ಯುವತಿಯನ್ನು ಪ್ರೀತಿಸುವ ನಾಟಕವಾಡಿ ,ಆಕೆ ಜೊತೆ ದೈಹಿಕ ಸಂಪರ್ಕ ಮಾಡಿ ಆಕೆಯ ಸಾವಿಗೆ ಕಾರಣವಾದ ಅಜೀಜ್ ನನ್ನು ಕುಂದಾಪುರದ ಪೋಲಿಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಕೆಲವರ್ಷಗಳ ಹಿಂದೆ ಟ್ಯುಟೋರಿಯಲ್ ನಲ್ಲಿ 10 ನೇ ತರಗತಿ ಕಲಿಯುತ್ತಿದ್ದಾಗ ಅಜೀಜ್ ಎಂಬಾತನ ಪರಿಚಯ ಪ್ರೀತಿಗೆ ತಿರುಗಿತು. ಅಜೀಜ್ ಗೆ ಈ ಮೊದಲೇ ಸಲ್ಮಾ ಎಂಬಾಕೆಯೊಂದಿಗೆ ಮದುವೆಯಾಗಿತ್ತು. ಆತನಿಗೊಂದು ಮಗು ಕೂಡ ಇದೆ. ಇಷ್ಟಾದರೂ ಶಿಲ್ಪಾಳನ್ನು ಮದುವೆಯಾಗುವುದಾಗಿ ನಂಬಿಸಿ ಅಜೀಜ್ ಮೋಸ ಮಾಡಿದ್ದ. ಆಕೆಯೊಂದಿಗೆ ದೈಹಿಕ ಸಂಪರ್ಕ ಬೆಳೆಸಿದ್ದ. ಆತ ಕರೆದಾಗಲೆಲ್ಲ ಶಿಲ್ಪಾ ಆತ ವಾಸವಿರುವ ಕೋಟೇಶ್ವರದ ಫ್ಲ್ಯಾಟಿಗೆ ಹೋಗಿ ಬರುತ್ತಿದ್ದಳು.
ಅಜೀಜ್ ಮತ್ತು ಶಿಲ್ಪಾ ಕಳೆದ ನಾಲ್ಕೈದು ವರ್ಷದಿಂದ
ಒಡನಾಟ ಹೊಂದಿದ್ದರು. ಆದರೆ ಇತ್ತೀಚೆಗೆ ಅಜೀಜ್ ಶಿಲ್ಪಾಳನ್ನು ದೂರ ಮಾಡಿದ್ದ. ಕೆಲಸ ಮಾಡುವ ಬಟ್ಟೆ ಅಂಗಡಿಯ ಬಳಿ ಬಂದು ತನ್ನಿಂದ ದೂರವಾಗುವಂತೆ ಹೇಳಿದ್ದ. ನೀನು ಸತ್ತೇ ಹೋಗು ನನಗೆ ನೀನು ಬೇಡ ಎಂದು ಹೇಳಿ ಬ್ಲಾಕ್ ಮೇಲ್ ಕೂಡ ಮಾಡಿದ್ದ. ಇದರಿಂದ ಮನನೊಂದ ಶಿಲ್ಪಾ ಆತ್ಮಹತ್ಯೆಗೆ ಮಾಡಿಕೊಂಡಿದ್ದಳು.
ಘಟನೆ ನಂತರ ತಲೆಮರೆಸಿಕೊಂಡಿದ್ದ ಅಜೀಜ್ ಇದೀಗ ಪೋಲಿಸರ ವಶದಲ್ಲಿದ್ದಾನೆ. ನಾಳೆ ಕುಂದಾಪುರದಲ್ಲಿ ಲವ್ ಜಿಹಾದ್ ಪ್ರಕರಣ ಖಂಡಿಸಿ ಬಜರಂಗದಳ ಪ್ರತಿಭಟನೆಗೆ ಕರೆ ನೀಡಿದ್ದಾರೆ.













