ಬಂಟ್ವಾಳ: ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಆಯಾ ತಹಸೀಲ್ದಾರ್ ಗಳು ತಮ್ಮ ವ್ಯಾಪ್ತಿಯಲ್ಲಿ ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸುತ್ತಿದ್ದಾರೆ. ಈಗಾಗೇ ಮಂಗಳೂರು, ಉಳ್ಳಾಲ, ಪುತ್ತೂರು ತಾಲೂಕುಗಳಲ್ಲಿ ರಜೆ ಘೋಷಿಸಿದ್ದು, ಬಂಟ್ವಾಳ ತಾಲೂಕಿನ ಎಲ್ಲ ಅಂಗನವಾಡಿ, ಶಾಲೆ, ಹೈಸ್ಕೂಲು ಹಾಗೂ ಪದವಿಪೂರ್ವ ಕಾಲೇಜುಗಳಿಗೆ ಪಿಯುಸಿವರೆಗೆ ರಜೆ ಘೋಷಿಸಲಾಗಿದೆ.















