Coastal Bulletin

ಬಂಟ್ವಾಳ ತಾಲೂಕಿನ ವಗ್ಗ ರಾಷ್ಟ್ರೀಯ ಹೆದ್ದಾರಿ ಸಮೀಪದ ಕಾಡಬೆಟ್ಟು ಗ್ರಾಮ ಪಿಲಿಂಗಾಲು ಶ್ರೀ ಗಾಯತ್ರಿ ದೇವಿ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ ಪ್ರಯುಕ್ತ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸದಸ್ಯರು ಮತ್ತು ಸ್ಥಳೀಯ ಭಕ್ತರು ಭಾನುವಾರ ಶ್ರಮದಾನ ನಡೆಸಿದರು.

ಈ ಸಂದರ್ಭದಲ್ಲಿ ಕ್ಷೇತ್ರದ ಆಡಳಿತ ಧರ್ಮದರ್ಶಿ ಕೆ.ಎಸ್.ಪಂಡಿತ್, ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಎಂ.ತುಂಗಪ್ಪ ಬಂಗೇರ, ಉಪಾಧ್ಯಕ್ಷರಾದ ಎಂ.ಬೂಬ ಸಪಲ್ಯ, ಪುರುಷೋತ್ತಮ ಶೆಟ್ಟಿ ಬಾರೆಕ್ಕಿನಡೆ, ಕೆ.ಬಾಬು

ಸಪಲ್ಯ, ಪ್ರಧಾನ ಕಾರ್ಯದರ್ಶಿ ಮೋಹನ್ ಕೆ.ಶ್ರೀಯಾನ್ ರಾಯಿ, ಕೋಶಾಧಿಕಾರಿ ಅಭಿಷೇಕ್ ಪಿಲಿಂಗಾಲು, ಹರೀಶ ಪಿಲಿಂಗಾಲು, ಯೋಜನೆ ಮೇಲ್ವಿಚಾರಕಿ ರೇಖಾ ಕಾಡಬೆಟ್ಟು, ವಲಯಾಧ್ಯಕ್ಷ ಉಮೇಶ್ ಮತ್ತಿತರರು ಇದ್ದರು.

Leave a Comment