ಉಡುಪಿ : ಕೊಲ್ಕತ್ತ ವೈದ್ಯೆಯ ಸಾಮೂಹಿಕ ಅತ್ಯಾಚಾರ ಬೆನ್ನಲ್ಲೇ ಉಡುಪಿಯಲ್ಲಿ ಮತ್ತೊಂದು ಸಾಮೂಹಿಕ ಅತ್ಯಾಚಾರ ನಡೆದಿರುವುದು ಬೆಳಕಿಗೆ ಬಂದಿದೆ. ಹಿಂದೂ ಯುವತಿಯನ್ನ ಪುಸಲಾಯಿಸಿ ನಿರ್ಜನ ಸ್ಥಳಕ್ಕೆ ಕರೆಸಿಕೊಂಡು ಅನ್ಯಕೋಮಿನ ಯುವಕರು ಸಾಮೂಹಿಕ ಅತ್ಯಾಚಾರ ಮಾಡಿದ ಘಟನೆ ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ನಡೆದಿದೆ.
ಅತ್ಯಾಚಾರ ಬಳಿಕ ನಿತ್ರಾಣಗೊಂಡಿದ್ದ ಯುವತಿಯನ್ನ ಮನೆ ಸಮೀಪದಲ್ಲಿ ಬಿಟ್ಟು ಪರಾರಿಯಾಗಿದ್ದ ಆರೋಪಿಗಳು. ವಿಷಯ ತಿಳಿಯುತ್ತಿದ್ದಂತೆ ಹಿಂದೂ ಪರ ಕಾರ್ಯಕರ್ತರು ಜಮಾಯಿಸಿದ್ದಾರೆ. ಇದು ಸಾಮೂಹಿಕ ಅತ್ಯಾಚಾರವಾಗಿದ್ದು ಕೂಡಲೇ ಆರೋಪಿಗಳನ್ನು ಬಂಧಿಸುವಂತೆ ಠಾಣೆಗೆ ಹೋಗಿದ್ದ ಹಿಂದೂ ಕಾರ್ಯಕರ್ತರು. ಸದ್ಯ ಪೋಷಕರು ಹೇಳಿಕೆಯಂತೆ ಅತ್ಯಾಚಾರ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಓರ್ವನನ್ನು ಬಂಧಿಸಿದ್ದಾರೆ.
ಪೊಲೀಸರು ಹೇಳೋದೇನು?
ಹಿಂದೂ ಯುವತಿಯ ಮೇಲೆ ನಡೆದಿರುವ ಸಾಮೂಹಿಕ ಅತ್ಯಾಚಾರ ಕುರಿತಂತೆ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ ಅರುಣ್ ಕುಮಾರ ಮಾತನಾಡಿದ್ದು, ಕರ್ಕಾಳ ಠಾಣಾ ವ್ಯಾಪ್ತಿಯಲ್ಲಿ ಯುವತಿಯನ್ನ ಅಪಹರಿಸಿ ಅತ್ಯಾಚಾರ ಮಾಡಿರುವ ಬಗ್ಗೆ ದೂರು ಬಂದಿದೆ.
ಯುವತಿಗೆ ಅರೋಪಿ ಮೂರು ತಿಂಗಳಿಂದ ಇನ್ಸ್ಟಗ್ರಾಮ್ ಮೂಲಕ ಪರಿಚಯವಿತ್ತು. ಶುಕ್ರವಾರ ಆರೋಪಿ ಅಲ್ತಾಫ್ ಕರೆ ಮಾಡಿ ಸಂತ್ರಸ್ತೆಗೆ ಬರಲು ಹೇಳಿದ್ದ. ಆಕೆ ಬಂದಾಗ ಅಲ್ಲಿಂದ ಅಪಹರಿಸಿದ್ದ ಆರೋಪಿ ಮದ್ಯದಲ್ಲಿ ಏನನ್ನೋ ಬೆರೆಸಿ ಅತ್ಯಾಚಾರ ಮಾಡಿದ್ದಾನೆ ಎಂದು ಸಂತ್ರಸ್ತೆ ತಿಳಿಸಿದ್ದಾಳೆ. ಸದ್ಯ ಸಂತ್ರಸ್ತೆ ಹೇಳಿಕೆ ಆಧರಿಸಿ ಆರೋಪಿ ಅಲ್ತಾಫ್ನನ್ನು ಬಂಧಿಸಲಾಗಿದೆ. ಆರೋಪಿಗೆ ಬಿಯರ್ ಬಾಟಲ್ ತಂದುಕೊಟ್ಟಿದ್ದ ಇಬ್ಬರ ಪೈಕಿ ಸುಬೇರ್ ಎಂಬಾತನನ್ನು ಬಂಧಿಸಲಾಗಿದೆ. ಕೃತ್ಯಕ್ಕೆ ಬಳಸಿದ ವಾಹನ ಸೀಜ್ ಮಾಡಲಾಗಿದೆ. ಸಂತ್ರಸ್ತೆಗೆ ಮಣಿಪಾಲ್ ಕೆಎಂಸಿಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಸಂಬಂಧ ಕಾನೂನು ಕ್ರಮ ಜರುಗಿಸಲಾಗುವುದು ಎಂದಿದ್ದಾರೆ.















