ಬಿ ಸಿ ರೋಡ್ :ನಾಳೆ ಜು 30ರಂದು ಬಿ. ರಮಾನಾಥ ರೈ ನೇತೃತ್ವದಲ್ಲಿ ಜನಜಾಗೃತಿ ಅಭಿಯಾನ

Coastal Bulletin
ಬಿ ಸಿ ರೋಡ್ :ನಾಳೆ ಜು 30ರಂದು ಬಿ. ರಮಾನಾಥ ರೈ ನೇತೃತ್ವದಲ್ಲಿ ಜನಜಾಗೃತಿ ಅಭಿಯಾನ

ಬಂಟ್ವಾಳ : ಬಂಟ್ವಾಳ ವಿಧಾನಸಭಾ ಕ್ಷೇತ್ರದ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಹಾಗೂ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್‌ ಮತ್ತು ಬಂಟ್ವಾಳ ಮೂಡಾ ವಲಯ ಕಾಂಗ್ರೆಸ್‌ ಆಶ್ರಯದಲ್ಲಿ ಮಾಜಿ ಸಚಿವ ಬಿ. ರಮಾನಾಥ ರೈ ಯವರ ನೇತೃತ್ವದಲ್ಲಿ ಜನಜಾಗೃತಿ ಅಭಿಯಾನ ಕಾರ್ಯಕ್ರಮದಲ್ಲಿ ಜು.31 ಗುರುವಾರ ಬೆಳಗ್ಗೆ 10.00 ಗಂಟೆಗೆ ಜನಜಾಗೃತಿ ಅಭಿಯಾನ ಕಾರ್ಯಕ್ರಮ ಬಿ.ಸಿ ರೋಡಿನ ರಕ್ತೇಶ್ವರಿ ದೇವಸ್ಥಾನದ ಮುಂಭಾಗ ನಡೆಯಲಿದೆ.

ಕಾರ್ಯಕ್ರಮದಲ್ಲಿ ಕರ್ನಾಟಕ ಪ್ರದೇಶ್ ಕಾಂಗ್ರೆಸ್ ವಕ್ತಾರ ಸುಧೀರ್ ಕುಮಾರ್ ಮುರೊಳ್ಳಿ, ಕರ್ನಾಟಕ ಪ್ರದೇಶ್ ಕಾಂಗ್ರೆಸ್‌

ವಕ್ತಾರ ಎಂ. ಜಿ. ಹೆಗ್ಡೆ ಅವರು ದಿಕ್ಕೂಚಿ ಭಾಷಣ ಮಾಡಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Leave a Comment