ಮಂಗಳೂರು: ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯ ಎಲ್ಲಾ ಶಾಲಾ – ಕಾಲೇಜುಗಳಿಗೆ ಸೆ. 2ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಆದೇಶ ನೀಡಿದ್ದಾರೆ.
ಸೆ.2 ರಂದು ಮಂಗಳೂರು ನಗರದ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯ ಅನೇಕ ಕಡೆಗಳಲ್ಲಿ ಗಣಪತಿ ವಿಗ್ರಹದ ವಿಸರ್ಜನೆಯ ಶೋಭಾಯಾತ್ರೆ
ಕಾರ್ಯಕ್ರಮಗಳು ನಡೆಯುವುದರಿಂದ, ಈ ಸಮಯದಲ್ಲಿ ಹಚ್ಚಿನ ಜನದಟ್ಟಣೆ ಇರುವುದರಿಂದ ರಜೆ ನೀಡಲಾಗಿದೆ ಎಂದು ತಿಳಿದು ಬಂದಿದೆ.
Advertisement