬಂಟ್ವಾಳ: ಇಲ್ಲಿನ ಐತಿಹಾಸಿಕ ಹಿನ್ನೆಲೆ ಹೊಂದಿರುವ ಸರಪಾಡಿ ಶ್ರೀ ಶರಭೇಶ್ವರ ದೇವಸ್ಥಾನವು ಸುಮಾರು ರೂ 7 ಕೋಟಿ ವೆಚ್ಚದಲ್ಲಿ ಪುನರ್ ನಿರ್ಮಾಣಗೊಳ್ಳುತ್ತಿದ್ದು, ಇದೇ 26ರಂದು ಮಧ್ಯಾಹ್ನ 2ಗಂಟೆಗೆ ಬಿ.ಸಿ.ರೋಡಿನಿಂದ ಕೊಡಿಮರವನ್ನು ಭವ್ಯ ಮೆರವಣಿಗೆ ಮೂಲಕ ಕ್ಷೇತ್ರಕ್ಕೆ ತರಲಾಗುವುದು ಎಂದು ಜೀರ್ಣೋದ್ಧಾರ ಸಮಿತಿ ಕಾರ್ಯಾಧ್ಯಕ್ಷ ಜಗನ್ನಾಥ ಚೌಟ ಬದಿಗುಡ್ಡೆ ಹೇಳಿದರು.














