ಬಂಟ್ವಾಳ: ಬಂಟ್ವಾಳ ತಾಲೂಕಿನ ಕಳ್ಳಿಗೆ ಗ್ರಾಮದ ಕಲ್ಪನೆ ಜಂಕ್ಷನ್ ನಲ್ಲಿ ನಿರ್ಮಾಣಗೊಳ್ಳಲಿರುವ ಪಚ್ಚಿನಡ್ಕ ದಿ. ಕೆ.ಸೇಸಪ್ಪ ಕೋಟ್ಯಾನ್ ಸ್ಮಾರಕ ವೃತ್ತಕ್ಕೆ ನಿರ್ಮಾಣ ಸಮಿತಿಯ ಗೌರವಾಧ್ಯಕ್ಷ ಮಾಜಿ ಸಚಿವ ರಮಾನಾಥ ರೈ ಶಿಲಾನ್ಯಾಸ ನೆರವೇರಿಸಲಾಯಿತು.
ಈ ಸಂದರ್ಭದಲ್ಲಿ ಸ್ಮಾರಕ ವೃತ್ತ ನಿರ್ಮಾಣ ಸಮಿತಿಯ ಗೌರವ ಸಲಹೆಗಾರ ಫಾದರ್ ಅರುಣ್ ಪಿಂಟೋ, ಸಮಿತಿಯ ಅಧ್ಯಕ್ಷ ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ಸಂಚಾಲಕರಾದ ಸದಾನಂದ ಶೆಟ್ಟಿ ರಂಗೋಲಿ, ಬೇಬಿ ಕುಂದರ್ ಬಂಟ್ವಾಳ ಹಾಗೂ ಸಮಿತಿಯ ಪದಾಧಿಕಾರಿಗಳಾದ ಡಿ.ಚಂದ್ರಶೇಖರ ಭಂಡಾರಿ, ಶಿವಪ್ರಸಾದ್ ಕನಪಾಡಿ, ಇಬ್ರಾಹೀಂ ನವಾಝ್ ಬಡಕಬೈಲು, ಗುತ್ತಿಗೆದಾರ ದಿವಾಕರ್, ಕಳ್ಳಿಗೆ ಗ್ರಾ.ಪಂ.ಅಧ್ಯಕ್ಷ ಪುರುಷೋತ್ತಮ್ ಕೊಟ್ಟಾರಿ, ಅಮ್ಟಾಡಿ ಗ್ರಾ ಪಂ ಅಧ್ಯಕ್ಷ ವಿಜಯ್, ಕಳ್ಳಿಗೆ
ಗ್ರಾ.ಪಂ.ಸದಸ್ಯ ವಿಜಯ ಡಿಸೋಜ, ತುಂಬೆ ಗ್ರಾ ಪಂ ಉಪಾಧ್ಯಕ್ಷ ಗಣೇಶ್ ಸಾಲಿಯಾನ್, ಗ್ರಾ ಪಂ ಸದಸ್ಯ ಪ್ರವೀಣ್ ತುಂಬೆ, ಪ್ರಮುಖರಾದ ಕೆ.ಪಿ ಶೆಟ್ಟಿ, ದಿವಂಗತ ಸೇಸಪ್ಪ ಕೋಟ್ಯಾನ್ ರವರ ಪುತ್ರ ಭುವನೇಶ್ ಪಚ್ಚಿನಡ್ಕ ಹಾಗೂ ಕುಟುಂಬಸ್ಥರು, ಮಲ್ಲಿಕಾ ವಿ. ಶೆಟ್ಟಿ, ಜಯಂತಿ ಪೂಜಾರಿ, ಚಂದ್ರಹಾಸ ಪಲ್ಲಿಪಾಡಿ, ಕಮಲಾಕ್ಷ ಧನುಪೂಜೆ ಮತ್ತು ಕಲ್ಪನೆ ಆಟೋರಿಕ್ಷಾ ಚಾಲಕ ಮತ್ತು ಮಾಲಕರ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.














