Coastal Bulletin

ಬಂಟ್ವಾಳ :ಬಡಗಬೆಳ್ಳೂರು ನಿವಾಸಿ ಬಿಜೆಪಿ ಅಮ್ಟಾಡಿ ಮಹಾಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿ ಪ್ರಕಾಶ್ ಬೆಳ್ಳೂರು ಇವರ ಮೇಲೆ ನಿತಿನ್ ಬಡಗಬೆಳ್ಳೂರು, ನಿಶಾಂತ್ ಬಡಗಬೆಳ್ಳೂರು,ಪವನ್ ಕುಮ್ಡೇಲ್ ಹಾಗೂ ಇನ್ನಿತರರು ಮಂಗಳವಾರ ಸಂಜೆ ಮನೆಗೆ ನುಗ್ಗಿ, ತಲವಾರಿನಿಂದ ಮಾರಣಾಂತಿಕ ದಾಳಿ ನಡೆಸಿ ಕೊಲೆಯತ್ನ ನಡೆಸಿದ್ದಾರೆ.

ಇವರನ್ನು ತಡೆಯಲು ಬಂದ ತಾಯಿ ಮತ್ತು ಅಣ್ಣನಿಗೆ ಕೊಲೆ ಬೆದರಿಕೆ ಹಾಕಿದ್ದಾರೆ ಗಲಭೆಯ ಸಂದರ್ಭ ಜನ

ಸೇರಿದನ್ನು ಕಂಡು ಆರೋಪಿಗಳು ಪರಾರಿಯಾಗಿದ್ದು ಮಾರಣಾಂತಿಕ ದಾಳಿಗೊಳಗಾದ ಪ್ರಕಾಶ್ ಬೆಳ್ಳೂರು ಬಂಟ್ವಾಳ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Leave a Comment