ನೆತ್ತರಕೆರೆ :ನವೋದಯ ಮಿತ್ರ ಕಲಾ ವೃಂದ (ರಿ) ನೂತನ ಅಧ್ಯಕ್ಷರಾಗಿ ಜಗದೀಶ್ ಎನ್ ಆಯ್ಕೆ.

Coastal Bulletin
ನೆತ್ತರಕೆರೆ :ನವೋದಯ ಮಿತ್ರ ಕಲಾ ವೃಂದ (ರಿ) ನೂತನ ಅಧ್ಯಕ್ಷರಾಗಿ ಜಗದೀಶ್ ಎನ್ ಆಯ್ಕೆ.

ಬಂಟ್ವಾಳ :ಪ್ರತಿಷ್ಠಿತ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸಂಸ್ಥೆ, ನವೋದಯ ಮಿತ್ರ ಕಲಾ ವೃಂದ (ರಿ) ನೆತ್ತರಕೆರೆ ಇದರ ವಾರ್ಷಿಕ ಮಹಾಸಭೆಯು ಜೂ 29ರಂದು ಸಂಘದ ಸಭಾಭವನದಲ್ಲಿ ನಡೆದು 2025-26ನೇ ಸಾಲಿಗೆ ನೂತನ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು.

ನೂತನ ಅಧ್ಯಕ್ಷರಾಗಿ ಜಗದೀಶ ಎನ್ ಹಾಗೂ ಪ್ರ. ಕಾರ್ಯದರ್ಶಿಯಾಗಿ ಮಹೇಶ್ ಎನ್ ಸರ್ವಾನುಮತದಿಂದ ಆಯ್ಕೆಯಾದರು.

ಇತರ ಪದಾಧಿಕಾರಿಗಳ ವಿವರ:

ಗೌರವಧ್ಯಕ್ಷ ಪಿ ಸುಬ್ರಹ್ಮಣ್ಯ ರಾವ್, ಸಂಚಾಲಕ ದಾಮೋದರ ಎನ್, ಉಪಾಧ್ಯಕ್ಷ ಸಂತೋಷ್ ಕುಲಾಲ್ ನೆತ್ತರಕೆರೆ, ಕೋಶಧಿಕಾರಿ

ರಂಜಿತ್, ಜೊತೆ ಕಾರ್ಯದರ್ಶಿ ಚಂದ್ರಶೇಖರ್ ಎನ್, ಕ್ರೀಡಾ ಕಾರ್ಯದರ್ಶಿ ಪ್ರವೀಣ್, 

ಸಲಹೆಗಾರರಾಗಿ, ಸುರೇಶ್ ಭಂಡಾರಿ ಅರ್ಬಿ, ಚಂದ್ರಹಾಸ ಎನ್, ಸದಾನಂದ ಎನ್, ಭಾಸ್ಕರ್ ಕುಲಾಲ್, ಸುರೇಶ್ ಎನ್ ಹಾಗೂ ಕಾರ್ಯಕಾರಿ ಸಮಿತಿಗೆ ಸದಸ್ಯರನ್ನು ಆಯ್ಕೆಮಾಡಲಾಯಿತು.

Leave a Comment