ಬಂಟ್ವಾಳ:ಇಲ್ಲಿನ ಅರಳ ಗ್ರಾಮದ ಗುಡ್ಡೆಯಂಗಡಿ ಓಂ ಜನಹಿತಾಯ ಆಂಗ್ಲ ಮಾಧ್ಯಮ ಶಾಲೆ ವಿದ್ಯಾರ್ಥಿಗಳ ತಂಡವು ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಸಮಗ್ರ ಪ್ರಶಸ್ತಿ ಗೆದ್ದುಕೊಂಡಿದೆ.
ಸಿದ್ಧಕಟ್ಟೆ ಗುಣಶ್ರೀ ವಿದ್ಯಾಲಯದಲ್ಲಿ ಈಚೆಗೆ ನಡೆದ ವಾಮದಪದವು ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಒಂದು
ಪ್ರಥಮ, ತಲಾ ನಾಲ್ಕು ದ್ವಿತೀಯ ಮತ್ತು ತೃತೀಯ ಬಹುಮಾನ ಗಳಿಸುವ ಮೂಲಕಸಮಗ್ರ ಪ್ರಶಸ್ತಿಗೆದ್ದುಕೊಂಡಿರುವುದಾಗಿ ಪ್ರಕಟಣೆ ತಿಳಿಸಿದೆ.















