ಬೆಂಗಳೂರು:ಹಿರಿಯ ಸಾಹಿತಿ ಕನ್ನಡ ಸಾರಸ್ವತ ಲೋಕದ ಪ್ರಖ್ಯಾತ ಕಾದಂಬರಿಕಾರ, ಪದ್ಮಭೂಷಣ ಪ್ರಶಸ್ತಿ ಪುರಸ್ಕೃತ ಎಸ್ .ಎಲ್. ಭೈರಪ್ಪ ಬುಧವಾರ(ಸೆ24) ಮಧ್ಯಾಹ್ನ ಖಾಸಗಿ ಆಸ್ಪತೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಅವರಿಗೆ 94 ವರ್ಷ ಪ್ರಾಯವಾಗಿತ್ತು.
ಭಾರತೀಯ ಕಾದಂಬರಿಕಾರ, ತತ್ವಜ್ಞಾನಿ ಮತ್ತು ಚಿತ್ರಕಥೆಗಾರ ಅವರ ಕೃತಿಗಳು ಕರ್ನಾಟಕ ರಾಜ್ಯದಲ್ಲಿ
ಜನಪ್ರಿಯವಾಗಿವೆ ಮತ್ತು ಅವರನ್ನು ಆಧುನಿಕ ಭಾರತದ ಜನಪ್ರಿಯ ಕಾದಂಬರಿಕಾರರಲ್ಲಿ ಒಬ್ಬರೆಂದು ಪರಿಗಣಿಸಲಾಗಿದೆ.















